ದೊಡ್ಡಾಲದ ಮರ ಅಭಿವೃದ್ಧಿಗೆ ಚಾಲನೆ
Team Udayavani, Aug 10, 2018, 12:15 PM IST
ಕೆಂಗೇರಿ: ರಾಜ್ಯ ಪ್ರವಾಸೋದ್ಯಮ ಇಲಾಖೆ ನೀಡುವ ಒಂದು ಕೋಟಿ ರೂ. ವಿಶೇಷ ಅನುದಾನ ಬಳಸಿ ದೊಡ್ಡ ಆಲದಮರ ಪ್ರವಾಸಿ ತಾಣದ ಅಬಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದರು.
ಚುಂಚುನಗುಪ್ಪೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಚ್ಚ ಅರಸಯ್ಯನ ಪಾಳ್ಯ, ಕೇತೋಹಳ್ಳಿಯ ಕಾಂಕ್ರೀಟ್ ರಸ್ತೆ ಕಾಮಗಾರಿ ಹಾಗೂ ದೊಡ್ಡ ಆಲದಮರ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳಿಗೆ ಗುರುವಾರ ಭೂಮಿ ಪೂಜೆ ನೇರವೇರಿಸಿ ಮಾತನಾಡಿ, ಅರಣ್ಯ ಕಾಯಿದೆಗೆ ಧಕ್ಕೆ ಬಾರದ ರೀತಿಯಲ್ಲಿ ಮುಖ್ಯ ಪ್ರವೇಶ ದ್ವಾರವನ್ನು ಸುಂದರವಾಗಿ ನಿರ್ಮಿಸಲಾಗುತ್ತಿದೆ. ಜತೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಆಲದಮರದ ಸುತ್ತ ಒಡಾಡಲು ಪಾದಚಾರಿ ಮಾರ್ಗ ನಿರ್ಮಿಸಲಾಗುತ್ತಿದೆ ಎಂದರು.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವಿಜಯ್ಕುಮಾರ್, ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಇಂಜಿನಿಯರ್ ವೆಂಕಟೇಶ್, ತಾ.ಪಂ ಸದಸ್ಯರಾದ ವೆಂಕಟಮ್ಮ, ರೇವಣಸಿದ್ದಯ್ಯ, ಲೋಕೇಶ್, ಗಂಗರೇವಣ್ಣ, ಶಂಭುಲಿಂಗಯ್ಯ, ಕುಮಾರ್, ರಮೇಶ್, ಪುಟ್ಟರಾಜು, ರುದ್ರೇಶ್, ಸೂಲಿವಾರ ಬಸವರಾಜು, ಚೇತನ್, ಮೋಹನ್, ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ