ನಾಯಕರ ಮುನಿಸು: ಗೊಂದಲ ಸೃಷ್ಟಿ


Team Udayavani, Sep 18, 2019, 3:07 AM IST

nayakara

ಬೆಂಗಳೂರು: ಬಿಬಿಎಂಪಿಯಲ್ಲಿ ಕೊನೆಯ ಅವಧಿ ಮೇಯರ್‌, ಉಪಮೇಯರ್‌ ಆಯ್ಕೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹಾಗೂ ಸಚಿವ ಆರ್‌. ಅಶೋಕ್‌ ನಡುವೆ ಮುನಿಸು ಮುಂದುವರಿದಿರುವುದು ಅವರ ಬೆಂಬಲಿಗ ಆಕಾಂಕ್ಷಿಗಳು ಗೊಂದಲಕ್ಕೆ ಸಿಲುಕಿದ್ದಾರೆ. ಇನ್ನೊಂದೆಡೆ ಬೆಂಗಳೂರು ಉಸ್ತುವಾರಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ವಹಿಸಿಕೊಂಡಿರುವುದರಿಂದ ಮೇಯರ್‌, ಉಪಮೇಯರ್‌ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ತೀವ್ರ ಪೈಪೋಟಿ ಸೃಷ್ಟಿಯಾದಂತಾಗಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೂ ಪೂರ್ವದಲ್ಲಿ ನಡೆದ ಬಿರುಸಿನ ಚಟುವಟಿಕೆಗಳಲ್ಲಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಅವರ ಪಾತ್ರ ಮಹತ್ವದ್ದಾಗಿತ್ತು. ಆ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದಲ್ಲಿ ಅವರಿಗೆ ಮಹತ್ವದ ಜವಾಬ್ದಾರಿ ಸಿಗುವ ಮಾತುಗಳು ಕೇಳಿಬಂದಿತ್ತು. ಆದರೆ ನಗರದ ಪ್ರಭಾವಿ ಬಿಜೆಪಿ ನಾಯಕರೆಂದೇ ಬಿಂಬಿತವಾಗಿದ್ದ ಆರ್‌.ಅಶೋಕ್‌ ಅವರನ್ನೂ ಮೀರಿ ಉಪಮುಖ್ಯಮಂತ್ರಿ ಹುದ್ದೆ ಜತೆಗೆ ಎರಡು ಪ್ರಭಾವಿ ಖಾತೆಗಳನ್ನು ಅಶ್ವತ್ಥ ನಾರಾಯಣ ಪಡೆದಿದ್ದು, ಹಲವರ ಹುಬ್ಬೇರುವಂತೆ ಮಾಡಿತ್ತು.

ಬೆಂಗಳೂರಿಗೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೂ ಸಭೆ ನಡೆಸಿ ನಿರ್ಧಾರ ಕೈಗೊಳ್ಳುತ್ತಿರುವ ಅಶ್ವತ್ಥ ನಾರಾಯಣ ಅವರು ನಗರದ ಪ್ರಮುಖ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳುತ್ತಿದ್ದಾರೆ. ಇನ್ನೊಂದೆಡೆ ಆರ್‌.ಅಶೋಕ್‌ ಅವರು ತಮ್ಮ ಕಂದಾಯ ಖಾತೆಗಷ್ಟೇ ಸೀಮಿತವಾಗಿ ಕಾರ್ಯ ನಿರ್ವಹಿಸುತ್ತಿರುವುದು ಕಂಡುಬಂದಿದೆ. ಇದರಿಂದ ಆರ್‌.ಅಶೋಕ್‌, ಅಶ್ವತ್ಥ ನಾರಾಯಣ ಅವರ ಬೆಂಬಲಿಗ ಪಾಲಿಕೆ ಸದಸ್ಯರ ಪೈಕಿ ಮೇಯರ್‌, ಉಪಮೇಯರ್‌ ಸ್ಥಾನದ ಆಕಾಂಕ್ಷಿಗಳಲ್ಲಿ ಗೊಂದಲ ಸೃಷ್ಟಿಯಾಗಿದೆ. ಯಾವ ನಾಯಕರ ಮೊರೆ ಹೋದರೆ ಸ್ಥಾನ ಗಿಟ್ಟಿಸಿಕೊಳ್ಳಬಹುದು ಎಂಬ ಗೊಂದಲಕ್ಕೆ ಸಿಲುಕಿದ್ದು, ತೆರೆಮರೆಯಲ್ಲೇ ಲಾಬಿ ಮುಂದುವರಿಸಿದ್ದಾರೆ.

ಈ ಮಧ್ಯೆ ಮೇಯರ್‌, ಉಪಮೇಯರ್‌ ಅಭ್ಯರ್ಥಿ ಆಯ್ಕೆಯಲ್ಲಿ ತಮ್ಮ ಅಭಿಪ್ರಾಯ, ಸಲಹೆಯನ್ನೂ ಪಡೆಯಬೇಕು ಎಂಬುದು ಬೆಂಗಳೂರಿನ ಅನರ್ಹಗೊಂಡ ಶಾಸಕರ ಒತ್ತಾಯ. ನಗರದಲ್ಲಿ ತಮ್ಮದೇ ಆದ ಪ್ರಭಾವವಿದ್ದು, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದೂ ಅವರು ಪಟ್ಟು ಹಾಕಿದ್ದಾರೆ. ಸದ್ಯದಲ್ಲೇ ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವರಾಜು, ಮುನಿರತ್ನ, ಕೆ.ಗೋಪಾಲಯ್ಯ ಅವರು ಸಭೆ ನಡೆಸಿ ನಂತರ ಸಾಮೂಹಿಕ ಅಭಿಪ್ರಾಯವನ್ನು ಮುಖ್ಯಮಂತ್ರಿಗಳಿಗೆ ತಿಳಿಸುವ ಸಾಧ್ಯತೆ ಇದೆ.

ಸದ್ಯ ಬೆಂಗಳೂರು ಉಸ್ತುವಾರಿಯನ್ನು ಯಡಿಯೂರಪ್ಪ ವಹಿಸಿಕೊಂಡಿರುವುದರಿಂದ ಅನರ್ಹಗೊಂಡ ಶಾಸಕರ ಅಭಿಪ್ರಾಯಕ್ಕೂ ಮನ್ನಣೆ ಸಿಕ್ಕರೆ ತಮಗೆ ಅವಕಾಶ ತಪ್ಪುವ ಆತಂಕ ಇತರೆ ಆಕಾಂಕ್ಷಿಗಳನ್ನು ಚಿಂತೆಗೀಡು ಮಾಡಿದೆ. ಜತೆಗೆ ಆರ್‌.ಅಶೋಕ್‌ ಹಾಗೂ ಅಶ್ವತ್ಥ ನಾರಾಯಣ ಅವರು ಪರಸ್ಪರ ಮುಖಾಮುಖೀಯಾಗುವುದನ್ನು ತಪ್ಪಿಸಿಕೊಳ್ಳುತ್ತಿರುವುದು, ಅಂತರ ಕಾಯ್ದುಕೊಳ್ಳುತ್ತಿರುವುದು ಸಹ ಆಕಾಂಕ್ಷಿಗಳಲ್ಲಿ ತಳಮಳಕ್ಕೆ ಕಾರಣವಾಗಿದೆ.
ಉಭಯ ನಾಯಕರು ತಮ್ಮ ನಡುವೆ ಯಾವುದೇ ಬೇಸರವಿಲ್ಲ ಎಂದು ಹೇಳುತ್ತಿದ್ದರೂ ಒಳಗೊಳಗೇ ಅಸಮಾಧಾನ ತೀವ್ರವಾಗಿರುವುದು ಅವರ ಮಾತುಗಳಲ್ಲೇ ಸ್ಪಷ್ಟವಾಗಿ ಕಾಣುವಂತಿದೆ.

ಬೆಂಗಳೂರು ಉಸ್ತುವಾರಿ ಕೈ ತಪ್ಪಿದ್ದು ದೊಡ್ಡ ವಿಚಾರ ಅಲ್ಲ. ಇದರಲ್ಲಿ ನಮ್ಮಲ್ಲಿ ಗೊಂದಲವೂ ಇಲ್ಲ. ಇದೇ ಬೇಕು ಅನ್ನೋ ಪ್ರವೃತ್ತಿಯೂ ನನ್ನದಲ್ಲ. ಹಿಂದೆಯೂ ನಾನು ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ಕೆಲಸ ಮಾಡುವವರಿಗೆ ಎಲ್ಲಾದರೇನು?
-ಆರ್‌.ಅಶೋಕ್‌, ಕಂದಾಯ ಸಚಿವ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.