ಕೆರೆ ಪುನರುಜ್ಜೀವನ ಸಂಕಲ್ಪವಾಗಲಿ
Team Udayavani, Jul 2, 2018, 12:07 PM IST
ಬೆಂಗಳೂರು: ಕೆರೆಗಳ ಪುನರುಜ್ಜೀವನ ಈ ಶತಮಾನದ ಸಂಕಲ್ಪವಾಗಬೇಕು ಎಂದು ಕೇಂದ್ರದ ರಾಸಾಯನಿಕ ಮತ್ತು
ರಸಗೊಬ್ಬರ ಸಚಿವ ಅನಂತಕುಮಾರ್ ಹೇಳಿದ್ದಾರೆ.
ಅದಮ್ಯ ಚೇತನ ಸಂಸ್ಥೆಯಿಂದ ಭಾನುವಾರ ಕೆಂಪಾಂಬುಧಿ ಕೆರೆ ಆವರಣದಲ್ಲಿ ಹಮ್ಮಿಕೊಂಡಿದ್ದ 131ನೇ ಹಸಿರು ಭಾನುವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಬೆಂಗಳೂರಿನಲ್ಲಿದ್ದ ಕೆರೆಗಳನ್ನು ಗಮನಿಸಿದಾಗ ಬೇಸರವಾಗುತ್ತಿತ್ತು.
ಈಗ ಅವುಗಳ ಪುನರುಜ್ಜೀವನಕ್ಕೆ ಆಡಳಿತ ಯಂತ್ರದೊಂದಿಗೆ ವಿವಿಧ ಸಂಸ್ಥೆಗಳು ಶ್ರಮಿಸುತ್ತಿರುವುದನ್ನು ಗಮನಿಸಿದರೆ ಸಂತಸವಾಗುತ್ತದೆ. ಕೆರೆಗಳ ಪುನರುಜ್ಜೀವನ ಈ ಶತಮಾನದ ಸಂಕಲ್ಪವಾಗಬೇಕು ಎಂದು ಹೇಳಿದರು.
ಕಳೆದ ಒಂದು ಶತಮಾನದಿಂದ ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದ್ದೇ ಸಾಧನೆ ಎನಿಸಿದೆ. ನಗರದಲ್ಲಿರುವ
ಕೆರೆಗಳ ಒತ್ತುವರಿ ತೆರವು ಮಾಡಿ, ಮತ್ತೆ ಅವುಗಳ ಗತವೈಭವ ಮರುಕಳುಹಿಸುವಂತೆ ಮಾಡುವುದು ಈ ಶತಮಾನದ ಸಾಧನೆ ಮತ್ತು ಗುರಿಯಾಗಬೇಕು. ಈ ನಿಟ್ಟಿನಲ್ಲಿ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.
ಶಾಸಕ ಉದಯ ಗರುಡಾಚಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಸಕ ರವಿ ಸುಬ್ರಹ್ಮಣ್ಯ, ಅದಮ್ಯ
ಚೇತನ ಸಂಸ್ಥೆಯ ತೇಜಸ್ವಿನಿ ಅನಂತಕುಮಾರ್, ಪರಿಸರ ತಜ್ಞ ಆ.ನ.ಯಲ್ಲಪ್ಪ ರೆಡ್ಡಿ, ನಟಿ ಶ್ರುತಿ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ