ಪಾಠ ಇಂಗ್ಲಿಷ್‌ ಆದರೂ ಚಿಂತನೆ ಕನ್ನಡ


Team Udayavani, Jun 17, 2019, 3:06 AM IST

patha

ಬೆಂಗಳೂರು: ವಿಮರ್ಶೆಗೆ ನಿಷ್ಠರಾಗಿದ್ದ ಗಿರಡ್ಡಿ ಗೋವಿಂದರಾಜ ಅವರು ತಮ್ಮ ಬದುಕಿನುದ್ದಕ್ಕೂ ಅದನ್ನು ಒಂದು ವ್ರತದಂತೆ ಆಚರಿಸಿದರು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ ಅಭಿಪ್ರಾಯಪಟ್ಟರು.

ಬೆಂಗಳೂರು ನಗರ ಜಿಲ್ಲಾ ಸಾಹಿತ್ಯ ಪರಿಷತ್ತು ಭಾನುವಾರ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವಿರತ ಪುಸ್ತಕ ಹೊರತಂದಿರುವ “ಡಾ. ಗಿರಡ್ಡಿ ಗೋವಿಂದರಾಜ: ವ್ಯಕ್ತಿ-ವಾಙ್ಮಯ’ ಕೃತಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

“ಗಿರಡ್ಡಿಯವರ ವಿಮರ್ಶೆ ಓದಿದಾಗ ಮಲ್ಲಿಕಾರ್ಜುನ ಮನ್ಸೂರ ಅವರ ಸಂಗೀತ ಕೇಳಿದ ಅನುಭವ ಆಗುತ್ತದೆ’ ಎಂದು ಡಾ.ಎಂ.ಎಂ. ಕಲಬುರಗಿಯವರು ತಮ್ಮ ಲೇಖನ ಒಂದರಲ್ಲಿ ಉಲ್ಲೇಖೀಸಿದ್ದಾರೆ. ಗಿರಡ್ಡಿಯವರು ವಿಮರ್ಶೆಗೆ ವಿಶಿಷ್ಟ ಮತ್ತು ವಿಸ್ಮತ ಪುಸ್ತಕಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದರು. ಬರವಣಿಗೆ ಶುದ್ಧಿ ಹೊಂದಿದ್ದ ಅವರು ವಿಮರ್ಶೆಗೆ ಇಂಗ್ಲಿಷ್‌ ಮಾನದಂಡಗಳನ್ನು ಅಳವಡಿಸಿಕೊಳ್ಳುತ್ತಿದ್ದರು ಎಂದರು.

ಇಂಗ್ಲಿಷ್‌ ಪಾಠ ಮಾಡುತ್ತಿದ್ದರೂ ಗಿರಡ್ಡಿಯವರ ಚಿಂತನೆ ಕನ್ನಡದ ಕುರಿತಾಗಿತ್ತು. ಇಂಗ್ಲಿಷ್‌ನಲ್ಲಿ ಕಲಿತ ವಿದ್ವತ್ತನ್ನು ಕನ್ನಡಕ್ಕೆ ಧಾರೆ ಎರೆಯುತ್ತಾ ಬಂದರು. ಕನ್ನಡ ಎಂ.ಎ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರ ಬಗ್ಗೆ ಅವರಿಗೆ ತುಂಬಾ ಬೇಸರ ಇತ್ತು. ವಿಮರ್ಶೆಗಳ ಮೂಲಕ ಓದುಗರಲ್ಲಿ ಓದುವ ಅಭಿರುಚಿ ಹುಟ್ಟು ಹಾಕುತ್ತಿದ್ದ ಗಿರಡ್ಡಿಯವರು, ಸಾಹಿತ್ಯ ಓದಿಗೆ ಒಂದು ವಲಯವನ್ನು ಕಟ್ಟಿಕೊಟ್ಟರು ಎಂದು ಸ್ಮರಿಸಿದ ವಸುಂಧಾರ ಅವರು, ಮಹಿಳಾ ಸಾಹಿತ್ಯ ವಿಮರ್ಶೆ ಬಗ್ಗೆ ಗಿರಡ್ಡಿಯವರಿಗೆ ಒಂದಿಷ್ಟು ಅಸಡ್ಡೆ ಇತ್ತು ಅನ್ನುವುದು ಅನೇಕರ ಭಾವನೆಯಾಗಿತ್ತು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಡಾ. ಸಿ.ಎನ್‌. ರಾಮಚಂದ್ರನ್‌ ಮಾತನಾಡಿ, ಗಿರಡ್ಡಿ ಅವರು ಕರ್ನಾಟಕ ಸಾಹಿತ್ಯಅಕಾಡೆಮಿಯ ಅಧ್ಯಕ್ಷರಾಗಿದ್ದ ಕೊನೆಯ ಅವಧಿಯಲ್ಲಿ ಕೈಗೊಂಡ ಶತಮಾನದ ಸಾಹಿತ್ಯ ಸಂಕಲನ ಹೊರತಂದಿದ್ದು ಅವರಿಗೆ ಕಿರಿಟಪ್ರಾಯವಾಗಿತ್ತು. 20ನೇ ಶತಮಾನದಲ್ಲಿ ರಚನೆಗೊಂಡ ಶ್ರೇಷ್ಠ ಕಥೆ, ಕವನ, ವಿಮರ್ಶೆ, ಸಂಶೋಧನೆ, ಲಲಿತ ಪ್ರಬಂಧ ಸೇರಿದಂತೆ ಒಟ್ಟು ಆರು ವಿಧದ ಸಂಪುಟಗಳ ಸಂಪಾದಿಸಿ ಪ್ರಕಟಿಸಿದ್ದು, ಅಸಾಧಾರಣ ಕಾರ್ಯ ಎಂದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 21 ಮಂದಿ ಸಾಧಕರಿಗೆ “ಕನ್ನಡ ಸೇವಾರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಮರ್ಶಕ ಡಾ. ಬೈರಮಂಗಲ ರಾಮೇಗೌಡ, ಮದ್ರಾಸ್‌ ವಿವಿ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ತಮಿಳ್‌ ಸೆಲ್ವಿ, ನಗರ ಜಿಲ್ಲಾ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಾಯಣ್ಣ, ಕೃತಿಯ ಸಂಪಾದಕರಾದ ಟಿ.ಎಸ್‌. ದಕ್ಷಿಣಾಮೂರ್ತಿ, ಪ್ರೊ. ಮಹೇಶ್‌ ತಿಪ್ಪಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಹತ್ತಿ ಬಟ್ಟೆಯ ಧ್ವಜ ಬಳಸಿ: ಎಲ್ಲ ಕನ್ನಡಪರ ಸಂಘಟನೆಗಳು ಇನ್ನು ಮುಂದೆ ಹತ್ತಿ ಬಟ್ಟೆಯಿಂದ ತಯಾರಿಸಿದ ಧ್ವಜ ಮತ್ತು ಬಾವುಟಗಳನ್ನು ಬಳಸಬೇಕು. ಏಕೆಂದರೆ, ಈಗ ಬಳಸುತ್ತಿರುವ ಧ್ವಜ ಪಾಲಿಸ್ಟರ್‌ ಬಟ್ಟೆಯದ್ದು, ಇದು ಮಣ್ಣಲ್ಲೂ ಕರಗುವುದಿಲ್ಲ. ಮೈ ಮತ್ತು ಚರ್ಮಕ್ಕೂ ಅದು ಒಳ್ಳೆಯದಲ್ಲ. ಹತ್ತಿ ನಾಡಿನ ಘನತೆಗೆ ಬಹಳ ಮುಖ್ಯ. ಅಲ್ಲದೇ ಹತ್ತಿ ಬಳಸಿದರೆ ಹತ್ತಿ ಬೆಳೆಯುವ ರೈತರಿಗೆ ಉತ್ತೇಜನ ನೀಡಿದಂತಾಗುತ್ತದೆ. ಆದ್ದರಿಂದ ಕನ್ನಡಪರ ಸಂಘಟನೆಗಳು ಹಾರಿಸಲು ಮತ್ತು ಹಾಕಿಕೊಳ್ಳಲು ಹತ್ತಿ ಬಟ್ಟೆಯ ಧ್ವಜಗಳನ್ನು ಬಳಸುವಂತೆ ವಸುಂಧರಾ ಭೂಪತಿ ಮನವಿ ಮಾಡಿದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.