“ಸಾಧಾರಣ ಬರಪೀಡಿತ ತಾಲೂಕುಗಳ ರೈತರಿಗೂ ಪರಿಹಾರ ಸಿಗಲಿ’
Team Udayavani, Dec 21, 2018, 6:00 AM IST
ಬೆಂಗಳೂರು: ಸಾಧಾರಣ ಪ್ರಮಾಣದಲ್ಲಿ ಬರಪೀಡಿತವಾಗಿರುವ ತಾಲೂಕುಗಳ ರೈತರಿಗೂ ಎನ್ಡಿಆರ್ಎಫ್ ವತಿಯಿಂದ ಪರಿಹಾರ ದೊರಕುವಂತೆ 2016ರ ಬರ ನಿರ್ವಹಣೆ ಕೈಪಿಡಿಗೆ ಸೂಕ್ತ ತಿದ್ದುಪಡಿ ತರಬೇಕು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ರಾಧಾಮೋಹನ್ ಸಿಂಗ್ ಅವರಿಗೆ ಗುರುವಾರ ಪತ್ರ ಬರೆದಿರುವ ಅವರು, ಎನ್ಡಿಆರ್ಎಫ್ನ ಈಗಿನ ಮಾನದಂಡಗಳ ಪ್ರಕಾರ ತೀವ್ರ ಬರಗಾಲ ಪೀಡಿತವಾಗಿರುವ ಜತೆಗೆ ಶೇ.50 ಮತ್ತು ಅದಕ್ಕಿಂತ ಹೆಚ್ಚಿನ ಪ್ರಮಾಣದ ಬೆಳೆ ನಷ್ಟವಾಗಿರುವ ತಾಲೂಕುಗಳಿಗೆ ಮಾತ್ರ ಆರ್ಥಿಕ ನೆರವು ಸಿಗಲಿದೆ. ಇದರಿಂದಾಗಿ, ಸಾಧಾರಣ ಬರಪೀಡಿತ ತಾಲೂಕುಗಳಾಗಿದ್ದು, ಶೇ.33ರಿಂದ 50ರವರೆಗೆ ಬೆಳೆ ನಷ್ಟವಾಗಿರುವ ಪ್ರದೇಶಗಳ ರೈತರು ಪರಿಹಾರದಿಂದ ವಂಚಿತರಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕೃಷಿಕರು ಈಗಾಗಲೇ ಸಂಕಷ್ಟದಲ್ಲಿದ್ದು, ಕೃಷಿಯನ್ನು ಮುಂದುವರಿಸಿಕೊಂಡು ಹೋಗುವುದೇ ದುಸ್ತರವಾಗಿದೆ. ಹೀಗಾಗಿ, ಸಾಧಾರಣ ಬರಪೀಡಿತ ತಾಲೂಕುಗಳ ರೈತರನ್ನು ಕೂಡ ಪರಿಹಾರಕ್ಕೆ ಪರಿಗಣಿಸಬೇಕು. ಇಂತಹ ಕ್ರಮದಿಂದ ದೇಶಾದ್ಯಂತ ಇರುವ ಸಣ್ಣ ರೈತರಿಗೆ ಅನುಕೂಲವಾಗಲಿದೆ ಎಂದು ಉಲ್ಲೇಖೀಸಿದ್ದಾರೆ. ಇದಲ್ಲದೆ, ಶೇ.50ಕ್ಕಿಂತ ಕಡಿಮೆ ಬೆಳೆ ನಷ್ಟ ಅನುಭವಿಸಿರುವ ರೈತರನ್ನು ಪರಿಹಾರಕ್ಕೆ ಪರಿಗಣಿಸದೆ ಇರುವುದು ಈಗ ಚಾಲ್ತಿಯಲ್ಲಿರುವ ಎಸ್ ಡಿಆರ್ಎಫ್/ಎನ್ಡಿಆರ್ಎಫ್ ನಿಯಮಗಳಿಗೆ ತದ್ವಿರುದ್ಧವಾಗಿದೆ.
ಏಕೆಂದರೆ, ಶೇ.33ರಿಂದ ಶೇ.50ರ ನಡುವೆ ಬೆಳೆ ನಷ್ಟ ಅನುಭವಿಸಿರು ವವರಿಗೆ ಇನ್ಪುಟ್ ಸಬ್ಸಿಡಿ ಕೊಡಬೇಕೆಂಬ ಅಂಶವು ಎನ್ಡಿಆರ್ಎಫ್ ಮಾನದಂಡಗಳಲ್ಲಿ ಇದೆ ಎಂದು ಪತ್ರದಲ್ಲಿ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ