![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಎಸ್ಬಿಐ ಗೃಹಸಾಲ ಉತ್ಸವಕ್ಕೆ ಚಾಲನೆ
Team Udayavani, Aug 19, 2018, 11:59 AM IST
![sbi.jpg](https://www.udayavani.com/wp-content/uploads/2018/08/19/sbi.jpg)
ಬೆಂಗಳೂರು: ಸಾರ್ವಜನಿಕ ಕ್ಷೇತ್ರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಸೇಂಟ್ ಮಾರ್ಕ್ಸ್ ರಸ್ತೆಯ ಸ್ಥಳೀಯ ಕೇಂದ್ರ ಕಚೇರಿ (ಎಲ್ಎಚ್ಒ) ಆವರಣದಲ್ಲಿ ಎರಡು ದಿನಗಳ (ಆ.18 ಮತ್ತು 19ರಂದು) ಗೃಹಸಾಲ ಉತ್ಸವ ಹಮ್ಮಿಕೊಂಡಿದೆ.
ಬ್ಯಾಂಕಿನ ಮುಖ್ಯ ಮಹಾಪ್ರಬಂಧಕ ಅಭಿಜಿತ್ ಮಜುಂದಾರ್ ಅವರು ಗೃಹಸಾಲ ಉತ್ಸವಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಎರಡು ದಿನಗಳ ಈ ಉತ್ಸವದಲ್ಲಿ ಗೃಹ ಸಾಲ ಮಾತ್ರವಲ್ಲದೆ, ವಾಹನ ಹಾಗೂ ಇತರ ಸಾಲಗಳನ್ನು ಸಹ ನೀಡಲಾಗುತ್ತದೆ.
ಅತ್ಯಲ್ಪ ಸಮಯದಲ್ಲಿ ಸ್ಥಳದಲ್ಲೇ ಸಾಲ ಮಂಜೂರು ಮಾಡುವುದು ಉತ್ಸವ ವಿಶೇಷವಾಗಿದೆ. ಹಾಗೇ ಗ್ರಾಹಕರು ಬಡ್ಡಿ ದರದ ಸಹಾಯಧನ ಕೂಡ ಪಡೆಯಲಿದ್ದಾರೆ ಎಂದರು. ಈ ಸಾಲ ಉತ್ಸವ ಎಸ್ಬಿಐ ಬೆಂಗಳೂರು ವೃತ್ತದ ಅತಿ ದೊಡ್ಡ ವಹಿವಾಟು ಪ್ರಕ್ರಿಯೆಯಾಗಿದ್ದು, ಒಂದು ರೀತಿಯಲ್ಲಿ ನಗರದ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸ್ಫೂರ್ತಿಯೂ ಆಗಿದೆ.
ನೋಟು ಅಮಾನ್ಯ, ಜಿಎಸ್ಟಿ ಮತ್ತು ರೆರಾ ಜಾರಿ ನಂತರ ಗ್ರಾಹಕರಲ್ಲಿ ಆಸ್ತಿ ಖರೀದಿ ಬಗ್ಗೆ ನಂಬಿಕೆ ಹೆಚ್ಚಾಗಿದೆ. ಅಲ್ಲದೆ, ರಿಯಲ್ ಎಸ್ಟೇಟ್ ಕ್ಷೇತ್ರವೂ ನಿಯಂತ್ರಣಕ್ಕೆ ಬಂದಿರುವುದರಿಂದ ಸ್ವಂತ ಮನೆ, ಅಪಾರ್ಟ್ಮೆಂಟ್ ಅಥವಾ ಸ್ಥಿರಾಸ್ತಿ ಮೇಲೆ ಹೂಡಿಕೆ ಮಾಡುವವರಿಗೆ ಇದು ಸೂಕ್ತ ಕಾಲವೂ ಆಗಿದೆ. ಕಳೆದ ಬಾರಿ ಆಯೋಜಿಸಿದ್ದ ಗೃಹಸಾಲ ಉತ್ಸವದಲ್ಲಿ 1800ಕ್ಕೂ ಅಧಿಕ ಗ್ರಾಹಕರು ಇದರ ಲಾಭ ಪಡೆದಿದ್ದರು.
ಉತ್ಸವದಲ್ಲಿ ಎಲ್ಲ ರೀತಿ ಮನರಂಜನೆ, ಕಾರ್ ಎಕ್ಸ್ಪೋ, ಫುಡ್ ಕೋರ್ಟ್, ಸಂಗೀತ ಸಂಜೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಹಕರ ವಾಹನಗಳಿಗೆ ಎಸ್ಬಿಐ ಆವರಣದ ಪಕ್ಕದಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಬ್ಯಾಂಕಿನ ಜಿಎಂ (ನೆಟ್ವರ್ಕ್-3) ಮಂಜು ಎಸ್. ಬೊಲಕಣಿ, ಜಿಎಂ ಇನ್ಫಿನಿಟಿ ವ್ಯವಸ್ಥಾಪಕ ನಿರ್ದೇಶಕ ಗುಲಾಂ ಮುಸ್ತಫಾ, ಜಿಎಂ ನೆಟ್ವರ್ಕ್-1 ವಿನ್ಸೆಂಟ್ ಹಾಗೂ ಶೋಭಾ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಸಿಎಚ್ ಶರ್ಮ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.