ಲಿಂಗಾಯತ ಒಡಕು;ಮಹಾಸಭಾ ಬಿಡುವುದಾಗಿ ಹೊರಟ್ಟಿ ಎಚ್ಚರಿಕೆ


Team Udayavani, Apr 12, 2018, 6:00 AM IST

basawaraj-horatti.jpg

ಬೆಂಗಳೂರು: “ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ’ ಚುನಾವಣಾ ರಾಜಕಾರಣ ತಿರುಗಿರುವ ಹಿನ್ನೆಲೆಯಲ್ಲಿ ಲಿಂಗಾಯತ ಮಹಾಸಭಾದಲ್ಲಿ ಬಿರುಕು ಉಂಟಾಗಿದ್ದು, ನಾಯಕರ ನಡುವೆಯೇ ಭಿನ್ನಾಭಿಪ್ರಾಯ ಕಾಣಿಸಿಕೊಂಡಿದೆ.

ಬಸವ ಧರ್ಮ ಪೀಠದ ಮಾತೆ ಮಹಾದೇವಿ ಬಹಿರಂಗವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ಸೂಚಿಸಿರುವುದು ಈ ಒಡಕಿಗೆ ಕಾರಣವಾಗಿದ್ದು. ರಾಷ್ಟ್ರೀಯ ಅಧ್ಯಕ್ಷ ಬಸವರಾಜ್‌ ಹೊರಟ್ಟಿ ಸಂಘಟನೆಯಿಂದ ಹೊರ ಹೋಗುವ ಎಚ್ಚರಿಕೆ ಸಹ ನೀಡಿದ್ದಾರೆ.

ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತರ ಮಾನ್ಯತೆ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಸವ ಜಯಂತಿ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಏಪ್ರಿಲ್‌ 16 ರಂದು ಬೃಹತ್‌ ಸಮಾವೇಶ ನಡೆಸಿ ಸನ್ಮಾನ ಮಾಡಲು ಮುಂದಾಗಿರುವ ಕ್ರಮಕ್ಕೂ ಹೊರಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಧರ್ಮದ ಹೆಸರಿನಲ್ಲಿ ರಾಜಕೀಯ ಕಾರ್ಯಕ್ರಮ ಸರಿಯಲ್ಲ ಎಂದು “ಖಡಕ್‌’ಅಭಿಪ್ರಾಯ ಹೊರಹಾಕಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಬಾದಾಮಿಯ ಶಿವಯೋಗಿ ಮಂದಿರದಲ್ಲಿ ವೀರಶೈವ ಮಠಾಧೀಶರೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಕೆಲವು ವೀರಶೈವ ಮಠಾಧೀಶರು ಬಿಜೆಪಿಗೆ ಬಹಿರಂಗ ಬೆಂಬಲ ವ್ಯಕ್ತಪಡಿಸಿದ್ದರು. ಅದಕ್ಕೆ ತಿರುಗೇಟು ನೀಡಲು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಪಾಲ್ಗೊಂಡಿದ್ದ ವಿರಕ್ತ ಮಠಾಧೀಶರು ಏಪ್ರಿಲ್‌ 7 ರಂದು ಬೆಂಗಳೂರಿನಲ್ಲಿ ಸಭೆ ನಡೆಸಿದ್ದರು.

ಚಿತ್ರದುರ್ಗ ಬೃಹನ್ಮಠದ ಮುರಾಘಾ ಶರಣರು, ಭಾಲ್ಕಿ, ನಾಗನೂರು, ಗದಗಿನ ತೋಂಟದಾರ್ಯ ಸ್ವಾಮೀಜಿ, ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ  ಹಾಗೂ ಬಸವ ಧರ್ಮ ಪೀಠಧ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಲಿಂಗಾಯತ ವಿರಕ್ತ ಮಠಾಧೀಶರ ಸಭೆಯಲ್ಲಿ “ಸಹಕಾರ ಕೊಟ್ಟ ಸರ್ಕಾರಕ್ಕೆ ಸಹಕಾರ’ ಎಂದು ಪರೋಕ್ಷವಾಗಿ ಕಾಂಗ್ರೆಸ್‌ಗೆ ಬೆಂಬಲಿಸುವ ರಾಜಕೀಯ ನಿರ್ಣಯ ಕೈಗೊಂಡಿರುವುದು ಇದಕ್ಕೆಲ್ಲಾ ಮೂಲ ಕಾರಣ ಎಂದು ಹೇಳಲಾಗಿದೆ.

ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು ಎಂದು ಹೇಳುವ ಮಠಾಧೀಶರೇ ಬಹಿರಂಗವಾಗಿ ಒಂದು ಪಕ್ಷದ ಪರವಾಗಿ ರಾಜಕಾರಣ ಮಾಡಿರುವುದು ಧರ್ಮದ ಹೋರಾಟಕ್ಕೆ ಕಪ್ಪು ಚುಕ್ಕೆ ಇಟ್ಟಂತಾಗಿದೆ ಎಂಬ ಅಭಿಪ್ರಾಯ ಮಹಾಸಭೆಯ ನಾಯಕರಲ್ಲಿ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

ಸಮಾಜದ ಒಳಿತಿಗಾಗಿ ನಡೆದ ಹೋರಾಟ ರಾಜಕೀಯಕ್ಕೆ ಬಲಿಯಾಗಬಾರದು ಎಂಬುದು ಹೊರಟ್ಟಿ ಅವರ ವಾದ. ಅಲ್ಲದೇ, ಚುನಾವಣೆ ಮುಗಿಯುವವರೆಗೂ ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತು ಯಾವುದೇ ಸಭೆ ಸಮಾರಂಭ ನಡೆಸುವುದು, ಸ್ವಾಮೀಜಿಗಳು ಸಭೆ ನಡೆಸುವುದು ಬೇಡ. ಒಂದು ಪಕ್ಷದ ಕಡೆ ವಾಲುವುದು ಬೇಡ.ಇದರಿಂದ ಧರ್ಮ ಹೋರಾಟದ ಮಹತ್ವ ಕಳೆದುಕೊಳುತ್ತದೆ ಎಂಬ ನಿಲುವು ಅವರದು ಎನ್ನಲಾಗಿದೆ.ಆದರೆ, ಮಹಾಸಭಾದಲ್ಲಿರುವ ಕೆಲವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನ ಮಾಡುವ ವಿಚಾರ ಹಾಗೂ ಕಾಂಗ್ರೆಸ್‌ಗೆ ಬಹಿರಂಗವಾಗಿ ಬೆಂಬಲ ನೀಡಿದರೆ ತಪ್ಪೇನು ಎಂಬ ಧೋರಣೆ ಹೊಂದಿದ್ದಾರೆ.

ಒಳ್ಳೆಯ ಬೆಳವಣಿಗೆಯಲ್ಲ
ಲಿಂಗಾಯತ ಧರ್ಮದ ಹೋರಾಟ ಯಾವುದೇ ಒಂದು ರಾಜಕೀಯ ಪಕ್ಷದ ಹೋರಾಟವಲ್ಲ. ಇದು ಸಮುದಾಯದ ಹೋರಾಟ. ಚುನಾವಣೆ ಲಾಭಕ್ಕಾಗಿ ಇಡೀ ಸಮುದಾಯವನ್ನು ಬಳಸಿಕೊಳ್ಳುವುದು ಸರಿಯಲ್ಲ. ಮಹಾಸಭೆಯಲ್ಲಿ ಎಲ್ಲ ರಾಜಕೀಯ ಪಕ್ಷದ ಮುಖಂಡರಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡುವಂತೆ ಮಾತೆ ಮಹಾದೇವಿ ಹೇಳಿಕೆ ನೀಡುವುದು ಒಳ್ಳೆಯ ಬೆಳವಣಿಗೆಯಲ್ಲ
.
– ಬಸವರಾಜ್‌ ಹೊರಟ್ಟಿ, ಜಾಗತಿಕ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ.

ಜಾಗತಿಕ ಲಿಂಗಾಯತ ಮಹಾಸಭೆ ವತಿಯಿಂದ ಏಪ್ರಿಲ್‌ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನ ಮಾಡಬೇಕೆಂದು ಮಠಾಧೀಶರ ಸಭೆಯಲ್ಲಿ ನಿರ್ಣಯಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಿಎಂಗೆ ಸನ್ಮಾನ ಮಾಡುವುದು ನೀತಿ ಸಂಹಿತೆ ವ್ಯಾಪ್ತಿಗೆ ಬರುತ್ತದೆಯೇ ಎಂದು ನೋಡುತ್ತಿದ್ದೇವೆ. ರಾಷ್ಟ್ರೀಯ ಬಸವ ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಖ್ಯಮಂತ್ರಿಯವರನ್ನು ಸನ್ಮಾನಿಸಲಾಗುವುದು.
– ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಪೀಠ, ಕೂಡಲ ಸಂಗಮ.
 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.