ಮೀನುಗಾರರ ರಕ್ಷಣೆ ಕೋರಿ, ಸುಷ್ಮಾ ಸ್ವರಾಜ್ಗೆ ಪತ್ರ
Team Udayavani, Nov 23, 2018, 6:15 AM IST
ಬೆಂಗಳೂರು: ಇರಾನ್ನಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ರಾಜ್ಯದ ಭಟ್ಕಳ ಮತ್ತು ಕುಮುಟಾ ತಾಲೂಕಿನ 18 ಮೀನುಗಾರರರನ್ನು ಆದಷ್ಟು ಬೇಗ ಸುರಕ್ಷಿತವಾಗಿ ಬಿಡುಗಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಕೋರಿದ್ದಾರೆ.
ಈ ಬಗ್ಗೆ ಸುಷ್ಮಾ ಸ್ವರಾಜ್ ಅವರಿಗೆ ಪತ್ರ ಬರೆದಿರುವ ಸಚಿವರು, ದುಬೈನ ಮೀನುಗಾರಿಕೆ ದೋಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಷ್ಟೂ ಜನ ತಮಗೆ ಗೊತ್ತಿಲ್ಲದೆ ಇರಾನ್ನ ಜಲಪ್ರದೇಶ ಪ್ರವೇಶಿಸಿದ್ದರಿಂದ ಅಲ್ಲಿನ ಸೇನೆ ಬಂಧಿಸಿದೆ.
ಜುಲೈ 27 ರಿಂದಲೂ ಅವರನ್ನು ಕಿಶ್ ದ್ವೀಪದಲ್ಲಿಡಲಾಗಿದೆ. ಅವರ ಬಂಧನದಿಂದ ಕುಟುಂಬಗಳು ಕಂಗಾಲಾಗಿವೆ. ಹೀಗಾಗಿ, ತಕ್ಷಣ ನೆರವಿಗೆ ಧಾವಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಬಂಧಿತರಾಗಿರುವ ಮೀನುಗಾರರೆಲ್ಲಾ ಬಡ ಕುಟುಂಬದವರಾಗಿದ್ದು ಮೀನುಗಾರಿಕೆ ಮಾತ್ರ ಬಲ್ಲವರಾಗಿದ್ದಾರೆ. ಭಾರತೀಯರು ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿ ಹಾಕಿಕೊಂಡಾಗಲೆಲ್ಲಾ ನೆರವಿಗೆ ಧಾವಿಸುವ ಕೇಂದ್ರ ಸರ್ಕಾರ ಈಗಲೂ ನೆರವಿಗೆ ಧಾವಿಸಬೇಕು. ಆದಷ್ಟು ಬೇಗ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.ಸಚಿವರು ಪತ್ರದ ಜತೆಗೆ ಬಂಧಿತ ಮೀನುಗಾರರಿಗೆ ಸಂಬಂಧಿಸಿದ ವಿವರಗಳು ಹಾಗೂ ಪಾಸ್ಪೋರ್ಟ್ ಸಂಖ್ಯೆಯನ್ನು ಕೂಡ ಸುಷ್ಮಾ ಸ್ವರಾಜ್ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ