Arrested: ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ; ಜೇಡ್ರಳ್ಳಿ ಕೃಷ್ಣಪ್ಪ ಸೇರಿ ಇಬ್ಬರ ಬಂಧನ
Team Udayavani, Feb 7, 2024, 10:57 AM IST
ಬೆಂಗಳೂರು: ನಕಲಿ ದಾಖಲೆಗಳ ಸೃಷ್ಟಿಸಿ ಹತ್ತಾರು ಜಮೀನುಗಳನ್ನು ದೋಚಲು ಸಂಚು ರೂಪಿಸಿದ ಆರೋಪದ ಮೇಲೆ ಜೇಡರಹಳ್ಳಿ ಕೃಷ್ಣಪ್ಪ ಮತ್ತು ಆತನ ಸಹಚರ ಗೋವಿಂದರಾಜು ಎಂಬಾತನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ಸುಂಕದಕಟ್ಟೆ ನಿವಾಸಿ ಶಂಕರಪ್ಪ ಎಂಬವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಆರೋಪಿ ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಬೆಂಗಳೂರು ಉತ್ತರ ತಾಲೂಕು ಯಶವಂತಪುರ ಹೋಬಳಿ ಹೇರೋಹಳ್ಳಿ ಗ್ರಾಮದ ಸರ್ವೆ ನಂ 23ರಲ್ಲಿ ದೂರುದಾರ ಶಂಕರಪ್ಪ ಅವರ ಕುಟುಂಬಕ್ಕೆ ಸೇರಿದ ಪಿತ್ರಾರ್ಜಿತ 16 ಎಕರೆ 37 ಗುಂಟೆ ಜಮೀನು ಇದೆ. ಈ ಸಂಬಂಧ 1991ರಲ್ಲಿ ಶಂಕರಪ್ಪ ಅವರ ದಾಯಾದಿಯೊಬ್ಬರು ಹೈಕೋರ್ಟ್ನಲ್ಲಿ ಆಸ್ತಿ ಪಾಲು ಕೇಳಿ ದಾವೆ ಹೂಡಿದ್ದು, ಈ ಸಂಬಂಧ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಆರೋಪಿ ಜೇಡರಹಳ್ಳಿ ಕೃಷ್ಣಪ್ಪ ಮತ್ತು ಅವರ ಸಹಚರರು ತಮ್ಮ ಕುಟುಂಬರಸ್ಥರಲ್ಲದ ವ್ಯಕ್ತಿಗಳ ಮೂಲಕ ಆರೋಪಿಗಳು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡು, ನಾಗರಬಾವಿಯ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕ್ರಯ ಪತ್ರ ಮಾಡಿಸಿಕೊಂಡು ವಂಚಿಸಿದ್ದಾರೆ ಎಂದು ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ