ನಿವೃತ್ತ ಅಧಿಕಾರಿ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ
Team Udayavani, Aug 17, 2022, 1:26 PM IST
ಬೆಂಗಳೂರು: ಎಂಟು ವರ್ಷಗಳ ಹಿಂದೆ ಬನಶಂಕರಿಯಲ್ಲಿ ನಿವೃತ್ತ ನ್ಯಾಯಾಂಗ ಅಧಿಕಾರಿ ರಾಘವೇಂದ್ರ(70) ಎಂಬುವರನ್ನು ಹತ್ಯೆಗೈದಿದ್ದ ಅಪರಾಧಿಗೆ 62ನೇ ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
ಆಂಧ್ರಪ್ರದೇಶ ಮೂಲದ ರಾಮಾಂಜನೇಯ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬೆಂಗಳೂರಿನಲ್ಲಿ ಶೌಚಾಲಯ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದ ರಾಮಾಂಜನೇಯ, ವಾರಕ್ಕೊಮ್ಮೆ ಇಟ್ಟಮಡುನ 10ನೇ ಕ್ರಾಸ್ನಲ್ಲಿ ವಾಸವಾಗಿದ್ದ ರಾಘವೇಂದ್ರ ಮನೆಗೂ ಬಂದು ಶೌಚಾಲಯ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದ. ಈ ಮಧ್ಯೆ 2014ರ ಡಿ.17ರಂದು ರಾತ್ರಿ 8 ಗಂಟೆ ಸುಮಾರಿಗೆ ರಾಘವೇಂದ್ರ ಅವರ ಮನೆಗೆ ನುಗ್ಗಿದ ಆರೋಪಿ, ಸುತ್ತಿಗೆಯಿಂದ ರಾಘವೇಂದ್ರರ ತಲೆಗೆ ಹೊಡೆದು ಕೊಂದಿದ್ದ.
ಬಳಿಕ ಅದನ್ನು ತಡೆಯಲು ಬಂದ ಅವರ ಪತ್ನಿ ಸುಧಾರಿಗೂ ಹೊಡೆದಿದ್ದ. ಅಲ್ಲದೆ, ಸುಧಾ ಅವರ 30 ಗ್ರಾಂ ತೂಕದ ಚಿನ್ನದ ಸರ ಕದ್ದು ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯ ಕೃತ್ಯ ಸಾಕ್ಷ್ಯಗಳಿಂದ ಸಾಬೀತಾಗಿದ್ದು, ಅಪರಾಧಿ ಎಂದು ಘೋಷಿಸಿದೆ. ಅಲ್ಲದೆ, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ