ಪ್ರಧಾನಿ ಜನ್ಮದಿನದಂದು ವೃಕ್ಷೋತ್ಸವಕ್ಕೆ ಚಾಲನೆ


Team Udayavani, Sep 18, 2019, 3:07 AM IST

pradhani

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಎಚ್‌ಎಸ್‌ಆರ್‌ ಲೇಔಟ್‌ನ ಅಗರ ಕೆರೆ ಆವರಣದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಶೋಕ ಸಸಿ ನೆಡುವ ಮೂಲಕ “ವೃಕ್ಷೋತ್ಸವ- 2019′ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವೃಕ್ಷೋತ್ಸವ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಯಡಿಯೂರಪ್ಪ, ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನ ವೃಕ್ಷೋತ್ಸವ- 2019ಕ್ಕೆ ಚಾಲನೆ ನೀಡಿರುವುದು ಹೆಮ್ಮೆ ಎನಿಸಿದೆ. ಸಸಿಗಳನ್ನು ನೆಟ್ಟು ಪೋಷಿಸಿ ಮಾನವ ಕುಲದ ಏಳಿಗೆಗೆ ಶ್ರಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಹವಾಮಾನ ಬದಲಾವಣೆಯಂತಹ ಜಾಗತಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು, ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸಲು ರಾಷ್ಟ್ರ ಕೈಗೊಳ್ಳುವ ಪ್ರಯತ್ನಗಳಿಗೆ ರಾಜ್ಯವೂ ಬೆಂಬಲಿಸುತ್ತಿದೆ. ರಾಜ್ಯದ ವೃಕ್ಷ ಹೊದಿಗೆ 1,100 ಚ.ಕಿ.ಮೀ.ಗೆ ಹೆಚ್ಚಳವಾಗಿರುವುದು ಸಂತಸದ ಸಂಗತಿ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ “ಕಾಂಪಾ’ ಯೋಜನೆಯಡಿ 1,350 ಕೋಟಿ ರೂ.ಬಿಡುಗಡೆ ಮಾಡಿರುವುದು ಈ ರೀತಿಯ ಪ್ರಯತ್ನಗಳಿಗೆ ಆನೆ ಬಲ ಬಂದಂತಾಗಿದೆ ಎಂದು ತಿಳಿಸಿದರು.

ಪ್ರಾಚೀನ ಕಾಲದಿಂದಲೂ ನಮ್ಮ ಪೂರ್ವಜರು ಮರಗಿಡಗಳನ್ನು ಆರಾಧಿಸಿ, ಪೂಜಿಸಿ, ಬಳಸುತ್ತಾ ಉತ್ತಮ ಆರೋಗ್ಯ ಪಡೆದುಕೊಳ್ಳುತ್ತಿದ್ದರು ಎಂದರು. ಏಕಬಳಕೆ ಪ್ಲಾಸ್ಟಿಕ್‌ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಹಾಗೂ ಪ್ಲಾಸ್ಟಿಕ್‌ ಬದಲಿಗೆ ಪರ್ಯಾಯ ವಸ್ತುಗಳನ್ನು ತರಲು ಸರ್ಕಾರ ಬದ್ಧ.

ವೃಕ್ಷೋದ್ಯಾನಗಳನ್ನು ರಾಜ್ಯದೆಲ್ಲೆಡೆ ಬೆಳೆಸಿ ರಾಜ್ಯದ ಪರಿಸರ ಸಮತೋಲನ, ವಾಯು ಮಾಲಿನ್ಯ ನಿಯಂತ್ರಣ, ಜೀವ ಸಂಕುಲಗಳ ಬೆಳವಣಿಗೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡಲು ಎಲ್ಲರೂ ಕೈಜೋಡಿಸೋಣ ಎಂದು ಮನವಿ ಮಾಡಿದರು.

ಹೆಕ್ಟೇರ್‌ಗೆ 50,000 ರೂ. ಸಹಾಯಧನ: ವಿಶ್ವ ಬಿದಿರು ದಿನದ ಅಂಗವಾಗಿ ರೈತರ 2,500 ಹೆಕ್ಟೇರ್‌ ಜಮೀನಿನಲ್ಲಿ ಬಿದಿರು ಬೆಳೆಯುವ ಗುರಿ ಹೊಂದಲಾಗಿದೆ. ಇದಕ್ಕಾಗಿ ರೈತರಿಗೆ ಪ್ರತಿ ಹೆಕ್ಟೇರ್‌ಗೆ 50,000 ರೂ. ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಅರಣ್ಯ ಇಲಾಖೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನಾಟಿ ಶ್ರೀಧರ್‌ಮಾತನಾಡಿದರು. ಸಂಸದ ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌, ಶಾಸಕ ಸತೀಶ್‌ ರೆಡ್ಡಿ, ಹಲವು ಪಾಲಿಕೆ ಸದಸ್ಯರು ಇತರರು ಉಪಸ್ಥಿತರಿದ್ದರು.

ನಗರ ಸುತ್ತಮುತ್ತ 15,000 ಎಕರೆ ಅರಣ್ಯ ಭೂಮಿ ಒತ್ತುವರಿ
ಬೆಂಗಳೂರು: ನಗರ ಹಾಗೂ ಸುತ್ತಮುತ್ತ 15,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಬಾಕಿ ಉಳಿದಿರುವ 15,000 ಎಕರೆ ಅರಣ್ಯ ಪ್ರದೇಶವನ್ನಾದರೂ ಸಂರಕ್ಷಿಸಿ ಪರಿಸರಕ್ಕೆ ಪೂರಕವಾಗಿ ರೂಪಿಸಲು ಪ್ರಯತ್ನಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿದರು.

“ವೃಕ್ಷೋತ್ಸವ- 2019’ಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒತ್ತುವರಿದಾರರು ಅರಣ್ಯ ಭೂಮಿ ಜಾಗವನ್ನೂ ಬಿಡುವುದಿಲ್ಲ. ಆ ಜಾಗದಲ್ಲಿ ಹಲವರು ಮನೆ ಕಟ್ಟಿಕೊಂಡು ಬದುಕುತ್ತಿದ್ದು, ಆ ಬಗ್ಗೆ ಮಾತನಾಡಲು ಮುಜುಗರವಾಗುತ್ತದೆ. ಹಾಗಾಗಿ ಒತ್ತುವರಿಯಾಗದ ಪ್ರದೇಶವನ್ನು ಹೇಗೆ ಅಭಿವೃದ್ಧಿಪಡಿಸಿ ಹಸಿರು ವಿಸ್ತರಿಸಬೇಕು ಎಂಬ ಬಗ್ಗೆ ಚಿಂತಿಸಲಾಗುವುದು ಎಂದು ತಿಳಿಸಿದರು.

ಲಾಲ್‌ಬಾಗ್‌, ಕಬ್ಬನ್‌ ಪಾರ್ಕ್‌ ಮಾದರಿಯಲ್ಲಿ ನಗರದ ಸುತ್ತಮುತ್ತ ಅರಣ್ಯ ಪ್ರದೇಶವನ್ನು ಉದ್ಯಾನವಾಗಿ ಅಭಿವೃದ್ಧಿಪಡಿಸುವತ್ತ ಚಿಂತಿಸಲಾಗಿದೆ. ನಗರದ ಎಲ್ಲ ಭಾಗದ ಜನ ಲಾಲ್‌ಬಾಗ್‌ಗೆ ಹೋಗುವ ಬದಲಿಗೆ ತಮ್ಮ ಸುತ್ತಮುತ್ತಲ ಪ್ರದೇಶಕ್ಕೆ ಹೋಗಿ ಕಾಲ ಕಳೆಯುವಂತಹ ವಾತಾವರಣ ನಿರ್ಮಿಸಬೇಕಿದೆ. ಬಿಬಿಎಂಪಿ, ಅರಣ್ಯ ಇಲಾಖೆ ಸಹಯೋಗದಲ್ಲಿ ಯೋಜನೆ ರೂಪಿಸಿ ವಿವರ ನೀಡಲಾಗುವುದು ಎಂದು ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ 400 ಕೆರೆಗಳಿದ್ದು, ಅವುಗಳ ಸಂರಕ್ಷಣೆ, ಪುನರುಜ್ಜೀವನದ ಜತೆಗೆ ಗುಣಮಟ್ಟದ ನೀರಿನ ಸಂಗ್ರಹಕ್ಕೆ ಒತ್ತು ನೀಡಬೇಕಿದೆ. ಅಗರ ಕೆರೆಯಲ್ಲಿ ಜಲಮಂಡಳಿಯು ಕೊಳಚೆ ನೀರು ಸಂಸ್ಕರಣಾ ಘಟಕ ಅಳವಡಿಸಿದ್ದರೂ ನೀರಿನ ಗುಣಮಟ್ಟ ಉತ್ತಮವಾಗಿಲ್ಲ ಎಂದು ಶಾಸಕ ಸತೀಶ್‌ ರೆಡ್ಡಿ ಅವರು ಹೇಳಿದ್ದಾರೆ. ಹಾಗಾಗಿ ಗುಣಮಟ್ಟ ಹೆಚ್ಚಿಸುವ ಜತೆಗೆ ಸಾಮರ್ಥಯ ಹೆಚ್ಚಿಸಿ, ಇಸ್ರೇಲ್‌ ತಂತ್ರಜ್ಞಾನ ಅಳವಡಿಕೆ ಸಂಬಂಧ ಒತ್ತಡ ಹೇರಲಾಗುವುದು ಎಂದು ಹೇಳಿದರು.

ಪ್ರಾಣಿ, ಪಕ್ಷಿಗಳಿಗೆ ಓಟಿಲ್ಲ. ಮನುಷ್ಯರಿಗೆ ಓಟು ಇರುವುದರಿಂದ ನಮ್ಮನ್ನೇ ಆಧಾರಿತವಾಗಿಟ್ಟುಕೊಂಡು ಸಮಾಜ ಕಟ್ಟುತ್ತಿದ್ದೇವೆ. ಮನುಷ್ಯರಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದು, ಪ್ರಕೃತಿಗೆ ಪೂರಕವಾಗಿ ಕೆಲಸ ಮಾಡದಿದ್ದರೆ ಏನೆಲ್ಲಾ ಅಪಾಯವಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿಯವರು ಜಲ ಸಂರಕ್ಷಣೆ ಕಾರ್ಯಕ್ಕೆ 1.5 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದಾರೆ. ಪ್ರಧಾನಿಯವರು ಸ್ವತ್ಛತೆಗೂ ಒತ್ತು ನೀಡುತ್ತಿದ್ದಾರೆ. ಭೂಮಿಗೆ ಹಗುರವಾಗಿ ಪರಿಸರಕ್ಕೆ ಪೂರಕವಾಗಿ ಬದುಕಬೇಕಿದೆ. ಮಾಲಿನ್ಯ ಮಾಡುವ ವ್ಯಕ್ತಿಗಳಾಗದೆ ಮಾಲಿನ್ಯ ತಡೆಯುವ ವ್ಯಕ್ತಿಗಳಾಗಬೇಕಿದೆ. ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸೇವಾ ಸಪ್ತಾಹ ಆಚರಿಸಲಾಗುತ್ತಿದ್ದು, ಬೆಂಗಳೂರನ್ನು ಮಾಲಿನ್ಯರಹಿತ ಇಲ್ಲವೇ ಮಾಲಿನ್ಯ ನಿಯಂತ್ರಿತ ನಗರವಾಗಿ ರೂಪಿಸಲು ಪ್ರಯತ್ನಿಸೋಣ ಎಂದು ಆಶಿಸಿದರು.

ಅರಣ್ಯಗಳು ಜಲಸಂರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸಿವೆ. ನೀರು ಮತ್ತು ಮರಗಳ ನಡುವೆ ಅವಿನಾಭಾವ ಸಂಬಂಧವಿದ್ದು, ನೀರಿಗಾಗಿ ಅರಣ್ಯಗಳನ್ನು ಸಂರಕ್ಷಿಸಿ ಪೋಷಿಸಬೇಕಿದೆ. ಈ ನಿಟ್ಟಿನಲ್ಲಿ ಜಗದ್ಗುರು ಜಗ್ಗಿ ವಾಸುದೇವ್‌ ಅವರ “ಕಾವೇರಿ ಕೂಗು’ ಆಂದೋಲನಕ್ಕೆ ಅರಣ್ಯ ಇಲಾಖೆ ವತಿಯಿಂದ 2 ಕೋಟಿ ಸಸಿಗಳನ್ನು ಕಾವೇರಿ ನದಿ ಪಾತ್ರದಲ್ಲಿ ಮುಂದಿನ ಮಳೆಗಾಲದಲ್ಲಿ ನೆಡಲು ನೀಡಲಾಗುವುದು.
-ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.