ಸಣ್ಣ ಮಳೆಗೂ ಬೀಳುವ ದೊಡ್ಡ ಮರ


Team Udayavani, May 17, 2018, 9:48 AM IST

blore-1.jpg

ಬೆಂಗಳೂರು: ಮುಂಗಾರು ಪೂರ್ವ ಮಳೆಗೆ ರಾಜಧಾನಿ ಬೆಂಗಳೂರಿನಲ್ಲಿ ಹತ್ತಾರು ಮರಗಳು ಧರೆಗುರುಳುತ್ತಿರುವುದು ಪರಿಸರ ಪ್ರೇಮಿಗಳ ಆತಂಕಕ್ಕೆ ಕಾರಣವಾಗಿದ್ದು, ಮಳೆಗಾಲದಲ್ಲಿ ಮರಗಳು ಬೀಳದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳಿಗೆ ಪಾಲಿಕೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ. 

ರಾಜಧಾನಿನಲ್ಲಿ ಕಳೆದ ಒಂದೂವರೆ ತಿಂಗಳಿಂದ 60ಕ್ಕೂ ಹೆಚ್ಚು ಬೃಹತ್‌ ಗಾತ್ರದ ಮರಗಳು ಹಾಗೂ 800ಕ್ಕೂ ಹೆಚ್ಚು ಮರದ ಕೊಂಬೆಗಳು ಉರುಳಿದ್ದು, ಹಲವೆಡೆ ವಾಹನಗಳು ಜಖಂಗೊಂಡಿವೆ. ಇದರೊಂದಿಗೆ ರಸ್ತೆಗಳಲ್ಲಿ ಮರಗಳು ಉರುಳಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದ್ದು, ಆ ಹಿನ್ನೆಲೆಯಲ್ಲಿ ಮಳೆಗಾಲ ಆರಂಭವಾಗುವ ಮೊದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಗರದ ಕೇಂದ್ರ ಭಾಗದ ಮಲ್ಲೇಶ್ವರ, ರಾಜಾಜಿನಗರ, ಬಸವನಗುಡಿ, ಬಸವೇಶ್ವರನಗರ, ವೈಯಾಲಿಕಾವಲ್‌, ವಿಜಯನಗರ, ಸಹಕಾರ ನಗರ, ಜೆ.ಪಿ.ಪಾರ್ಕ್‌, ಸಂಜಯ್‌ ನಗರ, ಯಶವಂತಪುರ, ಗೊರಗುಂಟೆಪಾಳ್ಯ, ಕಬ್ಬನ್‌ ಉದ್ಯಾನ ಸೇರಿದಂತೆ ಪ್ರಮುಖ ಭಾಗಗಳಲ್ಲಿ ಹೆಚ್ಚಿನ ಮರಗಳು ಉರುಳಿವೆ.

ಆ ಪೈಕಿ ಗುಲ್‌ಮೊಹರ್‌, ಪೆಲ್ಟೊಫಾರಂ, ಹೊಂಗೆ, ನೀಲಗಿರಿ ಮರಗಳು ಹೆಚ್ಚಿರುವುದು ಕಂಡು ಬಂದಿವೆ. ಕಳೆದ ವರ್ಷದ ಮಳೆಗಾಲದಲ್ಲಿ ನಗರದಲ್ಲಿ 300ಕ್ಕೂ ಹೆಚ್ಚು ಬೃಹತ್‌ ಮರಗಳು ಹಾಗೂ 1500ಕ್ಕೂ ಹೆಚ್ಚು ಮರದ ಕೊಂಬೆಗಳು ಧರೆಗುರುಳಿದ್ದವು. ಇದರೊಂದಿಗೆ ಮಿನರ್ವ ವೃತ್ತದ ಬಳಿ ಮರವೊಂದು ಕಾರಿನ ಮೇಲೆ ಉರುಳಿದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದರು. ಆನಂತರವೂ ಎಚ್ಚೆತ್ತುಕೊಳ್ಳದ ಪಾಲಿಕೆಯ ಅಧಿಕಾರಿಗಳು, ದುರ್ಬಲಗೊಂಡು ಬೀಳುವ ಸ್ಥಿತಿಯಲ್ಲಿರುವ ಮರಗಳ ಪತ್ತೆ ಮುಂದಾಗಿಲ್ಲ ಎಂಬ ದೂರುಗಳು ಕೇಳಿಬರುತ್ತಲೇ ಇವೆ.

ಮರ ಉರುಳಲು ಕಾರಣವೇನು?: ನಗರದಲ್ಲಿರುವ ಮಣ್ಣು ಮರಗಳ ಬೆಳವಣಿಗೆಗೆ ಹೆಚ್ಚು ಅನುಕೂಲಕರವಾಗಿದ್ದರೂ,
ಮರಗಳ ಬುಡದಲ್ಲಿ ಕಾಂಕ್ರಿಟ್‌ ಹಾಕಿರುವುದರಿಂದ ಮರಗಳ ಬೇರುಗಳಿಗೆ ನೀರು ಪೂರೈಕೆಯಾಗುತ್ತಿಲ್ಲ. ಸಮರ್ಪಕವಾಗಿ ನೀರು ಲಭ್ಯವಾಗದ ಹಿನ್ನೆಲೆಯಲ್ಲಿ ಬೇರುಗಳು ದುರ್ಬಲವಾಗುತ್ತಿದ್ದು, ಭೂಮಿಯ ಆಳಕ್ಕೆ ಬೇರು ಬಿಡದೆ, ಮೇಲ್ಪದಲ್ಲಿಯೇ ಹರಡಿಕೊಳ್ಳುತ್ತಿವೆ. ಇದರಿಂದಾಗಿ ಜೋರಾದ ಗಾಳಿ ಅಥವಾ ಮಳೆಯಾದಾಗ ಮರಗಳು ಧರೆಗುರುಳುತ್ತವೆ ಎಂಬುದು ತಜ್ಞರ ಅಭಿಪ್ರಾಯ.

ಸಮೀಕ್ಷೇ ನಡೆಯಲೇ ಇಲ್ಲ 
ಮಳೆಗಾಲದಲ್ಲಿ ಮರಗಳು ಧರೆಗುರುಳಿ ಅನಾಹುತ ಸಂಭವಿಸುವುದ ತಡೆಯಲು ಬಿಬಿಎಂಪಿ ವ್ಯಾಪ್ತಿಯ ಮರಗಳ ಸಮೀಕ್ಷೆ ನಡೆಸಿ, ದುರ್ಬಲಗೊಂಡಿರುವ ಹಾಗೂ ಶಿಥಿಲಾವಸ್ಥೆಯಲ್ಲಿರುವ ಮರಗಳನ್ನು ಗುರುತಿಸಿ ತೆರವುಗೊಳಿಸಲು ಉದ್ದೇಶಿಸಲಾಗಿತ್ತು. ಆದರೆ, ಪಾಲಿಕೆಯ ಅಧಿಕಾರಿಗಳು ಈವರೆಗೆ ಸಮೀಕ್ಷೆ ನಡೆಸದ ಹಿನ್ನೆಲೆಯಲ್ಲಿ ಮರಗಳು ಧರೆಗುರುಳುತ್ತಲೇ ಇವೆ.

ಮರವೊಂದಕ್ಕೆ ಸಾವಿರ ಗಾಯ ನಗರದಲ್ಲಿನ ಪ್ರತಿಯೊಂದು ಮರಕ್ಕೆ ಸಾವಿರಾರು ಗಾಯಗಳನ್ನು ಮಾಡ ಲಾಗಿದೆ.
ಪಾದ ಚಾರಿ ಮಾರ್ಗಗಳಲ್ಲಿ ಮರಗಳಿಗೆ ನೀರು ಹೋಗದಂತೆ ಕಾಂಕ್ರಿಟ್‌ ಹಾಕಲಾಗಿದೆ. ಜತೆಗೆ ಒಳಚರಂಡಿ, ಒಎಫ್ಸಿ, ಟೆಂಡರ್‌ಶ್ಯೂರ್‌ ರಸ್ತೆಗಳು, ಗ್ಯಾಸ್‌ಲೈನ್‌ ಹೀಗೆ ಹತ್ತಾರು ಉದ್ದೇಶಗಳಿಗೆ ಮರದ ಬೇರು ಗಳನ್ನು ಕತ್ತರಿಸಲಾಗಿದ್ದು, ವಿದ್ಯುತ್‌ ತಂತಿ, ಕೇಬಲ್‌, ಹೋರ್ಡಿಂಗ್‌ ಅಳವಡಿಕೆ ಸೇರಿ ದಂತೆ ಇತರೆ ಉದ್ದೇಶಗಳಿಗೆ ಅವ್ಯವಸ್ಥಿತವಾಗಿ ಮರದ
ಕೊಂಬೆಗಳನ್ನು ಕತ್ತರಿಸಲಾಗಿರು ವುದರಿಂದ ಒಂದು ಕಡೆಗೆ ಭಾರದ ಹೆಚ್ಚಿ ಜೋ ರಾಗಿ ಗಾಳಿ ಬೀಸಿದಾಗ ಮರಗಳು ಉರುಳುತ್ತಿವೆ. 

ಮರಗಳ ಬುಡಕ್ಕೆ ಕಾಂಕ್ರಿಟ್‌ ಹಾಕಿ ಮುಚ್ಚುವುದರಿಂದ ನೀರು ಬೇರುಗಳಿಗೆ ತಲುಪದ ಹಿನ್ನೆಲೆಯಲ್ಲಿ ಅವು ಸಡಿಲವಾಗುತ್ತವೆ. ಇದರೊಂದಿಗೆ ಅವೈಜ್ಞಾನಿಕವಾಗಿ ಕೊಂಬೆಗಳನ್ನು ಕತ್ತರಿಸುವುದರಿಂದ ಅಸಮತೋಲನ ಉಂಟಾಗಿ ಗಾಳಿ ಬಂದಾಗ ಬೀಳುತ್ತವೆ. ಪಾಲಿಕೆಯ ಅಧಿಕಾರಿಗಳು ಅಂತಹ ಮರಗಳನ್ನು ಗುರುತಿಸಿ ಅಗತ್ಯ ಕ್ರಮಕ್ಕೆ ಮುಂದಾಗಬೇಕು.
  ಹರಿಣಿ ನಾಗೇಂದ್ರ, ಅಜೀಂ ಪ್ರೇಮ್‌ಜೀ ವಿಶ್ವವಿದ್ಯಾಲಯ ಪ್ರಾಧ್ಯಾಪಕಿ 

ಪಾಲಿಕೆಯ ಅಧಿಕಾರಿಗಳು ಮುಂಗಾರು ಪೂರ್ವ ಹಾಗೂ ಮುಂಗಾರು ನಂತರದಲ್ಲಿ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅದರಂತೆ ದುರ್ಬಲಗೊಂಡಿರುವ, ಒಣಗಿರುವ ಕೊಂಬೆಗಳನ್ನು ತೆರವುಗೊಳಿಸಬೇಕು. ಜತೆಗೆ ಬೇರುಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗಲು ಅವಕಾಶ ಕಲ್ಪಿಸಬೇಕು. ಮರಗಳಿಗೆ ಆಗಿರುವ ಗಾಯಗಳಿಗೆ ಅಗತ್ಯ ಚಿಕಿತ್ಸೆ  ಒದಗಿಸಲು ಮುಂದಾಗಬೇಕು.
  ಡಾ.ಯಲ್ಲಪ್ಪರೆಡ್ಡಿ, ಪರಿಸರವಾದಿ 

ಬಿಬಿಎಂಪಿ ವತಿಯಿಂದ ಈ ಸಾಲಿನಲ್ಲಿ ಮರಗಳ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದ್ದು, ದುರ್ಬಲವಾಗಿರುವ
ಮರಗಳು ಹಾಗೂ ಒಣಗಿದ ಕೊಂಬೆಗಳ ತೆರವು ಕಾರ್ಯಾಚರಣೆಯನ್ನು ಪಾಲಿಕೆಯ ಅರಣ್ಯ ಘಟಕ ಸಿಬ್ಬಂದಿ ನಡೆಸುತ್ತಿದ್ದಾರೆ. ಇದರೊಂದಿಗೆ ಈ ಸಾಲಿನಲ್ಲಿ ಆಳವಾಗಿ ಬೇರು ಬಿಡುವ ಸ್ವದೇಶಿ ಗಿಡಗಳನ್ನು ನೆಡಲು ಉದ್ದೇಶಿಸಲಾಗಿದೆ.
  ಚೋಳರಾಜಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಬಿಬಿಎಂಪಿ

 ವೆಂ.ಸುನೀಲ್‌ ಕುಮಾರ್‌

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.