ಸುಸ್ಥಿರ ಇಂಧನ ಬಳಕೆ ಜಾಗೃತಿ ಅಭಿಯಾನಕ್ಕೆ ಚಾಲನೆ
Team Udayavani, May 26, 2019, 3:04 AM IST
ಬೆಂಗಳೂರು: ಸುಸ್ಥಿರ ಇಂಧನ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸುಶೀಲ್ ರೆಡ್ಡಿ ಎಂಬವರು ಹಮ್ಮಿಕೊಂಡಿರುವ “ದಿ ಸನ್ ಪೆಡಲ್ ರೈಡ್-ಗೋಲ್ಡನ್ ಕ್ವಾಡ್ರಿಲ್ಯಾಟರಲ್’ ಎಂಬ ಅಭಿಯಾನಕ್ಕೆ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಬಸವರಾಜು ಅವರು ಶನಿವಾರ ಚಾಲನೆ ನೀಡಿದರು.
ದೇವರಾಜು ಅರಸು ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದ ಬಿ.ಬಸವರಾಜು ಅವರು, ರಸ್ತೆಗಳಲ್ಲಿ ಸಂಚರಿಸುವ ವಾಹನಗಳು ಉಗುಳುವ ಹೊಗೆ ನೇರವಾಗಿ ದೇಹದೊಳಗೆ ಪ್ರವೇಶಿಸುತ್ತದೆ. ಇದರಿಂದ ನಾನಾ ಕಾಯಿಲೆಗಳು ಬರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ವಾಯು ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಇಂತಹ ಪರಿಸರ ಸ್ನೇಹಿ ವಾಹನಗಳನ್ನು ಬಳಸಬೇಕಾದ ಅನಿವಾರ್ಯತೆಯಿದೆ. ಈ ಮೂಲಕ ಹೊಗೆ ಮುಕ್ತ ಬೆಂಗಳೂರು ನಿರ್ಮಿಸಬೇಕು ಎಂದು ಹೇಳಿದರು.
ವಿದ್ಯುತ್ ಚಾಲಿತ ಆಟೋ ರಿಕ್ಷಾ(ಟುಕ್ ಟುಕ್)ವಾಹನದ ಮೂಲಕ ದೇಶಾದ್ಯಂತ 60 ದಿನಗಳಲ್ಲಿ ಆರು ಸಾವಿರ ಕಿ.ಮೀಟರ್ ಕ್ರಮಿಸಲಿರುವ ಸುಶೀಲ್ ರೆಡ್ಡಿ ಮತ್ತು ತಂಡ ಹೆದ್ದಾರಿಯುದ್ದಕ್ಕೂ ಸುಸ್ಥಿರ ಇಂಧನ, ಚಲನಶೀಲತೆ ಮತ್ತು ಶುದ್ಧ ಗಾಳಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿದೆ. ಈ ರಿಕ್ಷಾವನ್ನು ವೋಲ್ಟಾ ಆಟೋಮೋಟಿವ್ ಇಂಡಿಯಾ ಪ್ರೈವೇಟ್ ಲಿಮಿಟೆಡ್(ನಿಎಐಪಿಎಲ್) ಸಂಸ್ಥೆ ಸಿದ್ಧಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್