ಅರ್ಜಿ ಇತ್ಯರ್ಥಕ್ಕೆ ಕೊನೆಯ ಅವಕಾಶ
Team Udayavani, Aug 7, 2018, 6:25 AM IST
ಬೆಂಗಳೂರು: ತಮ್ಮ ವಿರುದ್ಧ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ನಲ್ಲಿ ಸಲ್ಲಿಸಿರುವ ದಾವೆ ರದ್ದುಪಡಿಸುವಂತೆ
ಕೋರಿ ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ರಿಟ್ ಅರ್ಜಿ ಇತ್ಯರ್ಥಕ್ಕೆ ಹೈಕೋರ್ಟ್ ಕೊನೆಯ ಅವಕಾಶ ನಿಗದಿಪಡಿಸಿದೆ.
ಈ ಕುರಿತು 2014ರಲ್ಲಿ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾ.ಜಿ.ಎಸ್ ಪಂಡಿತ್ ಅವರಿದ್ದ ಏಕಸದಸ್ಯ ಪೀಠ ಸೋಮವಾರ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.ಆದರೆ, ಅರ್ಜಿದಾರರ ಪರ ವಕೀಲರು ಗೈರು ಹಾಜರಿದ್ದ ಕಾರಣ ನ್ಯಾಯಪೀಠ, ಅರ್ಜಿಯನ್ನು ಇನ್ನೊಂದು ಬಾರಿ ಮಾತ್ರ ವಿಚಾರಣೆ ನಡೆಸಿ ಇತ್ಯರ್ಥಪಡಿಸಲಾಗುವುದು ಎಂದುಪ್ರತಿವಾದಿಗಳಿಗೆ ಸೂಚಿಸಿ, ಒಂದು ವಾರ ವಿಚಾರಣೆ ಮುಂದೂಡಿತು.
ಶಿವಮೂರ್ತಿ ಮುರುಘಾ ಶರಣರು 1991ರಲ್ಲಿ ಪಡೆದ ಮಠದ ಉತ್ತರಾಧಿ ಕಾರಿ ನಿಯಮಗಳನ್ನು ಉಲ್ಲಂ ಸಿದ್ದಾರೆ. ತಮ್ಮ ಹೆಸರಿನ ಜತೆಗೆ ಶರಣರು ಎಂಬ ಪದ ಸೇರಿಸಿಕೊಂಡು ಮಠದ ಪರಂಪರೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಮಠದ ಸ್ಥಿರಾಸ್ತಿ ಹಾಗೂ ಚರಾಸ್ತಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಲಕ್ಷಾಂತರ ಭಕ್ತರ ನಂಬಿಕೆ ದ್ರೋಹ ಎಸಗಿದ್ದಾರೆ. ಹೀಗಾಗಿ ಅವರು ಮಠದ ಪೀಠಾಧಿಪತಿ ಸ್ಥಾನದಲ್ಲಿ ಮುಂದುವರಿ ಯಲು ಅನರ್ಹರು ಎಂದು ಘೋಷಿಸಬೇಕೆಂದು ಕೋರಿ 2007ರಲ್ಲಿ ವಕೀಲರಾದ ಮಲ್ಲಿಕಾರ್ಜುನ ಹಿರೇಮಠ ಹಾಗೂ ರುದ್ರೇಶ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಲ್ಲಿ ದಾವೆ ಹೂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
COMEDK UGET Result: ಬೆಂಗಳೂರಿನ ಬಾಲಸತ್ಯ ಸರವಣನ್ಗೆ ಫಸ್ಟ್ ರ್ಯಾಂಕ್
Davanagere; ಪೊಲೀಸ್ ಕಸ್ಟಡಿಯಲ್ಲಿದ್ದ ಅರೋಪಿ ಸಾವು: ಭಾರೀ ಹಿಂಸಾಚಾರ
Heavy rain ಮುಂದುವರಿದ ಮಳೆಯಬ್ಬರ: ಸಿಡಿಲಿಗೆ ಒಂದು ಬಲಿ
Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್ ಖರ್ಗೆ
PSI Exam ರಾಜ್ಯದ 402 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್ನಲ್ಲಿ ಪರೀಕ್ಷೆ