ದ್ವೇಷ ರಾಜಕರಣ ಬಿಟ್ಟು ಬಿಡಿ : ಬಿಜೆಪಿ ವಿರುದ್ಧ ಮನೋಹರ್ ವಾಗ್ದಾಳಿ
Team Udayavani, Sep 3, 2019, 1:31 PM IST
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಆಧಾರವಿಲ್ಲದ ಸಾಕ್ಷ್ಯಗಳನ್ನು ಸೃಷ್ಟಿಸಿ ಪಕ್ಷದ ಹಿರಿಯರ ಮೇಲೆ ಕೇಂದ್ರ ಸರ್ಕಾರದ ಜೊತೆಗೂಡಿ ಬಿಜೆಪಿ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಯೂತ್ ಕಾಂಗ್ರೆಸ್ ನಗರದಲ್ಲಿ ಪ್ರತಿಭಟನೆ ನಡೆಸಿದೆ.
ಬಿಜೆಪಿಯವರು ಬಲವಂತತವಾಗಿ ಕಾಂಗ್ರೆಸ್ ನಾಯಕರನ್ನು ಬಂಧಿಸುತ್ತಿದ್ದಾರೆ. ಬಿಜೆಪಿ ನಾಯಕರು ಆಪರೇಷನ್ ಕಮಲ ಮಾಡ್ತಾರೆ, ಮೊದಲು ಆಪರೇಷನ್ ಕಮಲದ ಬಗ್ಗೆ ಸಿಬಿಐ ತನಿಖೆ ನಡೆಸಿ ಅದರ ರೂವಾರಿಯಾಗಿರುವ ಅಶ್ವಥ್ ನಾರಾಯಣ್ ವಿರುದ್ಧ ದೂರು ದಾಖಲಿಸಿ ಅದನ್ನು ಬಿಟ್ಟು ನಮ್ಮವರನ್ನ ಬಂಧಿಸಿದ್ದು ಯಾಕೆ ನಿಮ್ಮ ದ್ವೇಷದ ರಾಜಕಾರಣವನ್ನು ಬಿಟ್ಟು ಬಿಡಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಯೂತ್ ಕಾಂಗ್ರೆಸ್ ಮುಖಂಡ ಮನೋಹರ್ ವಾಗ್ದಾಳಿ ನಡೆಸಿದರು.