ಭ್ರಷ್ಟಾಚಾರ ತಡೆಯಲಾಗದಿದ್ದರೆ ಸಚಿವ ಸ್ಥಾನ ಬಿಡಿ


Team Udayavani, Jun 15, 2017, 12:41 PM IST

14BNP-(2).jpg

ವಿಧಾನಸಭೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) 441 ಕೋಟಿ ರೂ. ಆದಾಯ ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ವಿಚಾರದಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಕೇಂದ್ರ ಸರ್ಕಾರ ಮತ್ತು ಕೇಂದ್ರ ಹಣಕಾಸು ಸಚಿವರ ವಿರುದ್ಧ ನೀಡಿರುವ ಹೇಳಿಕೆಗೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.

ಇಲಾಖಾ ಅನುದಾನಗಳ ಬೇಡಿಕೆ ಮೇಲಿನ ಚರ್ಚೆ ವೇಳೆ ಬುಧವಾರ ವಿಷಯ ಪ್ರಸ್ತಾಪಿಸಿದ ಜಗದೀಶ್‌ ಶೆಟ್ಟರ್‌, ವಿಟಿಯು ಹಣವನ್ನು ಆದಾಯ ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದ್ದ ಬಗ್ಗೆ ಸಚಿವ ಬಸವರಾಜ ರಾಯರಡ್ಡಿ ಅವರು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದರು. ಕೇಂದ್ರಕ್ಕೆ ಸಾಮಾನ್ಯ ಜ್ಞಾನವಿಲ್ಲ, ಹಣಕಾಸು ಸಚಿವ ಅರುಣ್‌ ಜೇಟ್ಲಿ  ಅವರ ಅವಕೃಪೆಯಿಂದಾಗಿ ವಿಟಿಯು ಮುಚ್ಚುವ ಹಂತಕ್ಕೆ ತಲುಪಿದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.

ತಕರಾರು ಅರ್ಜಿ ಸಲ್ಲಿಸಿ: ಮಧ್ಯಪ್ರವೇಶಿಸಿದ ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ, “ನಾನು ಉನ್ನತ ಶಿಕ್ಷಣ ಸಚಿವನಾಗಿದ್ದಾಗ ಈ ವಿಚಾರವನ್ನು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರ ಗಮನಕ್ಕೆ ತಂದಿದ್ದೆ. ಈ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯ ಕಾರ್ಯವೈಖರಿ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಅವರು, ಸರ್ಕಾರಿ ವಿವಿಯ ಹಣ ಮುಟ್ಟುಗೋಲು ಹಾಕಿಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದರು. ಅಲ್ಲದೆ, ಈ ಕುರಿತು ನೀವು ಹೈಕೋರ್ಟ್‌ನಲ್ಲಿ ತಕರಾರು ಅರ್ಜಿ ಸಲ್ಲಿಸಿ. ನಾವು (ಕೇಂದ್ರ ಸರ್ಕಾರ) ನಿಮ್ಮ ನೆರವಿಗೆ ಬರುತ್ತೇವೆ ಎಂದೂ ಭರವಸೆ ನೀಡಿದ್ದರು. ಈ ವಿಚಾರದಲ್ಲಿ ವಿತ್ತ ಸಚಿವರು ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ’ ಎಂದರು.

ಸಚಿವರೇ ಅಪಪ್ರಚಾರ ಮಾಡಿದ್ರೆ ಹೇಗೆ?: ಇದರಿಂದ ಮತ್ತಷ್ಟು ಆಕ್ರೋಶಗೊಂಡ ಜಗದೀಶ್‌ ಶೆಟ್ಟರ್‌, ನೀವು
(ಆರ್‌.ವಿ.ದೇಶಪಾಂಡೆ) ಉನ್ನತ ಶಿಕ್ಷಣ ಸಚಿವರಾಗಿದ್ದಾಗ ಎಲ್ಲವೂ ಸರಿಯಾಗಿತ್ತು. ಆದರೆ, ಬಸವರಾಜ ರಾಯರಡ್ಡಿ
ಈ ಖಾತೆ ವಹಿಸಿಕೊಳ್ಳುತ್ತಿದ್ದಂತೆ ಎಲ್ಲವೂ ಹಾಳಾಗುತ್ತಿದೆ. ವಿನಾಕಾರಣ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಾರೆ. ಆ ಮೂಲಕ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಕಿಡಿ
ಕಾರಿದರು.

ಇದು ಒಂದೆಡೆಯಾದರೆ, ವಿಟಿಯು ಭ್ರಷ್ಟಾಚಾರದ ಕೂಪವಾಗಿದೆ ಎಂದು ಸಚಿವ ಬಸವರಾಜ ರಾಯರಡ್ಡಿ ಅವರೇ ಹೇಳುತ್ತಿದ್ದಾರೆ. ಭ್ರಷ್ಟಾಚಾರ ನಡೆಯುತ್ತಿದ್ದರೆ ಒಬ್ಬ ಸಚಿವರಾಗಿ ಅದಕ್ಕೆ ಕಡಿವಾಣ ಹಾಕುವುದನ್ನು ಬಿಟ್ಟು ಅವರೇ ಅಪಪ್ರಚಾರ ಮಾಡಿದರೆ ವಿವಿಯನ್ನು ಕಾಪಾಡುವವರು ಯಾರು? ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗದಿದ್ದರೆ ಅವರು ಸಚಿವರಾಗಿ ಏಕೆ ಮುಂದುವರಿಯಬೇಕು ಎಂದು ಪ್ರಶ್ನಿಸಿದರು.

ವಿಟಿಯು ಪರಿಸ್ಥಿತಿ ಇದಾದರೆ ರಾಜ್ಯದ ಎಲ್ಲಾ ವಿವಿಗಳು ಭ್ರಷ್ಟಾಚಾರದ ಕೂಪಗಳಾಗಿವೆ ಎಂದೂ ಸಚಿವರು ಹೇಳುತ್ತಿದ್ದಾರೆ. ಅಲ್ಲದೆ, ಬಸವರಾಜ ರಾಯರಡ್ಡಿ ಅವರ ಇಲಾಖೆಯಲ್ಲೇ ಬರುವ ರಾಜ್ಯದ 412 ಪ್ರಥಮ ದರ್ಜೆ ಕಾಲೇಜುಗಳ ಪೈಕಿ 390 ಕಾಲೇಜುಗಳಿಗೆ ಕಾಯಂ ಪ್ರಾಂಶುಪಾಲರಿಲ್ಲ. ಈ ಸಮಸ್ಯೆ ಬಗೆಹರಿಸುವುದನ್ನು ಬಿಟ್ಟು
ಕೇವಲ ಪ್ರಚಾರಕ್ಕಾಗಿ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶೆಟ್ಟರ್‌ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ವಿವಿಗೆ ಆದಾಯ
ತೆರಿಗೆ, ಖಾಸಗಿ ವಿವಿಗೆ ವಿನಾಯಿತಿ

ಸರ್ಕಾರಿ ವಿಶ್ವವಿದ್ಯಾಲಯಕ್ಕೆ ಆದಾಯ ತೆರಿಗೆ ವಿನಾಯಿತಿ ಇಲ್ಲ. ಆದರೆ, ಖಾಸಗಿ ವಿವಿಗಳಿಗೆ ಆದಾಯ ತೆರಿಗೆ ವಿನಾಯಿತಿ ನೀಡುತ್ತಿರುವ ಇಲಾಖೆಯ ಕ್ರಮದ ಬಗ್ಗೆ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ  ಅಚ್ಚರಿ ವ್ಯಕ್ತಪಡಿಸಿದ್ದರಂತೆ. ಈ ವಿಚಾರವನ್ನು ಬಹಿರಂಗಗೊಳಿಸಿದ್ದು ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ. ನಾನು ಉನ್ನತ ಶಿಕ್ಷಣ ಸಚಿವನಾಗಿದ್ದಾಗ ವಿಟಿಯು ಹಣವನ್ನು ಆದಾಯ ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ಸಚಿವ ಅರುಣ್‌ ಜೇಟ್ಲಿ ಅವರು ಇಲಾಖೆ ಅಧಿಕಾರಿಗಳನ್ನು ಕರೆದು ಚರ್ಚಿಸಿದ್ದರು. 

ಈ ವೇಳೆ ಖಾಸಗಿ ವಿವಿಗಳಿಗೆ ಆದಾಯ ತೆರಿಗೆ ವಿನಾಯಿತಿ ನೀಡಿರುವುದು ಗೊತ್ತಾಯಿತು ಎಂದರು. ಇದನ್ನು ಗಮನಿಸಿದ ಕೇಂದ್ರ ಸಚಿವರು, ಏನಿದು ಸರ್ಕಾರಿ ವಿವಿ ಆದಾಯ ತೆರಿಗೆ ಪಾವತಿಸಿಲ್ಲ ಎಂದು ಹೇಳಿ ಅದರ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳುತ್ತೀರಿ. ಇನ್ನೊಂದೆಡೆ ಖಾಸಗಿ ವಿವಿಗಳಿಗೆ ತೆರಿಗೆ ವಿನಾಯಿತಿ ನೀಡುತ್ತೀರಿ ಎಂದು ಅಚ್ಚರಿ ವ್ಯಕ್ತಪಡಿಸಿದ್ದರಲ್ಲದೆ, ಸರ್ಕಾರಿ ವಿವಿಗಳಿಗೂ ಆದಾಯ ತೆರಿಗೆ ವಿನಾಯಿತಿ ನೀಡುವಂತೆ ಸೂಚನೆ ನೀಡಿದ್ದರು. ಅವರ ಸಲಹೆಯಂತೆ ಆದಾಯ ತೆರಿಗೆ ಮುಟ್ಟುಗೋಲು ಹಾಕಿಕೊಂಡಿರುವ ಹಣ ವಾಪಸ್‌ ಪಡೆಯಲು ವಿಟಿಯು ಕಾನೂನು
ಸಮರ ನಡೆಸುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

MUST WATCH

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಹೊಸ ಸೇರ್ಪಡೆ

First single of Ibbani Tabbida Ileyali Movie releasing on June 21

Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು

Dhruva sarja’s bahaddur movie re releasing after 10 years

Dhruva Sarja; 10 ವರ್ಷಗಳ ನಂತರ ‘ಬಹದ್ದೂರ್‌’ ಮತ್ತೆ ರಿಲೀಸ್‌

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

Zap-X for painless treatment of brain tumors

ZAP-X Radiosurgery; ಬ್ರೈನ್‌ ಟ್ಯೂಮರ್‌ ನೋವುರಹಿತ ಚಿಕಿತ್ಸೆಗೆ ಝ್ಯಾಪ್‌- ಎಕ್ಸ್‌

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.