ಕೇಂದ್ರ ನದಿ ಜೋಡಣೆ ಕೈಗೆತ್ತಿಕೊಳ್ಳಲಿ: ಅಂಬರೀಶ್
Team Udayavani, Feb 18, 2018, 6:25 AM IST
ಬೆಂಗಳೂರು: ಕೇಂದ್ರ ಸರ್ಕಾರ ನದಿ ಜೋಡಣೆ ಯೋಜನೆಯನ್ನು ಕೈಗೆತ್ತಿಕೊಂಡರೆ ಅಂತಾರಾಜ್ಯ ನದಿ ನೀರಿನ ಸಮಸ್ಯೆಗೆ ಪರಿಹಾರ ದೊರೆಯುತ್ತದೆ ಎಂದು ಮಂಡ್ಯ ಶಾಸಕ ಅಂಬರೀಶ್ ಅಭಿಪ್ರಾಯ ಪಟ್ಟಿದ್ದಾರೆ.
ಕಾವೇರಿ ನದಿ ನೀರಿನ ವಿವಾದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸ್ವಾಗತಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ
ಅವರು, ಕಾವೇರಿ ವಿಷಯದಲ್ಲಿ ಬಹಳ ವರ್ಷಗಳ ನಂತರ ಒಳ್ಳೆಯ ತೀರ್ಪು ಬಂದಿದೆ. ಮಂಡ್ಯ ಭಾಗದ ರೈತರೂ ಹೆಚ್ಚು
ಖುಷಿಯಾಗಿದ್ದಾರೆ. ಸೋಮವಾರ ಪತ್ನಿ ಜತೆ ಕಾವೇರಿಗೆ ಬಾಗಿನ ಅರ್ಪಿಸುತ್ತೇನೆ ಎಂದರು.
ರಾಜ್ಯಕ್ಕೆ ಹೆಚ್ಚಿನ ನೀರು ದೊರೆತಿರುವುದರಿಂದ ನೀರಾವರಿ ಪ್ರದೇಶ ಹೆಚ್ಚಳಕ್ಕೂ ಅನುಕೂಲವಾಗಲಿದೆ. ಆದರೆ, ಕೇವಲ
ನೀರಾವರಿ ಪ್ರದೇಶ ಹೆಚ್ಚಳ ಮಾಡಿದರೆ ಸಾಲದು. ಅದಕ್ಕೆ ಅಗತ್ಯ ನೀರು ಮತ್ತು ನಿರ್ವಹಣೆ ಮಾಡುವುದರ ಬಗ್ಗೆಯೂ ಗಮನ ಹರಿಸಬೇಕು.
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿ ಸಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು, ನಾವೆಲ್ಲರೂ ಸ್ನೇಹಿತರೇ, ನದಿ ಜೋಡಣೆ ಮಾಡಿದರೆ ಎಲ್ಲ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ಹೇಳಿದರು.
ಹಿಂದೆ ಕಾವೇರಿ ನೀರಿನ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಆ ಬಗ್ಗೆ
ಯಾರೂ ಮಾತನಾಡಲೇ ಇಲ್ಲ. ಅದನ್ನು ಬಿಟ್ಟು ಅಂಬರೀಶ್ ಎಲ್ಲಿ ಡ್ಯಾನ್ಸ್ ಮಾಡಿದ ಎನ್ನುವುದನ್ನೇ ಹೆಚ್ಚು ಪ್ರಚಾರ ಮಾಡ್ತೀರಾ
ಎಂದು ಮಾಧ್ಯಮಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಮುಂಬರುವ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತೇನೆ ಎಂದು ಅಂಬರೀಶ್ ಪುನರುಚ್ಚರಿಸಿದರು.
15 ವರ್ಷದಿಂದ ಸಿಎಂ ಅಭ್ಯರ್ಥಿ:
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಎಲ್ಲರೂ ಪ್ರಯತ್ನಿಸುತ್ತೇವೆ. ನಾನು ಹದಿನೈದು ವರ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ. ಆಸೆ ಪಟ್ಟರೆ ನಿರಾಸೆಯಾಗುತ್ತದೆ. ಅದಕ್ಕಿಂತ ಆಸೆ ಪಡದೇ ಇರುವುದು ಒಳ್ಳೆಯದು. ಹಾಗಂತ ಸಿಎಂ ಸ್ಥಾನ ನೀಡಿದರೆ ಬೇಡ ಎನ್ನುವುದಿಲ್ಲ ಎಂದು ಚಟಾಕಿ ಹಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ