ದೇಶದ ಮೊದಲ ಹೈಡ್ರಾಲಿಕ್‌ ಜಿಮ್‌ಗೆ ಚಾಲನೆ


Team Udayavani, Sep 11, 2018, 12:28 PM IST

deshada.jpg

ಬೆಂಗಳೂರು: ಹೈಡ್ರಾಲಿಕ್‌ ವ್ಯವಸ್ಥೆಯಿರುವ ಜಿಮ್‌ ಉಪಕರಣಗಳನ್ನು ಪಾಲಿಕೆ ವ್ಯಾಪ್ತಿಯ ಎಲ್ಲ ಉದ್ಯಾನಗಳಲ್ಲಿ ಅಳವಡಿಸುವ ಕುರಿತು ಚಿಂತನೆ ನಡೆಸುವುದಾಗಿ ಮೇಯರ್‌ ಆರ್‌.ಸಂಪತ್‌ರಾಜ್‌ ಭರವಸೆ ನೀಡಿದ್ದಾರೆ.

ಯಡಿಯೂರು ವಾರ್ಡ್‌ನಲ್ಲಿ ಬಿಬಿಎಂಪಿಯಿಂದ 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ದೇಶದ ಮೊದಲ ಹೈಡ್ರಾಲಿಕ್‌ ವ್ಯಾಯಾಮ ಉಪಕರಣಗಳ ಮಹಾಕಾಯ ವ್ಯಾಯಾಮ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿಯೇ ಮೊದಲ ಬಾರಿಗೆ ಬಿಬಿಎಂಪಿ ವತಿಯಿಂದ ಹೈಡ್ರಾಲಿಕ್‌ ವ್ಯಾಯಾಮ ಉಪಕರಣಗಳ ವ್ಯಾಯಾಮ ಕೇಂದ್ರ ಆರಂಭಿಸಿದ್ದು, ಯುವಕರು, ಹಿರಿಯ ನಾಗರಿಕರು ಹಾಗೂ ಮಹಿಳೆಯರು ಇದರ ಸದುಪಯೋಗ ಪಡೆಯಲು ಮುಂದಾಗಬೇಕು ಎಂದರು. 

ಹೈಡ್ರಾಲಿಕ್‌ ಉಪಕರಣಗಳಿಂದ ಎಲ್ಲ ವಯೋಮಾನದವರಿಗೆ ವ್ಯಾಯಾಮ ಮಾಡಲು ಸುಲಭವಾಗಲಿದೆ. ಹೀಗಾಗಿ ಪಾಲಿಕೆಯ ಉದ್ಯಾನಗಳಲ್ಲಿ ಹೈಡ್ರಾಲಿಕ್‌ ಉಪಕರಣಗಳನ್ನು ಅಳವಡಿಸುವ ಕುರಿತು ಚಿಂತನೆ ನಡೆಸಲಾಗುವುದು. ಜತೆಗೆ ಸಂಜೀವಿನಿ ವನದಲ್ಲಿ ಸೌರ ವಿದ್ಯುತ್‌ ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ಇದೇ ಮಾದರಿಯನ್ನು ಉಳಿದ ಉದ್ಯಾನಗಳಲ್ಲಿಯೂ ಅಳವಡಿಸಿದರೆ ವಿದ್ಯುತ್‌ ಉಳಿತಾಯ ಮಾಡಬಹುದಾಗಿದೆ ಎಂದು ಹೇಳಿದರು. 

ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಮಾತನಾಡಿ, ವಿವಿಧ ಪ್ರಭೇಧಗಳ 1,500ಕ್ಕೂ ಹೆಚ್ಚು ಗಿಡಮೂಲಿಕಾ ಸಸಿಗಳಿರುವ ಯಡಿಯೂರಿನ ಸಂಜೀವಿನಿ ವನದಲ್ಲಿ ಪಾಲಿಕೆ 40 ಲಕ್ಷ ರೂ. ವೆಚ್ಚದಲ್ಲಿ ಹೈಡ್ರಾಲಿಕ್‌ ವ್ಯಾಯಾಮ ಕೇಂದ್ರ ಆರಂಭಿಸಿದ್ದು, 15ವರ್ಷದಿಂದ 90ವರ್ಷ ವಯೋಮಾನದ ಎಲ್ಲರೂ ದೈಹಿಕ ವ್ಯಾಯಾಮ ಮಾಡಬಹುದಾಗಿದೆ ಎಂದರು.

ಹೊಸ ತಂತ್ರಜ್ಞಾನ ಬಳಸಿ ವ್ಯಾಯಾಮ ಕೇಂದ್ರ ಆರಂಭಿಸಲಾಗಿದ್ದು, ಎಲ್ಲಾ ನಾಗರಿಕರ ದೈಹಿಕ ವ್ಯಾಯಾಮಕ್ಕೆ ಉಪಯೋಗವಾಗಿದೆ. ಸಂಜೀವಿನಿ ವನದಲ್ಲಿ ಸುತ್ತಲೂ ಔಷಧ ಸಸ್ಯಗಳಿದ್ದು, ಪರಿಸರ ಸ್ನೇಹಿಯಾಗಿದೆ. ಇಲ್ಲಿ ಯಾರು ಬೇಕಾದರೂ ಬಂದು ವ್ಯಾಯಾಮ ಮಾಡಿಕೊಂಡು ಹೊಗಬಹುದು ಎಂದು ಹೇಳಿದರು.

ಬಿಜೆಪಿ ನಗರ ಜಿಲ್ಲಾ ವಕ್ತಾರ ಎನ್‌.ಆರ್‌.ರಮೇಶ್‌ ಮಾತನಾಡಿ, ವಿಶೇಷವಾಗಿ ಹಿರಿಯ ನಾಗರಿಕರಿಗೆ ಅನುಕೂಲವಾಗಲು ಹೈಡ್ರಾಲಿಕ್‌ ವ್ಯಾಯಾಮ ಉಪಕರಣಗಳನ್ನು ತರಿಸಲಾಗಿದೆ. ವ್ಯಾಯಾಮ ಮಾತ್ರವಲ್ಲದೇ ಯೋಗಕ್ಕೂ ಅನುಕೂಲವಾಗಿದೆ. ಸುತ್ತಲಿನ ನಾಗರಿಕರು ವ್ಯಾಯಾಮ ಕೇಂದ್ರವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಇದೇ ವೇಳೆ 10 ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌, 82 ಹೆಣ್ಣು ಮಕ್ಕಳಿಗೆ 3 ಸಾವಿರ ರೂ. ಟೈಲರಿಂಗ್‌ ತರಬೇತಿಯ ಸಹಾಯಧನ ನೀಡಲಾಯಿತು. ಈ ವೇಳೆ ಪಾಲಿಕೆ ಸದಸ್ಯೆ ಪೂರ್ಣಿಮಾ ರಮೇಶ್‌  ಉಪಸ್ಥಿತರಿದ್ದರು.

ಬಿಬಿಎಂಪಿಯ 198 ವಾರ್ಡ್‌ಗಳಿಗೂ ನಾನು ಮೇಯರ್‌ ಆಗಿದ್ದು, ಪಕ್ಷಾತೀತವಾಗಿ ಕರ್ತವ್ಯ ಮಾಡಬೇಕಿದೆ. ಆದ್ದರಿಂದ ಭಾರತ ಬಂದ್‌ ಇದ್ದರೂ, ಮಹಾಕಾಯ ವ್ಯಾಯಾಮ ಕೇಂದ್ರ ಉದ್ಘಾಟಿಸಲು ಬಂದಿದ್ದೇನೆ. 
-ಆರ್‌.ಸಂಪತ್‌ರಾಜ್‌, ಮೇಯರ್‌

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.