ಕನ್ನಡ ಸಾಹಿತ್ಯದಲ್ಲಿ ಕನಸುಗಳ ಕೊರತೆ


Team Udayavani, Nov 2, 2018, 11:26 AM IST

sahitya.jpg

ಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ಹಲ್ಮಿಡಿ ಶಾಸನದಿಂದ ಇಲ್ಲಿಯವರೆಗೂ ಅತ್ಯದ್ಭುತವಾದ ನೆನಪುಗಳಿವೆ. ಆದರೆ ಈಗ ಅಷ್ಟೇ ತೂಕದ ದೊಡ್ಡ ಕನಸುಗಳ ಕೊರತೆ ಎದ್ದು ಕಾಣುತ್ತಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಕಳವಳ ವ್ಯಕ್ತಪಡಿಸಿದರು.

ಸಪ್ನ ಬುಕ್‌ ಹೌಸ್‌ ಗಾಂಧಿ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ “ಕನ್ನಡ -ಅಂದು -ಇಂದು -ಮುಂದು’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯಕ್ಕೆ ನೆನಪಿನ ಭಾರ ಹೆಚ್ಚಾಗಿದ್ದು, ಕನಸುಗಳ ಕೊರತೆ ಎದ್ದು ಕಾಣುತ್ತಿದೆ ಎಂದರು.

ಪಾಶ್ಚಿಮಾತ್ಯ ಸಾಹಿತ್ಯದ ಪ್ರಭಾವ ಕನ್ನಡ ಸಾಹಿತ್ಯದ ಮೇಲೂ ಬೀರಿದ್ದು, ನವ್ಯಕಾಲಘಟ್ಟದ ಸಾಹಿತ್ಯಗಳನ್ನು ಇಂಗ್ಲಿಷ್‌ ಸಾಹಿತ್ಯ ಹೆಚ್ಚು ಆಕರ್ಷಿಸಿದೆ. ಹೀಗಾಗಿಯೇ ಅವರು ಬ್ರಿಟಿಷ್‌ ಕಾವ್ಯ ಮೀಮಾಂಸೆಯನ್ನು ಕನ್ನಡಕ್ಕೆ ಪರಿಚಯಿಸಿದರು. ಸಾಲದಕ್ಕೆ ಸಾಹಿತ್ಯದಲ್ಲಿ ಪಾಶ್ಚಿಮಾತ್ಯ ಮಾದರಿಗಳನ್ನು ಅನುಸರಿಸಿದರು.

ಆದರೆ, ಪಾಶ್ಚಿಮಾತ್ಯ ಸಾಹಿತ್ಯದಲ್ಲೀಗ ಅನುಸರಿಬೇಕಾದಂತಹ ಯಾವ ಮಾದರಿಗಳು ಕೂಡ ಅವರಿಗೆ ಸಿಗುತ್ತಿಲ್ಲ. ಆ ಹಿನ್ನೆಲೆಯಲ್ಲಿಯೇ ಗಂಡಸರು ಹೆಂಗಸರ ಮೇಲೆ, ಹೆಂಗಸರು ಗಂಡಸರ ಮೇಲೆ “ಮಿ ಟೂ’ ಜತೆ “ಯೂ ಟು’ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ ಎಂದು ಹಾಸ್ಯ ಚಟಾಕಿ ಹಾರಿಸಿದರು.

ನಮ್ಮ ಸಾಹಿತ್ಯದ ಬೇರುಗಳನ್ನು ನಾವೇ ಹುಡುಕಿಕೊಳ್ಳಬೇಕಾಗಿದ್ದು, ಇದರ ಬಹುದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ. ಯುವಕರು ಆಧುನಿಕ ತಂತ್ರಜ್ಞಾನ ಬಳಕೆಯಲ್ಲಿ ಮುಳುಗಿದ್ದು, ಇವರಿಗೆ ಮಾರ್ಗದರ್ಶನ ನೀಡಬೇಕಾಗಿದೆ. ಯುವಕರಿಂದಲೂ ಸಾಹಿತ್ಯದಲ್ಲಿ ಪ್ರಯೋಗಗಳು ನಡೆಯಲಿ ಎಂದು ಆಶಿಸಿದರು.

ಮರಾಠಿಗರಿಂದ ಅಪಪ್ರಚಾರ: ಕವಿ ಪ್ರೊ.ಕೆ.ಎಸ್‌.ನಿಸಾರ್‌ ಅಹಮದ್‌ ಮಾತನಾಡಿ, ನಾಡಿನ ಸೊಗಡು ಉಳಿಸಿಕೊಳ್ಳಲು ನಾವು ಸಂಪೂರ್ಣ ವಿಫ‌ಲವಾಗಿದ್ದೇವೆ. ಗದಗ ಜಿÇÉೆಯಲ್ಲಿ ತಯಾರಿಸುವ ಪಾದರಕ್ಷೆಯನ್ನು ಕೊಲ್ಹಾಪುರ ಚಪ್ಪಲಿ ಎಂದು, ಇಳಕಲ್‌ ಸೀರೆಯನ್ನು ಮಹಾರಾಷ್ಟ್ರದ ಸೀರೆ ಎಂದು ಹೇಳಿಕೊಂಡು ಮರಾಠಿಗರು ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಬೇಕಾದ ಅಗತ್ಯವಿದೆ.

ಪ್ರತಿಯೊಬ್ಬ ಜನಸಾಮಾನ್ಯರಲ್ಲಿ ಕನ್ನಡ ಅಸ್ಮಿತೆ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು. ಕೇಂದ್ರ ಸರ್ಕಾರ ನಿರ್ಮಿಸಿರುವ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಪ್ರತಿಮೆ ಮೇಲೆ ದಕ್ಷಿಣ ಭಾರತದ ಭಾಷೆಗಳಿಗೆ ಸ್ಥಳವೇ ಇಲ್ಲ. ದಕ್ಷಿಣ ಭಾರತದ ಭಾಷೆಯಗಳನ್ನು ಕೇಂದ್ರ ಸರ್ಕಾರ ಅವಗಣನೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಇದೇ ವೇಳೆ ನಡೆದ “ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಕನ್ನಡ -ಕರ್ನಾಟಕ’, “ನವೋದಯ ಕಾಲದ ಕವನಗಳಲ್ಲಿ ಕನ್ನಡ’, “ಕನ್ನಡ ಚಲನಚಿತ್ರ – ನಾಟಕಗಳಲ್ಲಿ ಕನ್ನಡ’, “ಕನ್ನಡ ಮಾಧ್ಯಮ -ಶಿಕ್ಷಣದ ಬಿಕ್ಕಟ್ಟುಗಳು’ ಸೇರಿದಂತೆ ಹಲವು ವಿಚಾರಗೋಷ್ಠಿಗಳು ನಡೆದವು. ಸಪ್ನ ಬುಕ್‌ ಹೌಸ್‌ನ ವ್ಯವಸ್ಥಾಪಕ ನಿರ್ದೇಶಕ ನಿತಿನ್‌ ಶಾ, ದೊಡ್ಡೆಗೌಡ ಉಪಸ್ಥಿತರಿದ್ದರು.

ಐಎಎಸ್‌ ಅಧಿಕಾರಿಗಳಿಂದ ಅಡ್ಡಗಾಲು: ಕನ್ನಡ ಭಾಷೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರತ್ಯೇಕ ಭಾಷಾ ಕಾಯ್ದೆ ಜಾರಿಗೆ ಚಿಂತನೆ ನಡೆಸಲಾಗಿದೆ. ಆದರೆ ಕೆಲ ಐಎಎಸ್‌ ಅಧಿಕಾರಿಗಳು ಇದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪೊ›.ಎಸ್‌.ಜಿ.ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಕೆಲ ಖಾಸಗಿ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ದಂಡ ವಿಧಿಸುವ ನಿಯಮ ಇದ್ದು, ಈ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಠಿಣ ಕಾನೂನು ಜಾರಿಗೆ ತಂದು, ಆರು ತಿಂಗಳಲ್ಲಿ ಕನ್ನಡ ಕಲಿಯುವಂತೆ ಮಾಡಬೇಕು. 
-ಡಾ.ವಸುಂಧರಾ ಭೂಪತಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ 

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-bng

Bengaluru: ರೈಲ್ವೆ ನಿಲ್ದಾಣದಲ್ಲಿ ನಾಯಿ ಮಾಂಸ ಗಲಾಟೆ

5-bng-crime

Bengaluru: ಬಾಡಿಗೆ ಮನೆಯಲಿದ್ದ ಗೆಳತಿಯನ್ನು ಪಿಜಿಗೆ ಕರೆತಂದಿದ್ದಕ್ಕೆ ಯುವತಿ ಹತ್ಯೆ?

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.