ವಕೀಲರು ವೃತ್ತಿ ಧರ್ಮ ಮರೆಯಬೇಡಿ
Team Udayavani, Apr 2, 2019, 5:00 AM IST
ಕೆಂಗೇರಿ: ಯುವ ವಕೀಲರು ವೃತ್ತಿ ಧರ್ಮವನ್ನು ಮರೆಯಬಾರದು ಎಂದು ಹೈಕೋಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹೇಳಿದರು.
ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯ ಕೆಎಲ್ಇ ಕಾನೂನು ಕಾಲೇಜಿನಲ್ಲಿ ಸುರಾನ ಮತ್ತು ಕೆಎಲ್ಇ ಕಾನೂನು ಕಾಲೇಜು ಜಂಟಿಯಾಗಿ ಆಯೋಜಿಸಿದ್ದ “ಒಂದು ರಾಷ್ಟ್ರ ಒಂದು ಚುನಾವಣೆ’ ರಾಷ್ಟ್ರೀಯ ಸಾಂವಿಧಾನಿಕ ಕಾನೂನು ಅಣುಕು ನ್ಯಾಯಾಲಯ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ವಕೀಲರು ಮೊದಲು ತಮ್ಮ ಪಾತ್ರವನ್ನು ತಿಳಿದುಕೊಳ್ಳಬೇಕು. ವಕೀಲರು ಕರ್ತ್ಯವ್ಯ ಮರೆಯಬಾರದು. ನ್ಯಾಯಾಲಯದಲ್ಲಿ ಯುವ ವಕೀಲರು ನೈತಿಕತೆ ಮರೆಯದೆ ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ಕಲ್ಪಿಸುವ, ರಕ್ಷಿಸುವ ಕೆಲಸಗಳನ್ನು ಮಾಡಬೇಕು ಎಂದರು.
ಎನ್ಎಲ್ಎಸ್ಐಯುವಿ ಉಪಕುಲಪತಿ ಡಾ.ಆರ್.ವೆಂಕಟರಾವ್, ಭಾರತ ಸರ್ಕಾರದ ಹೆಚ್ಚವರಿ ಸಾಲಿಸಿಟರ್ ಕೆ.ಪ್ರಭುಲಿಂಗ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡಿದ್ದರು. ಕೆಎಲ್ಇ ಕಾಲೇಜಿನ ಪ್ರಾಂಶುಪಾಲ ಡಾ.ಜೆ.ಎಂ.ಮಲ್ಲಿಕಾರ್ಜುನಯ್ಯ, ಡಾ.ಅನಿತಾ.ಎಂ.ಜೆ, ಹಾಗೂ ಕಾಲೇಜಿನ ಸಿಬ್ಬಂದಿ, ದೇಶದ ವಿವಿಧ ರಾಜ್ಯಗಳ 50ಕ್ಕೂ ಹೆಚ್ಚು ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’