ಹೀಗೊಂದು ಲವ್ ಸ್ಟೋರಿ; ಕೆಳಗಿನ ಮನೆ ಆಂಟಿ ಜೊತೆಗೆ ಮೇಲಿನ ಮನೆ ಅಂಕಲ್‌ ಜೂಟ್‌!


Team Udayavani, Jan 21, 2023, 8:57 AM IST

thumb-2

ಬೆಂಗಳೂರು: ಒಂದೇ ಕಟ್ಟಡದ ಕೆಳ ಮನೆಯಲ್ಲಿದ್ದ ಆಂಟಿ ಹಾಗೂ ಮೇಲಿನ ಮನೆಯಲ್ಲಿದ್ದ ಎರಡು ಮಕ್ಕಳ ತಂದೆ ಜತೆಯಾಗಿ ಪರಾರಿಯಾಗಿರುವ ವಿಚಿತ್ರ ಲವ್‌ ಸ್ಟೋರಿ ಜ್ಞಾನಭಾರತೀ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಾರುತಿ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಕೆಳ ಮಹಡಿಯಲ್ಲಿ ವಾಸವಿದ್ದ ಮುಬಾರಕ್‌ (28) ಅವರು ತಮ್ಮ ಪತ್ನಿ ಶಾಜಿಯಾ (22) ನಾಪತ್ತೆಯಾಗಿರುವುದಾಗಿ ಹಾಗೂ ಮೇಲ್ಮನೆಯಲ್ಲಿರುವ ಝೀನತ್‌ (29) ಅವರು ತಮ್ಮ ಪತಿ ಮೊಹಮ್ಮದ್‌ ನವೀದ್‌ (37) ಕಾಣೆಯಾಗಿರುವುದಾಗಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

2022ರ ಡಿ.9ರಂದು ಈ ಘಟನೆ ನಡೆದಿದ್ದು, ತಿಂಗಳಾದರೂ ಇಬ್ಬರ ಬಗ್ಗೆ ಸುಳಿವೂ ಸಿಕ್ಕಿಲ್ಲ. ಪೊಲೀಸರು ಸತತವಾಗಿ ತಾಂತ್ರಿಕ ಕಾರ್ಯಾಚರಣೆ ನಡೆಸುತ್ತಿದ್ದರೂ, ನವೀದ್‌ ಮೊಬೈಲ್‌ ಸ್ವಿಚ್ಡ್ ಆಫ್ ಮಾಡಿಕೊಂಡ ಹಿನ್ನೆಲೆಯಲ್ಲಿ ಪತ್ತೆ ಮಾಡುವುದು ಪೊಲೀಸರಿಗೂ ಸವಾಲಾಗಿದೆ. ಇದೀಗ ತಮ್ಮ ಪತಿ-ಪತ್ನಿಯರನ್ನು ಹುಡುಕಿಕೊಡುವಂತೆ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿಗೂ ದೂರುದಾರರು ಮನವಿ ಮಾಡಿದ್ದಾರೆ.

ಗಂಡನನ್ನು ಹುಡುಕಿಕೊಡಿ: ಅಹಮ್ಮದ್‌ ನವೀದ್‌ನನ್ನು 12 ವರ್ಷಗಳ ಹಿಂದೆ ವಿವಾಹವಾಗಿದ್ದೆ. ನಮಗೆ ಇಬ್ಬರು ಮಕ್ಕಳಿದ್ದು, ಪತಿ ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದು, ಇಬ್ಬರೂ ಚೆನ್ನಾಗಿದ್ದೆವು. ಡಿ.9ರಂದು 6 ಗಂಟೆಗೆ ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಕಾರಿನಲ್ಲಿ ಮನೆಯಿಂದ ಹೊರಟವರು ಇದುವರೆಗೂ ವಾಪಸ್‌ ಬಂದಿಲ್ಲ. ಕುಟುಂಬಸ್ಥರು, ಸ್ನೇಹಿತರಲ್ಲಿ ವಿಚಾರಿಸಿದರೂ ಸುಳಿವು ಸಿಕ್ಕಿಲ್ಲ. ನಾವು ವಾಸಿಸುವ ಕೆಳಗಿನ ಮನೆಯ ಮಹಿಳೆ ಶಾಜಿಯಾ ಜತೆಗೆ ಹೋಗಿರುವ ಸಂಶಯ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಝೀನತ್‌ ಮನವಿ ಮಾಡಿದ್ದಾಳೆ.

ಹೆಂಡತಿಯನ್ನು ಪತ್ತೆ ಮಾಡಿ: ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಅನ್ಯೋನ್ಯವಾಗಿ ವಾಸಿಸುತ್ತಿದ್ದೆವು. ಜೀವನ ನಿರ್ವಹಣೆಗೆ ಸೆಂಟ್ರಿಂಗ್‌ ಕೆಲಸ ಮಾಡಿಕೊಂಡಿದ್ದರೆ, ಪತ್ನಿ ಶಾಜಿಯಾ ಗೃಹಿಣಿ ಯಾಗಿರುತ್ತಾಳೆ. 2022 ಡಿ.8ರಂದು ರಾತ್ರಿ ಎಷ್ಟೊತ್ತಾದರೂ ಮೊಬೈಲ್‌ ನೋಡಿಕೊಂಡು ಇರುತ್ತೀಯಾ ಎಂದು ಬೈದಿದ್ದೆ. ಮರುದಿನ ಡಿ.9ರಂದು ಮುಂಜಾನೆ 5.30ಕ್ಕೆ ಶಾಜಿಯಾಗೆ ಹೇಳಿ ಕೆಲಸಕ್ಕೆ ಹೋಗಿದ್ದೆ. ಬೆಳಗ್ಗೆ 9.30ಕ್ಕೆ ಪತ್ನಿಗೆ ಕರೆ ಮಾಡಿ ಏನು ಮಾಡುತ್ತಿದ್ದಿಯಾ ಎಂದು ವಿಚಾರಿಸಿದಾಗ ಮೊದಲನೇ ಮಗಳಾದ ಐಶಾಳನ್ನು ಶಾಲೆಗೆ ಬಿಡಲು ಹೋಗುತ್ತಿರುವುದಾಗಿ ಹೇಳಿದ್ದಳು.

ಇದನ್ನೂ ಓದಿ:ಜೆಸಿಂಡಾ ಆರ್ಡರ್ನ್ ಪದತ್ಯಾಗ; ಕ್ರಿಸ್ ಹಿಪ್ಕಿನ್ಸ್ ನ್ಯೂಜಿಲೆಂಡ್ ಪ್ರಧಾನಿಯಾಗಿ ನೇಮಕ

10 ಗಂಟೆಗೆ ಮತ್ತೆ ಕರೆ ಮಾಡಿದಾಗ ಮೊಬೈಲ್‌ ಸ್ವಿಚ್ಡ್ ಆಫ್ ಆಗಿತ್ತು. 10.30ಕ್ಕೆ ಮನೆಗೆ ಬಂದು ನೋಡಿದಾಗ ಬಾಗಿಲು ಹಾಕಿತ್ತು. ಇತ್ತ ಮನೆ ಮಾಲೀಕರ ಬಳಿ ಕೀಯನ್ನು ಕೊಟ್ಟು ಪತಿಗೆ ಕೊಡುವಂತೆ ಹೇಳಿ ಶಾಜಿಯಾ ತನ್ನ ಎರಡೂವರೆ ವರ್ಷದ ಮಗಳು ಜ್ಯೂಹಾಳನ್ನು ಕರೆದುಕೊಂಡು ನಾಪತ್ತೆಯಾಗಿರುವುದು ಗೊತ್ತಾಗಿದೆ. ಮೊಬೈಲ್‌ ಮನೆಯಲ್ಲೇ ಬಿಟ್ಟು ಹೋಗಿದ್ದು, ಸಂಬಧಿಕರಲ್ಲಿ ವಿಚಾರಿಸಿದರೂ ಸುಳಿವು ಸಿಕ್ಕಿಲ್ಲ. ಹೀಗಾಗಿ ಹೆಂಡತಿಯನ್ನು ಪತ್ತೆ ಮಾಡಿಕೊಡುವಂತೆ ದೂರಿನಲ್ಲಿ ಮುಬಾರಕ್‌ ಉಲ್ಲೇಖೀಸಿದ್ದಾರೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.