ಬೀಚ್ಗಳಲ್ಲಿ ಗಸ್ತು ಪೊಲೀಸ್ ನೇಮಿಸಲು ಸಿಎಂಗೆ ಪತ್ರ
Team Udayavani, Nov 19, 2018, 6:00 AM IST
ಬೆಂಗಳೂರು: ರಾಜ್ಯದ ವಿವಿಧ ಬೀಚ್ಗಳಲ್ಲಿ ನಡೆಯುತ್ತಿರುವ ಪ್ರವಾಸಿಗರ ಅಸಭ್ಯ ವರ್ತನೆ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬೀಚ್ಗಳಲ್ಲಿ ಪುರುಷ ಪ್ರವಾಸಿಗರು ಕನಿಷ್ಠ ಬಟ್ಟೆಗಳನ್ನೂ ಧರಿಸದೆ ಓಡಾಡುತ್ತಿದ್ದಾರೆ. ಸ್ವತಃ ತಾವು ಗೋಕರ್ಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿಯೂ ಪುರುಷರು ನಗ್ನವಾಗಿ ಓಡಾಡುವುದು ಕಂಡುಬಂದಿದೆ. ಇದರಿಂದಾಗಿ ಸಮುದ್ರದ ಬಳಿ ಸಣ್ಣ ಪುಟ್ಟ ವ್ಯಾಪಾರ ಮಾಡುವ ಸ್ಥಳೀಯ ಮಹಿಳೆಯರು ಮುಜುಗರ ಹಾಗೂ ಆತಂಕದ ನಡುವೆ ಜೀವನ ನಡೆಸುತ್ತಿದ್ದಾರೆ. ಹೀಗಾಗಿ ಬೀಚ್ಗಳಲ್ಲಿ ಗಸ್ತು ಪೊಲೀಸರನ್ನು ನಿಯೋಜಿಸುವ ಮೂಲಕ ಅಸಭ್ಯ ವರ್ತನೆಗಳಿಗೆ ಕಡಿವಾಣ ಹಾಕಲು ಕ್ರಮಕೈಗೊಳ್ಳಬೇಕೆಂದು
ಪತ್ರದಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ