ಗಂಗಾನದಿ ಉಳಿವಿಗಾಗಿ ನೇತೃತ್ವ: ಪೇಜಾವರ ಶ್ರೀ
Team Udayavani, Feb 7, 2019, 4:20 AM IST
ಬೆಂಗಳೂರು: ಗಂಗಾನದಿಯ ಉಳಿವಿಗಾಗಿ ಹೋರಾಟದ ನೇತೃತ್ವವನ್ನು ನಾನೇ ವಹಿಸುತ್ತೇನೆ ಎಂದು ಪೇಜಾವರದ ಶ್ರೀವಿಶ್ವೇಶ ತೀರ್ಥರು ಹೇಳಿದರು.
ನಗರದ ಬಾಲಭವನದಲ್ಲಿ ಬುಧವಾರ ಪೂರ್ಣಪ್ರಮತಿ ಶಾಲೆ ಆಯೋಜಿಸಿದ್ದ ಪೂರ್ಣಪ್ರಮತಿ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಗಂಗಾನದಿ ಉಳಿಸುವ ಸಲುವಾಗಿ ಈಗಾಗಲೇ ಮೂವರು ಸ್ವಾಮೀಜಿಗಳು ತಮ್ಮ ಪ್ರಾಣವನ್ನೇ ತೆತ್ತಿದ್ದಾರೆ. ಕೆಲವರು ಹೋರಾಟವನ್ನು ಮುಂದುವರಿಸಿದ್ದಾರೆ. ಗಂಗಾನದಿಯ ರಕ್ಷಣೆಗೆ ಹೋರಾಟದ ನೇತೃತ್ವ ವಹಿಸುವಂತೆ ನನಗೆ ಸಾಕಷ್ಟು ಮಂದಿ ಈ ಹಿಂದೆ ವಿನಂತಿಸಿಕೊಂಡಿದ್ದರು. ಈಗ ಅವರ ಮನವಿಯನ್ನು ಸ್ವೀಕರಿಸಿದ್ದೇನೆ ಎಂದರು.
ಗಂಗಾ ನದಿಗೆ ಅಣೆಕಟ್ಟು ನಿರ್ಮಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, ಗಂಗಾ ನದಿ ನಿರಂತರವಾಗಿ ಹರಿಯುತ್ತಿರಬೇಕು. ಯಾವತ್ತೂ ಅದು ನಿಲ್ಲಬಾರದು. ನಿಂತರೆ ಅಶುದ್ಧವಾಗುತ್ತದೆ. ಹೀಗಾಗಿ ನದಿಗೆ ಅಣೆಕಟ್ಟೆ ಕಟ್ಟುವುದು ಬೇಡ. ಇದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.
ಚುನಾವಣೆಗಾಗಿ ಕೆಲಸ ಮಾಡುತ್ತಾರೆ: ರಾಜಕೀಯ ಮುಖಂಡರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜಕೀಯ ಮುಖಂಡರು ಬರೀ ಚುನಾವಣೆಗೆ ಕೆಲಸ ಮಾಡುತ್ತಾರೆ.ಇಂಥ ಧಾರ್ಮಿಕ ಕಾರ್ಯಗಳಿಗೆ ಗೈರಾಗುತ್ತಾರೆ. ಯಾರೂ ಕೂಡ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಹೋರಾಟ ಕೈಗೊಳ್ಳಬಾರದು. ಅದಕ್ಕೆ ಅವಕಾಶ ಕೊಡಬಾರದು.ಇದಕ್ಕಾಗಿ ಪರ್ಯಾಯ ವ್ಯವಸ್ಥೆ ಕೈಗೊಳ್ಳೋಣ ಎಂದು ನುಡಿದರು.
ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಮಾತನಾಡಿ, ನದಿಗಳಿಗೆ ಅಣೆಕಟ್ಟು ಕಟ್ಟುವುದರಿಂದ ಅನೇಕ ಕಾರ್ಖಾನೆಗಳು ಹುಟ್ಟಿಕೊಳ್ಳಲಿವೆ. ಬಳಿಕ ಅವುಗಳ ಕೊಳಚೆ ನೀರು, ನದಿ ಸೇರಿ ಅನೇಕ ರೀತಿಯ ಕಾಯಿಲೆಗಳಿಗೆ ಕಾರಣವಾಗಲಿದೆ. ಗಂಗಾನದಿ ಪವಿತ್ರ ಸ್ಥಳ ಎಂದು ನಾವೆಲ್ಲರೂ ನಂಬಿದ್ದೇವೆ. ಆದರೆ ಅಣೆಕಟ್ಟು ಕಟ್ಟುವುದರಿಂದ ಆ ನಂಬಿಕೆಗೆ ಧಕ್ಕೆ ಉಂಟಾಗಲಿದೆ ಎಂದರು. ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೊ.ಗೌತಮ್ ಮಾತನಾಡಿ,ನದಿಗೆ ಅಣೆಕಟ್ಟು ಕಟ್ಟಿದರೆ ಹಲವು ರೀತಿಯ ಅಪಾಯಗಳಿಗೆ ಮತ್ತು ಅನಾಹುತಗಳಿಗೆ ಕಾರಣವಾಗಲಿದೆ ಈ ಬಗ್ಗೆ ಎಚ್ಚರದಿಂದಿರಬೇಕು. ನಮ್ಮ ಸುತ್ತಮುತ್ತಲಿನ ಪ್ರಾಣಿಪಕ್ಷಿ ಸಂಕುಲದ ಉಳಿವಿಗೂ ಅವಕಾಶ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು