ನಗರ ಜಿಲ್ಲೆಯಲ್ಲಿ ಕಸ ವಿಲೇವಾರಿಗೆ ಜಮೀನು ಕೊರತೆ


Team Udayavani, Aug 31, 2019, 3:07 AM IST

nagara-jill

ಬೆಂಗಳೂರು: ತ್ಯಾಜ್ಯ ಮುಕ್ತ ಗ್ರಾಮಗಳನ್ನು ಸೃಷ್ಟಿಸಲು ಪಣ ತೊಟ್ಟಿರುವ ನಗರ ಜಿಲ್ಲಾ ಪಂಚಾಯಿತಿ, ಈಗ ತ್ಯಾಜ್ಯ ವಿಲೇವಾರಿಗೆ ಜಾಗದ ಸಮಸ್ಯೆ ಎದುರಿಸುತ್ತಿದೆ. ಆನೇಕಲ್‌, ದಾಸನಪುರ, ಹೆಸರುಘಟ್ಟ, ಹುರಳಿಚಿಕ್ಕನಹಳ್ಳಿ, ವಡೇರಹಳ್ಳಿ ಸೇರಿ ಹಲವೆಡೆ ಕಸ ವಿಲೇವಾರಿಗೆ ಜಾಗ ಮಂಜೂರಿಗಾಗಿ ನಗರ ಜಿಲ್ಲಾಡಳಿತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಸರ್ಕಾರದಿಂದ ಅನುಮತಿ ಸಿಗದ ಕಾರಣ ಜಾಗ ಗುರುತಿಸಿಯೂ ಪ್ರಯೋಜನ ಇಲ್ಲದಂತಾಗಿದೆ.

ನಗರದಲ್ಲಿ ಪದೇ ಪದೆ ಕಾಣಿಸಿಕೊಳ್ಳುತ್ತಿರುವ ಕಸ ವಿಲೇವಾರಿ ಸಮಸ್ಯೆಯಿಂದ ಉಂಟಾಗುತ್ತಿರುವ ತೊಂದರೆ ಮನಗಂಡಿರುವ ಬೆಂಗಳೂರು ನಗರ ಜಿ.ಪಂ ಮುನ್ನಚ್ಚರಿಕೆ ಕ್ರಮವಾಗಿ ಗ್ರಾ.ಪಂ ಮಟ್ಟದಲ್ಲಿ ವೈಜ್ಞಾನಿಕ ಕಸ ವಿಲೇವಾರಿ ಘಟಕಗಳ ನಿರ್ಮಾಣಕ್ಕೆ ಮುಂದಾಗಿದೆ. ಆದರೆ, ಜಾಗದ ಕೊರತೆ ಎದುರಾಗಿರುವ ಕಾರಣ, ಯೋಜನೆ ಜಾರಿಗೆ ತೊಡಕಾಗಿದೆ.

ನಗರ ಜಿಲ್ಲೆ ವ್ಯಾಪ್ತಿಯಲ್ಲಿ 96 ಗ್ರಾ.ಪಂ.ಗಳಿದ್ದು, ಹಲವು ಪಂಚಾಯಿತಿಗಳಲ್ಲಿ ಸಮರ್ಪಕ ಕಸ ವಿಲೇವಾರಿ ಆಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಈ ಹಿಂದೆ 37 ಗ್ರಾ.ಪಂ.ಗಳಲ್ಲಿ ವೈಜ್ಞಾನಿಕ ಕಸ ವಿಲೇವಾರಿ ಸಂಬಂಧ ಜಾಗ ಗುರುತಿಸಿತ್ತು. ಬೆಂಗಳೂರು ಉತ್ತರ ತಾಲೂಕಿನ ರಾಜಾನುಕುಂಟೆ, ದೊಡ್ಡಜಾಲ, ಚಿಕ್ಕಜಾಲ, ಬೆಟ್ಟಹಲಸೂರು, ಸಿಂಗನಾಯಕನಹಳ್ಳಿ ಮತ್ತು ಶಾಂತಿಪುರದಲ್ಲಿ ಮಾತ್ರ ಕಸ ವಿಲೇವಾರಿಗಾಗಿ ಸರ್ಕಾರ ಭೂಮಿ ಮಂಜೂರು ಮಾಡಿತ್ತು. ಆದರೆ ಇನ್ನೂ 90 ಕಡೆಗಳಲ್ಲಿ ಜಾಗದ ಸಮಸ್ಯೆ ಇದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಾಗ ಗುರುತಿಸುವ ಭರವಸೆ: ಇತ್ತೀಚಿಗೆ ನಡೆದ ಜಿ.ಪಂ ಸಾಮಾನ್ಯ ಸಭೆಯಲ್ಲಿ ಕಸ ವಿಲೇವಾರಿ ಸಮಸ್ಯೆ ಚರ್ಚೆಗೆ ಬಂದಿತ್ತು. ಆ ವೇಳೆ ಸದಸ್ಯರು ಕೆಲವು ಕಡೆಗಳಲ್ಲಿ ಸರ್ಕಾರಿ ಜಾಗವಿದ್ದು, ಅದನ್ನು ಬಳಸಿಕೊಳ್ಳಲು ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದ್ದರು. ಯಾವ ಪ್ರದೇಶಗಳಲ್ಲಿ ಸರ್ಕಾರಿ ಭೂಮಿಯಿದೆ ಎಂಬ ಮಾಹಿತಿ ನೀಡಿದರೆ ತಕ್ಷಣ ಜಾಗ ಗುರುತಿಸಲು ಕ್ರಮಕೈಗೊಳ್ಳುವುದಾಗಿ ಡೀಸಿ ಭರವಸೆ ನೀಡಿದ್ದರು.

ಸ್ವಚ್ಛತಾ ಯೋಜನೆಗಳಿಗೆ ತೊಡಕು: ಘನತ್ಯಾಜ್ಯ ಘಟಕಗಳನ್ನು ತೆರೆದು ಗ್ರಾಮ ಪಂಚಾಯಿತಿಗೆ ಆದಾಯ ತಂದುಕೊಡುವ ಯೋಜನೆಗಳನ್ನು ಜಿಲ್ಲಾಡಳಿತ ರೂಪಿಸಿದೆ. ಆದರೆ ಯೋಜನೆ ಜಾರಿಗೆ ಭೂಮಿ ಬೇಕು. ಶಾಂತಿಪುರ, ಬೆಟ್ಟಹಲಸೂರು, ರಾಜಾನುಕುಂಟೆ, ಚಿಕ್ಕಜಾಲ ಸೇರಿ ಕೆಲವೆಡೆ ಕಸದಿಂದ ರಸ ತೆಗೆಯುವ ಕೆಲಸ ನಡೆದಿದೆ. ಚಿಕ್ಕಜಾಲದಲ್ಲಿ ಕಸದಿಂದ ಸಾವಯವ ಗೊಬ್ಬರ ತಯಾರಿಸುತ್ತಿರುವುದು ಜನರ ಮೆಚ್ಚುಗೆ ಗಳಿಸಿದೆ.

ಇಂತಹ ಯಶಸ್ವಿ ಯೋಜನೆಗಳ ಜಾರಿಗೆ ಭೂಮಿ ಬೇಕಿದ್ದು, ಬೆಂಗಳೂರು ನಗರ ಜಿಲ್ಲೆಯಲ್ಲಿ ಜಾಗದ ಸಮಸ್ಯೆ ಎದುರಾಗಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸ್ವಚ್ಛತಾ ಯೋಜನೆಗಳ ಜಾರಿಗೆ ತೊಡಕಾಗಿದೆ ಎಂದು ನಗರ ಜಿಲ್ಲಾಡಳಿತದ ಸ್ವಚ್ಛಭಾರತ್‌ ವಿಭಾಗದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಮರ್ಪಕ ಕಸ ವಿಲೇವಾರಿಗಾಗಿ ಜಮೀನು ನೀಡುವಂತೆ ಜಿಲ್ಲಾಡಳಿತ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಬಗ್ಗೆ ಜಿ.ಪಂ ಸಾಮಾನ್ಯ ಸಭೆಯಲ್ಲೂ ಚರ್ಚಿಸಿದ್ದು, ಸರ್ಕಾರ ಜಮೀನು ನೀಡುವ ಭರವಸೆ ಇದೆ.
-ಡಾ.ಸಿದ್ದರಾಮಯ್ಯ, ನಗರ ಜಿ.ಪಂ. ಉಪಕಾರ್ಯದರ್ಶಿ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.