ಯುವ ಕಾಂಗ್ರೆಸ್ಸಿಗರಿಗೆ ನಾಯಕತ್ವ ಪಾಠ


Team Udayavani, Jan 20, 2018, 6:45 AM IST

Congress-700.jpg

ಬೆಂಗಳೂರು: ದೆಹಲಿಯ ಜವಾಹರಲಾಲ್‌ ನೆಹರು ನಾಯಕತ್ವ ತರಬೇತಿ ಕೇಂದ್ರದ ಸುರೇಶ್‌ ಶರ್ಮಾ ನೇತೃತ್ವದ 14 ಜನರ ತಂಡ ಕಾಂಗ್ರೆಸ್‌ನ ಯುವ ಘಟಕದ ಪದಾಧಿಕಾರಿಗಳಿಗೆ ರಾಜಕೀಯದಲ್ಲಿ ನಾಯಕತ್ವ ಬೆಳೆಸಿಕೊಳ್ಳುವ ಬಗ್ಗೆ ಉಪನ್ಯಾಸ ನೀಡಿದರು.

ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಯುವ ದೃಷ್ಟಿ ಹೆಸರಿನಲ್ಲಿ ಮೂರು ದಿನಗಳ ನಾಯಕತ್ವ ತರಬೇತಿ ಶಿಬಿರದಲ್ಲಿ ಸುರೇಶ್‌ ಶರ್ಮಾ ಮಾತನಾಡಿ, ಸಾಮಾಜಿಕ ಜಾಲ ತಾಣಗಳ ಮೂಲಕ ರಾಜ್ಯ ಸರ್ಕಾರಸಾಧನೆಗಳನ್ನು ಗುಜರಾತ್‌ ಚುನಾವಣೆಯಲ್ಲಿ ಬಳಸಿಕೊಂಡು ಮತದಾರರನ್ನು ಸೆಳೆಯುವ ಪ್ರಯತ್ನ
ನಡೆಸಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವೇ ಅಧಿಕಾರದಲ್ಲಿರುವುದರಿಂದ ಯುವ ಕಾಂಗ್ರೆಸ್‌ ಘಟಕ ಜನರಿಗೆ ನೇರವಾಗಿ ಯೋಜನೆಗಳ ಬಗ್ಗೆ ಪ್ರಚಾರ ಮಾಡುವ ಮೂಲಕ ಪಕ್ಷದಲ್ಲಿಯೂ ಗುರುತಿಸಿಕೊಳ್ಳಬಹುದು ಎಂದರು.

ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿ,ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೋಶಿಯಲ್‌ ಮೀಡಿಯಾ ಬಳಕೆ ಮಾಡುತ್ತಿದ್ದಾರೆ ಆದರೆ, ಸರ್ಕಾರದ ಸಾಧನೆಗಳನ್ನು ಕೇವಲ ಸೋಶಿಯಲ್‌ ಮೀಡಿಯಾದಲ್ಲಷ್ಟೇ ಅಪ್‌ ಡೇಟ್‌ ಮಾಡಿದರೆ ಸಾಲದು. ಜನರ ಬಳಿಗೆ ತೆರಳಿ ತಿಳಿಸಬೇಕು. ಕಾಂಗ್ರೆಸ್‌ಗೆ ಆಚಾರ-ವಿಚಾರ ಇದೆ. ಆದರೆ, ಪ್ರಚಾರ ಇಲ್ಲ. ಬಿಜೆಪಿಯವರು ಕೆಲಸ ಮಾಡದೇ ಪ್ರಚಾರ ಪಡೆದುಕೊಳ್ಳುತ್ತಾರೆ. ಕಾಂಗ್ರೆಸ್‌ನವರಿಗೆ ಮಾಡಿದ ಕೆಲಸಕ್ಕೂ ಪ್ರಚಾರ
ದೊರೆಯುವುದಿಲ್ಲ. ಅದೂ ಕೂಡ ರಾಜಕಾರಣದಲ್ಲಿ ಮುಖ್ಯ ಎಂದು ತಿಳಿಸಿದರು.

ರಾಜಕೀಯದಲ್ಲಿ ಕೇವಲ ಆಡಳಿತ ಪಕ್ಷದ ಬಗ್ಗೆ ತಿಳಿದುಕೊಂಡರೆ ಸಾಲದು ಪ್ರತಿಪಕ್ಷಗಳ ಲೆಕ್ಕಾಚಾರವನ್ನೂ ಅರಿತುಕೊಳ್ಳುವುದು ಮುಖ್ಯ. ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷದ ನಿಲುವೇನು ? ಬಿಜೆಪಿಯ ನಿಲುವೇನು ? ಎಂಬುದನ್ನು ತಿಳಿದುಕೊಂಡು ಜನರಿಗೆ ಅರಿವು ಮೂಡಿಸಬೇಕು.ಜನರಿಗೆ ಸರ್ಕಾರದ ಯೋಜನೆಗಳನ್ನು ತಿಳಿಸುವ ಮೊದಲು ಯುವಕರು ತಿಳಿದುಕೊಳ್ಳಬೇಕು ಎಂದರು.

ಗುರುವಾರದಿಂದ ಆರಂಭವಾದ ಮೂರು ದಿನದ ಶಿಬಿರದಲ್ಲಿ ನಾಯಕತ್ವಕ್ಕೆ ಸಂಬಂಧಿಸಿದಂತೆ ವಿವಿಧ ಆಯಾಮಗಳಲ್ಲಿ ಕಾಂಗ್ರೆಸ್‌ ಮುಖಂಡರಾದ ಬಿ.ಎಲ್‌. ಶಂಕರ್‌, ಸೂರಜ್‌ ಹೆಗಡೆ, ಸತೀಶ್‌ ಜಾರಕಿಹೊಳಿ ಸೇರಿದಂತೆ ಅನೇಕ ನಾಯಕರು ಬೋಧನೆ ಮಾಡಿದ್ದಾರೆ. ಶನಿವಾರ ಮುಖ್ಯಮಂತ್ರಿ ಕೂಡ ಯುವ ಮುಖಂಡರಿಗೆ ನಾಯಕತ್ವದ ಪಾಠ ಮಾಡಲಿದ್ದಾರೆ.

ಮೂರು ದಿನದ ತರಬೇತಿ ನಂತರ ತಿಂಗಳಾಂತ್ಯದಲ್ಲಿ ವಿಭಾಗ ಮಟ್ಟದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಲ್ಲಿ ಪಾಲ್ಗೊಂಡ ಯುವ ಘಟಕದ ಪದಾಧಿಕಾರಿಗಳು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಯುವಕರಿಗೆ ನಾಯಕತ್ವದ ತರಬೇತಿ ನೀಡಿ, ಅವರ ಮೂಲಕ ಪ್ರತಿ ಬೂತ್‌ ಮಟ್ಟದಲ್ಲೂ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಪ್ರಯತ್ನವನ್ನು ಈ ತರಬೇತಿ ಮೂಲಕ ನಡೆಸಲಾಗುತ್ತಿದೆ.
– ಬಸನಗೌಡ ಬಾದರ್ಲಿ, ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ

ಟಾಪ್ ನ್ಯೂಸ್

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.