ಮೌಲ್ಯಯುತ ರಾಜಕೀಯ ಮರುಕಳಿಸಲಿ: ಮಹಿಮ
Team Udayavani, Dec 23, 2019, 3:05 AM IST
ಬೆಂಗಳೂರು: ರಾಜಕಾರಣಿಗಳು ಮಾತನಾ ಡುವು ದಷ್ಟೇ ಅಲ್ಲ, ಜನರ ಮಾತುಗಳನ್ನೂ ಕೇಳಿಸಿ ಕೊಳ್ಳಬೇಕು ಎಂದು ಸಂಯುಕ್ತ ಜನತಾ ದಳ ರಾಜ್ಯಾಧ್ಯಕ್ಷ ಮಹಿಮ ಜೆ. ಪಟೇಲ್ ಹೇಳಿದರು. ಯುವ ಜನತಾದಳ (ಸಂಯುಕ್ತ) ವತಿಯಿಂದ ಭಾನುವಾರ ಆಯೋಜಿಸಿದ್ದ ಜೆಡಿಯು ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೆ ರಾಜಕೀಯ ಸೇವೆಯಾಗಿತ್ತು.
ಈಗ ರಾಜ ಕಾರಣಿಗಳ ಬಗ್ಗೆ ಜನರಲ್ಲಿ ಉತ್ತಮ ಭಾವನೆ ಇಲ್ಲ. ಆರೋಪ ಸಾಬೀತಾದ ರಾಜಕಾರಣಿಗಳಿಗೂ ಜೈಕಾರ ಕೂಗಲಾ ಗುತ್ತಿದೆ. ಗಂಭೀರ ಆರೋಪ ಎದುರಿಸಿದವರೂ ಮುಖ್ಯಮಂತ್ರಿಗಳಾಗುತ್ತಿದ್ದಾರೆ. ಈ ಹಿಂದೆ ಇದ್ದ ಮೌಲ್ಯವೂಂದಿನ ರಾಜಕಾರಣದಲ್ಲಿ ಉಳಿದಿಲ್ಲ ಎಂದು ವಿಷಾದಿಸಿದರು. ಪತ್ರಕರ್ತ ರವೀಂದ್ರ ರೇಷ್ಮೆ ಮಾತನಾಡಿ, ಸಮಾನತೆ ಮತ್ತು ಸೋದರತ್ವವೇ ಪ್ರಜಾಪ್ರಭುತ್ವದ ಮೂಲ ಆಶಯ.
ಆದರೆ, ಈಗ ಎಲ್ಲ ಪಕ್ಷಗಳೂ ವಂಶ ರಾಜಕೀಯಕ್ಕೆ ಮಹತ್ವ ನೀಡುತ್ತಿವೆ. ಹೀಗಾಗಿ, ಕಾರ್ಯಕರ್ತರು ಮೂಲೆಗುಂಪಾಗು ತ್ತಿದ್ದಾರೆ ಎಂದರು. ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ, ಯುವ ಜೆಡಿ(ಯು)ರಾಷ್ಟ್ರೀಯ ಅಧ್ಯಕ್ಷ ಸಂಜಯ್ ಕುಮಾರ್, ರಾಜ್ಯ ಕಾರ್ಯಾಧ್ಯಕ್ಷ ಜಿ.ವಿ.ರಾಮ ಚಂದ್ರಯ್ಯ, ರಾಜ್ಯಾಧ್ಯಕ್ಷ ಡಾ.ಕೆ.ನಾಗರಾಜ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ