ಆರೋಗ್ಯ ಪಾಲನೆಗೆ ಇರಲಿ ಜನರ ಗಮನ: ಶಾಸಕ
Team Udayavani, Jan 30, 2017, 12:05 PM IST
ಕೆಂಗೇರಿ: ವಾಯುಮಾಲಿನ್ಯ, ಜಲಮಾಲಿನ್ಯ ಹಾಗೂ ಶಬ್ಧಮಾಲಿನ್ಯದ ಪರಿಸರದ ಮೇಲಷ್ಟೇ ಅಲ್ಲದೆ, ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಪ್ರತಿಯೊಬ್ಬರು ಉತ್ತಮ ಆರೋಗ್ಯಕ್ಕಾಗಿ ಯೋಗ, ಧ್ಯಾನ, ಪ್ರಾಣಯಾಮ ಹಾಗೂ ವ್ಯಾಯಾಮ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಾಸಕ ಎಸ್ ಟಿ ಸೋಮಶೇಖರ್ ಮನವಿ ಮಾಡಿದ್ದಾರೆ.
ಬಿಬಿಎಂಪಿ ಉಲ್ಲಾಳು ವಾರ್ಡ್ನ ಎಜಿಎಸ್ ಬಡಾವಣೆಯಲ್ಲಿ ನಿರ್ಮಿಸಿರುವ ಬಯಲು ಜಿಮ್ ಅನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು “ಎಲ್ಲಾ ಸಂಪತ್ತಿಗಿಂತ ಆರೋಗ್ಯ ಸಂಪತ್ತು ಬಹುಮುಖ್ಯವಾದ್ದು. ಜನ ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ ಸುಖೀ ಜೀವನ ನಡೆಸಬೇಕು,” ಎಂದು ಸಲಹೆ ನೀಡಿದರು.
ಕೆಂಗೇರಿ ಪುರಸಭೆ ಮಾಜಿ ಉಪಾಧ್ಯಕ್ಷ ಜಿ.ಮುನಿರಾಜು ಮಾತನಾಡಿ ” ಜೀವನ ನಿರ್ವಹಣೆ, ಒತ್ತಡದ ಬದುಕಿನಿಂದಾಗಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡದೆ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಉದ್ಯಾನದ ಅಭಿವೃದ್ಧಿ ಜೊತೆಯಲ್ಲೇ ಆರೋಗ್ಯ ಸುಧಾರಣೆಗಾಗಿ ವ್ಯಾಯಾಮ ಮಾಡಲು ಬಯಲು ಜಿಮ್ ನಿರ್ಮಿಸಿ ಅಗತ್ಯ ಉಪಕರಣಗಳನ್ನು ಅಳವಡಿಸಲಾಗಿದೆ,” ಎಂದರು. ಉಲ್ಲಾಳು ವಾರ್ಡ್ ಕಾರ್ಪೊರೇಟರ್ ಶಾರದ, ಅಭಿಯಂತರ ತಿಮ್ಮಪ್ಪ, ಹೇರೋಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಿಲ್ಕುಮಾರ್, ಉಲ್ಲಾಳು ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ಗೌಡ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್