ಶಿಕ್ಷಕರು ಮಾತೃಭಾಷೆ ಉಳಿಸಲಿ: ಕಂಬಾರ


Team Udayavani, Aug 24, 2018, 10:56 AM IST

blore-8.jpg

ಬೆಂಗಳೂರು: ಇಂಗ್ಲಿಷ್‌ ಭಾಷೆ ಕಲಿಕೆಗೆ ಸರ್ಕಾರ ಮುಂದಾಗಿರುವುದು ಆರೋಗ್ಯಕರ ಬೆಳವಣಿಗೆಯಲ್ಲ. ಶಿಕ್ಷಣ ವ್ಯವಸ್ಥೆಯಲ್ಲಿ ಪಶುಗಳನ್ನು ಸೃಷ್ಟಿಸುವ ಕೆಲಸ ಯಾವತ್ತೂ ಆಗಬಾರದು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಸಲಹೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರ್ನಾಟಕ ಸಾಮಾನ್ಯಜ್ಞಾನ ಅಕಾಡೆಮಿ ಗುರುವಾರ ಹಮ್ಮಿಕೊಂಡಿದ್ದ “ಕನ್ನಡ ಸಿರಿ ಮತ್ತು ಅತ್ಯುತ್ತಮ ಉಪನ್ಯಾಸಕ’ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ಅವರು, ಶಿಕ್ಷಕರು ಮಾತೃ ಭಾಷೆ ಉಳಿಸದಿದ್ದರೆ ಅದರ ಬೆಳವಣಿಗೆ ಸಾಧ್ಯವಿಲ್ಲ ಎಂದರು.
 
ಭಾಷಾ ವಿಚಾರದಲ್ಲಿ ಸರ್ಕಾರ ಯಾವುದೇ ನೀತಿಯನ್ನು ರೂಪಿಸಿ, ಜಾರಿಗೆ ತರಲಿ. ಆದರೆ, ಶಿಕ್ಷಕರು ಮಾತ್ರ ಮಕ್ಕಳಿಗೆ ಮಾತೃಭಾಷೆ ಕಲಿಕೆಯನ್ನು ಮುಂದುವರಿಸಬೇಕು. ಮಾತೃಭಾಷೆ ಉಳಿಯುವುದು ಕೇವಲ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.

ಬ್ರಿಟಿಷರ ಕಾಲಾವಧಿಯಲ್ಲಿ ನೊಂದವರಿಗೆ ನ್ಯಾಯ ನೀಡುತ್ತಿದ್ದ ಶಿಕ್ಷಕನಿಗೆ ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳು ಏಕವಚನದಲ್ಲಿ ಮಾತನಾಡುತ್ತಿದ್ದಾರೆ. ಇದು ಸಲ್ಲದು. ಈ ರೀತಿಯ ನಡವಳಿಕೆಗಳು ಮರುಕಳಿಸುತ್ತಲೇ ಇದ್ದು, ಶಿಕ್ಷಕರು ಈ ಬಗ್ಗೆ ಪ್ರತಿಭಟಿಸದೇ ಇರುವುದು ನೋವು ತಂದಿದೆ ಎಂದರು.

ಶಿಕ್ಷಣ ಅಂದರೆ ಕೇವಲ ರ್‍ಯಾಂಕ್‌ ನೀಡುವ ವ್ಯವಸ್ಥೆ ಅಲ್ಲ. ವಿದ್ಯಾರ್ಥಿಗಳಲ್ಲಿ ಆಲೋಚನಾ ಶಕ್ತಿ ಮತ್ತು ಸೃಜನಶೀಲತೆ ಬೆಳೆಸುವುದು ಇದರ ತಿರುಳಾಗಿದೆ. ನಾವು ಏನು ಮಾಡುತ್ತಿದ್ದೇವೆ ಎಂಬುವುದನ್ನು ಶಿಕ್ಷಕರು ಆತ್ಮವಿಮರ್ಶೆ ಮಾಡಿಕೊಂಡು ವಿದ್ಯಾರ್ಥಿಗಳ ಕಲಿಕೆಯತ್ತ ಗಮನ ಹರಿಸಲಿ ಎಂದು ಕಿವಿಮಾತು ಹೇಳಿದರು. 

ಕೇಂದ್ರದ ಕಾನೂನು ವಿರೋಧಿಸಿ: ಕವಿ, ರಾಜ್ಯಸಭಾ ಸದಸ್ಯ ಎಲ್‌. ಹನುಮಂತಯ್ಯ ಮಾತನಾಡಿ, ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಕಾನೂನನ್ನು ಜಾರಿಗೊಳಿಸಲು ಹೊರಟಿದೆ. 5 ಹಾಗೂ 9ನೇ ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡಬಹುದು ಎಂಬ ಕಾನೂನು ರೂಪಿಸಲು ಮುಂದಾಗಿದೆ. ಇದು ಜಾರಿಗೆ ಬಂದರೆ ವಿದ್ಯಾರ್ಥಿಗಳು ಪ್ರಾಥಮಿಕ ಹಂತದಲ್ಲೇ ಮಕ್ಕಳು ಶಿಕ್ಷಣದಿಂದ ದೂರವಾಗುವ ಸಾಧ್ಯತೆ ಇದೆ. ಈ ಬಗ್ಗೆ ಶಿಕ್ಷಣ ತಜ್ಞರು ದನಿ ಎತ್ತಬೇಕು ಎಂದು ಒತ್ತಾಯಿಸಿದರು. 

ಇತ್ತೀಚಿನ ದಿನಗಳಲ್ಲಿ ಮಕ್ಕಳು ಇಂಗ್ಲಿಷ್‌ ಶಾಲೆಗಳತ್ತ ಗುಳೆ ಹೋಗುತ್ತಿದ್ದು, ಈ ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಮುಂದಿನ 5 ವರ್ಷದಲ್ಲಿ 20 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಿ ಹೋಗುವ ಸಾಧ್ಯತೆ ಇದೆ. ಕನ್ನಡ ಮಾಧ್ಯಮದಲ್ಲಿ ಓದಿದರೆ ಭವಿಷ್ಯವಿಲ್ಲ ಎಂಬ ಸ್ಥಿತಿಯನ್ನು ಪೋಷಕರೆ ನಿರ್ಮಾಣ ಮಾಡುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ, ಸರ್ಕಾರ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಗೆ ತರಬೇಕು ಎಂದರು.

ಇದೇ ವೇಳೆ ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಎಸ್‌. ಶಂಕರಪ್ಪ, ಬೆಂಗಳೂರು ನಗರ ಸಹಾಯಕ ಪೊಲೀಸ್‌ ಆಯುಕ್ತ ಎಸ್‌.ಟಿ. ಸಿದ್ದಲಿಂಗಪ್ಪ ಅವರಿಗೆ “ಕನ್ನಡ ಸಿರಿ’ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಉಪನ್ಯಾಸಕರಿಗೆ “ಉತ್ತಮ ಉಪನ್ಯಾಸಕ’ ಪ್ರಶಸ್ತಿಗಳನ್ನ ಪ್ರದಾನ ಮಾಡಲಾಯಿತು. ಸಾಹಿತಿ ಎಲ್‌.ಎನ್‌.ಮುಕುಂದರಾಜ್‌, ಹೊ.ನ.ನೀಲಕಂಠೇಗೌಡ, ಅಕ್ಕೂರು ಬಸವರಾಜ್‌ ಮತ್ತಿತರರಿದ್ದರು. 

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.