ಭೂ ಪರಿವರ್ತನೆ ಸರಳೀಕರಣದಿಂದ ಅಲೆದಾಟ ತಪ್ಪಲಿದೆ: ಆರ್.ವಿ. ದೇಶಪಾಂಡೆ
Team Udayavani, Dec 6, 2018, 6:50 AM IST
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಕೃಷಿ ಬಳಕೆಯಿಂದ ಕೃಷಿಯೇತರ ಬಳಕೆಗೆ ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣಕ್ಕೆ ನಿಯಮಾವಳಿಗೆ ತಿದ್ದುಪಡಿ ತರಲು ತೀರ್ಮಾನ ಕೈಗೊಂಡಿರುವುದರಿಂದ ಅನಗತ್ಯವಾಗಿ ಹಲವಾರು ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ರಾಜ್ಯದಲ್ಲಿ ವಸತಿ, ಮೂಲಸೌಕರ್ಯ, ಉದ್ಯಮ, ಸೌರವಿದ್ಯುತ್, ಪ್ರವಾಸೋದ್ಯಮ ಯೋಜನೆಗಳಿಗೆ ಭೂಮಿಯ ಅಗತ್ಯವಿದೆ. ಆದರೆ, ಭೂ ಪರಿವರ್ತನೆ ಪ್ರಕ್ರಿಯೆ ವಿಳಂಬ ಆಗುತ್ತಿದ್ದರಿಂದ ಸಾಕಷ್ಟು ಸಮಸ್ಯೆ ಉಂಟಾಗುತ್ತಿತ್ತು. ಆದರೆ, ಇದೀಗ ಸಂಪುಟದಲ್ಲಿ ಕೈಗೊಂಡ ತೀರ್ಮಾನದಿಂದ ಇಡೀ ಭೂ ಪರಿವರ್ತನೆ ಪ್ರಕ್ರಿಯೆ ಆನ್ಲೈನ್ ಮೂಲಕ ನಡೆಯಲಿದೆ. ನಾಡ ಕಚೇರಿ, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇೂಯಲ್ಲಿ ಭೂ ಪರಿವರ್ತನೆಗಾಗಿ ಆನ್ಲೈನ್ ಅರ್ಜಿ ಸಲ್ಲಿಸಬಹುದು.ಆರ್ಟಿಸಿ, ಮ್ಯುಟೇಶನ್ ಪತ್ರದ ನಕಲ, ಭಾಗಶಃ ಪರಿವರ್ತನೆಯಾಗಬೇಕಾದರೆ 11 ಇ ಸ್ಕೆಚ್, ಪ್ರಮಾಣಪತ್ರ ನೀಡಿದರೆ ಸಾಕು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!