ದಯಾಮರಣ ಕೋರಿ ಕೈದಿಗಳಿಂದ ಪತ್ರ
Team Udayavani, Aug 17, 2018, 11:22 AM IST
ಬೆಂಗಳೂರು: ಕಳೆದ 16-20 ವರ್ಷಗಳಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 10ಕ್ಕೂ ಹೆಚ್ಚು ಮಂದಿ ಕೈದಿಗಳು ತಮ್ಮ ಅವಧಿ ಪೂರ್ವ ಬಿಡುಗಡೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ನೊಂದು, ತಮಗೆ ದಯಾಮರಣ ಅನುಮತಿ ನೀಡುವಂತೆ ಕೋರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಕಾರಾಗೃಹದಲ್ಲಿರುವ ಕೈದಿಗಳಾದ ರಾಮಮೂರ್ತಿ, ಕೃಷ್ಣ, ತಿಮ್ಮಪ್ಪ, ಅನಂತಮೂರ್ತಿ, ಉಮೇಶ್, ಮಂಜುನಾಥ್, ಉದಯ್, ಶಿವಕುಮಾರ್ ಸೇರಿ 10ಕ್ಕೂ ಅಧಿಕ ಮಂದಿ ಕೈದಿಗಳು ಅವರ ಸಂಬಂಧಿಕರ ಮೂಲಕ ಸಿಎಂ ಕುಮಾರಸ್ವಾಮಿ ಅವರ ಜನತಾದರ್ಶನದಲ್ಲಿ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಗೃಹ ಇಲಾಖೆ ಅರ್ಜಿಗಳನ್ನು ಪರಿಗಣಿಸಿ ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಕಾರಾಗೃಹಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರಿಗೆ ಸೂಚಿಸಿದೆ.
15ರಿಂದ 20 ವರ್ಷಗಳಿಂದ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತ ಹಿರಿಯ ಅಧಿಕಾರಿಗಳ ಅಜ್ಞಾನುವರ್ತಿಗಳಾಗಿದ್ದರೂ, ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುತ್ತಿಲ್ಲ. ಹೊಸ ಜೀವನಕ್ಕೆ ಮನಸ್ಸು ಮಾಡಿರುವ ನಮ್ಮನ್ನು ದಯಮಾಡಿ ಬಿಡುಗಡೆ ಮಾಡಿ, ಇಲ್ಲವೆ, ದಯಮರಣಕ್ಕೆ ಅನುಮತಿ ನೀಡಿ ಎಂದು ಕೈದಿಗಳು ಪತ್ರದಲ್ಲಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್