ಆಸ್ತಿ ವಿವರ ಘೋಷಿಸಲು ನಾಯಕರು ಹಿಂದೇಟು
Team Udayavani, Oct 19, 2019, 10:46 AM IST
ಬೆಂಗಳೂರು: ಪ್ರತಿ ವರ್ಷ ತಮ್ಮ ಆಸ್ತಿ ವಿವರಗಳನ್ನು ಘೋಷಿಸಬೇಕಿರುವ ಬಿಬಿಎಂಪಿ ಸದಸ್ಯರು ಹೆಚ್ಚಿನ ಆಸ್ತಿ ವಿವರ ಘೋಷಣೆಗೆ ಆಸಕ್ತಿ ತೋರುತ್ತಿಲ್ಲ.
ಆಸ್ತಿ ವಿವಿರ ಘೋಷಣೆ ಮಾಡದ ಪಾಲಿಕೆ ಸದಸ್ಯರ ಪಟ್ಟಿಯಲ್ಲಿ ಕಾಡು ಗೋಡಿ ವಾರ್ಡ್ ಸದಸ್ಯರಾಗಿ ಮುಂದುವರಿಯುತ್ತಿರುವ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ, ಕೆ.ಆರ್.ಪುರಂ ವಾರ್ಡ್ ಸದಸ್ಯರಾಗಿ ರುವ ಶಾಸಕಿ ಕೆ.ಪೂರ್ಣಿಮಾ, ಮಾಜಿ ಮೇಯರ್ಗಳಾದ ಪದ್ಮಾವತಿ ಮತ್ತು ಸಂಪತ್ ರಾಜ್ ಸೇರಿದಂತೆ ಹಲವು ಸ್ಥಾಯಿ ಸಮಿತಿ ಅಧ್ಯಕ್ಷರ ಹೆಸರುಗಳು ಕಾಣಬಹುದಾಗಿದೆ.
1984ರ ಲೋಕಾಯುಕ್ತ ಕಾಯ್ದೆಗೆ 2010ರಲ್ಲಿ ತಿದ್ದುಪಡಿ ಮಾಡುವುದರ ಮೂಲಕ ಕೇವಲ ಎಂಪಿ, ಎಂಎಲ್ಎ, ಎಂಎಲ್ಸಿ ಮತ್ತು ರಾಜ್ಯಸಭಾ ಸದ್ಯಸರಿಗಿದ್ದ ಆಸ್ತಿ ವಿವರ ಸಲ್ಲಿಕೆ ಕಾನೂನು ಜಿಪಂ,ತಾಪಂ, ನಗರಸಭೆ, ಪುರಸಭೆ, ಪಪಂ ಮತ್ತು ಮಹಾನಗರ ಪಾಲಿಕೆ ಸದಸ್ಯರಿಗೂ ವಿಸ್ತರಣೆ ಮಾಡಲಾಗಿದೆ.
ಈ ಸಂಬಂಧ ಲೋಕಾಯುಕ್ತ ಕೋರ್ಟ್ ಸ್ಪಷ್ಟ ನಿರ್ದೇಶನ ವಿದ್ದರೂ ಬಿಬಿಎಂಪಿ ಪಾಲಿಕೆ ಸದಸ್ಯರು ಮಾತ್ರ ತಲೆ ಕೆಡಿಸಿ ಕೊಂಡಿರಲಿಲ್ಲ. ಬಳಿಕ ಸಾಮಾಜಿಕ ಕಾರ್ಯಕರ್ತ ಎಚ್.ಎಂ. ವೆಂಕಟೇಶ್ ಪಾಲಿಕೆ ಸದಸ್ಯರ ಆಸ್ತಿ ವಿವರ ಸಲ್ಲಿಕೆ ನಿಯಮ ಉಲ್ಲಂ ಘನೆ ಬಗ್ಗೆ 2019ರ ಜೂನ್ ತಿಂಗಳಲ್ಲಿ ಲೋಕಾಯುಕ್ತಗೆ ದೂರು ನೀಡಿದ್ದರು.
ದೂರು ಪರಿಶೀಲನೆ ಬಳಿಕ, ಮೂರುವಾರ ಕಾಲಾವಕಾಶ ನೀಡಿ ಎಲ್ಲಾ ಸದಸ್ಯರು ಕಡ್ಡಾಯವಾಗಿ ಆಸ್ತಿ ವಿವರ ಸಲ್ಲಿಸುವಂತೆ ಜು. 7 ರಂದು ಆದೇಶ ನೀಡಿತ್ತು. ಇಷ್ಟಾದರೂ ಈವ ರೆಗೆ ತಮ್ಮ ಆಸ್ತಿ ವಿವರಗಳನ್ನು ಸಲ್ಲಿ ಸಲು ಪಾಲಿಕೆ ಸದಸ್ಯರು ಮುಂದಾಗುತ್ತಿಲ್ಲ. ಆಸ್ತಿ ವಿವರ ಸಲ್ಲಿಸದ ಪಾಲಿಕೆ ಸದಸ್ಯರ ಪೈಕಿ ಶೇ.70ರಷ್ಟು ಬಿಜೆಪಿ ಸದಸ್ಯರೇ ಇರು ವುದು ಗಮನಾರ್ಹ ವಾಗಿದೆ. ಶೀಘ್ರ ಎಲ್ಲಾ ಜಿಲ್ಲೆಗಳ ಜನ ಪ್ರತಿನಿಧಿಗಳ ಆಸ್ತಿ ವಿವರ ಪಡೆಯು ವಂತೆ ಲೋಕಾಯುಕ್ತ ನ್ಯಾಯಾಲಯ ಜಿಪಂ ಸಿಇಒಗಳಿಗೆ ನಿರ್ದೇಶನ ನೀಡಿದೆ.
-ಲೋಕೇಶ್ ರಾಮ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ