ಲಿಂಗಾಯತ ಧರ್ಮ ಸಚಿವರಲ್ಲೇ ಒಡಕು


Team Udayavani, Sep 11, 2017, 6:00 AM IST

tumkur-sri.jpg

ಲಿಂಗಾಯಿತ ಧರ್ಮ ವಿಚಾರ ಮಹತ್ವದ ಘಟ್ಟ ತಲುಪಿದ್ದು ಸಿದ್ಧಗಂಗಾ ಶ್ರೀಗಳೇ ಪ್ರತ್ಯೇಕ ಧರ್ಮಕ್ಕೆ ಬೆಂಬಲ ನೀಡಿದ್ದಾರೆ ಎಂದು ಎಂ.ಬಿ. ಪಾಟೀಲ್‌ ಹೇಳಿದ್ದಾರೆ. ವಿರಕ್ತ, ಪಂಚಪೀಠ ಮತ್ತು ತಮ್ಮದೇ ಪಕ್ಷದ ಕೆಲ ನಾಯಕರ ವಿರುದ್ಧ ಕಿಡಿ ಕಾರಿರುವ ರಾಯರಡ್ಡಿ ಪ್ರತ್ಯೇಕ ಧರ್ಮ ಬೇಕು ಎಂದಿದ್ದಾರೆ. ಆದರೆ ಈಶ್ವರ ಖಂಡ್ರೆ ಒಡಕಿನ ಮಾತು ಬೇಡ ಎಂದಿದ್ದಾರೆ.

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ತುಮಕೂರಿನ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಬೆಂಬಲ ಸಿಕ್ಕಿದ್ದು, ನಮ್ಮ ಹೋರಾಟಕ್ಕೆ ಬಲ ಬಂದಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪೌರಾಡಳಿತ ಸಚಿವ ಈಶ್ವರ ಖಂಡ್ರೆ ಅವರು, ಮಾತನಾಡಿ ತಮ್ಮೊಳಗಿನವರನ್ನೇ ನಮ್ಮವರು ಅಪ್ಪಿಕೊಳ್ಳುತ್ತಿಲ್ಲ. ಇಂಥವರು ಬಸವಣ್ಣ ಸ್ಥಾಪಿಸಿದ ಸಮಾಜದ ವಾರಸುದಾರರಾಗುತ್ತಾರೆಯೇ ಎಂದು ಪ್ರಶ್ನಿಸಿ, ಪ್ರತ್ಯೇಕ ಧರ್ಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಖಾಸಗಿ ಹೋಟೆಲ್‌ವೊಂದರಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಎಂ.ಬಿ. ಪಾಟೀಲ್‌, “ಬರೀ ಲಿಂಗಾಯತ ಧರ್ಮ ಆಗಬೇಕು. ವೀರ ಶೈವರು ಇತ್ತೀಚೆಗೆ ಸೇರಿಕೊಂಡವರು. ಹೀಗಾಗಿ ನೀವು ಹೋರಾಟ ಮುಂದುವರಿಸಿಕೊಂಡು ಹೋಗಿ’ ಎಂದು ಸಿದ್ದಗಂಗಾ ಶ್ರೀಗಳೇ ಸ್ಪಷ್ಟವಾಗಿ ಹೇಳಿದ್ದಾರೆ. ಪ್ರಮಾಣವಾಗಿ ಹೇಳುತ್ತೇನೆ, ಶ್ರೀಗಳು ಏನು ಹೇಳಿದ್ದಾರೋ ಅದನ್ನಷ್ಟೇ ಹೇಳಿದ್ದೇನೆ. ಇದರಲ್ಲಿ ಒಂದಕ್ಷರವೂ ಸುಳ್ಳಿಲ್ಲ ಎಂದಿದ್ದಾರೆ.
ಲಿಂಗಾಯತ ಸಮುದಾಯಕ್ಕೆ ಸಿದ್ದಗಂಗಾ ಶ್ರೀಗಳೇ ಸುಪ್ರೀಂ. ಆಧುನಿಕ ಬಸವಣ್ಣ ಎನಿಸಿಕೊಂಡಿರುವ ಅವರು ಹೇಳಿದ್ದೇ ಅಂತಿಮ. ಹೀಗಾಗಿ ಇನ್ನು ಮುಂದೆ ನಮ್ಮ ಹೋರಾಟಕ್ಕೆ ಯಾವ ಬುದ್ಧಿಜೀವಿಗಳ ಮಾರ್ಗದರ್ಶನ ಅಥವಾ ಇನ್ಯಾರಧ್ದೋ ಸ್ಪಷ್ಟೀಕರಣ ಬೇಕಾಗಿಲ್ಲ ಎಂದು ಹೇಳಿದ್ದಾರೆ.

ತುಮಕೂರು ಸಿದ್ದಗಂಗಾ ಮಠದ ವತಿಯಿಂದ ಆರಂಭಿಸಿರುವ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಉದ್ಘಾಟನಾ ಸಮಾ ರಂಭದ ಬಳಿಕ ಶ್ರೀಗಳನ್ನು ಭೇಟಿ ಯಾಗಿದ್ದೆ. ಈ ಸಂದರ್ಭದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ವಿವರಿಸಿ ಅಭಿಪ್ರಾಯ ಕೇಳಿದೆ. ಈ ಸಂದರ್ಭದಲ್ಲಿ ಶ್ರೀಗಳು, ಲಿಂಗಾಯತ ಸ್ವತಂತ್ರ ಧರ್ಮವಾಗಬೇಕೆಂದು ಅಭಿಪ್ರಾಯಿಸಿದರು ಎಂದು ಸಚಿವರು ಹೇಳಿದರು.

ಅಷ್ಟರಲ್ಲಿ ಸ್ವಾಮೀಜಿಯವರ ಜತೆಗಿದ್ದವರೊಬ್ಬರು ಲಿಂಗಾಯತ ಮತ್ತು ವೀರಶೈವ ಎಂಬುದು ಒಂದೇನಾ ಅಥವಾ ಪ್ರತ್ಯೇಕವೇ ಎಂದು ಪ್ರಶ್ನಿಸಿದಾಗ ಶ್ರೀಗಳು, ಬರೀ ಲಿಂಗಾಯತ ಧರ್ಮ ಆಗಬೇಕು. ವೀರಶೈವ ಎಂಬುದು ಇತ್ತೀಚೆಗೆ ಸೇರಿಕೊಂಡಿದ್ದು ಎಂದು ಸ್ಪಷ್ಟಪಡಿಸಿದರಲ್ಲದೆ, ಆ ನಿಟ್ಟಿನಲ್ಲಿ ಹೋರಾಟ ಮುಂದುವರಿಸಿ ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ನನ್ನೊಂದಿಗೆ ಡಾ.ಜಯಣ್ಣ, ಸಿದ್ದಗಂಗಾ ಟ್ರಸ್ಟ್‌ನ ಶಿವಕುಮಾರ್‌, ಕಣ್ಣೂರು ಮಠದ ಸ್ವಾಮೀಜಿಗಳು ಮತ್ತು ಸಿದ್ದಗಂಗಾ ಶ್ರೀಗಳ ಇಬ್ಬರು ಸೇವಕರಿದ್ದರು ಎಂದು ಎಂ.ಬಿ.ಪಾಟೀಲ್‌ ತಿಳಿಸಿದರು.

ಇನ್ಯಾರ ಮಾರ್ಗದರ್ಶನವೂ ಬೇಕಾಗಿಲ್ಲ
ಸಚಿವರಾದ ಈಶ್ವರ ಖಂಡ್ರೆ, ಶಾಮನೂರು ಶಿವಶಂಕರಪ್ಪ ಅವರು ಲಿಂಗಾಯತ ಪ್ರತ್ಯೇಕ ಧರ್ಮ, ವೀರಶೈವ-ಲಿಂಗಾಯತ ವಿಭಜನೆ ಮಾಡುವ ಪ್ರಯತ್ನಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಈ ವಿಚಾರದಲ್ಲಿ ನಮ್ಮನ್ನು ನಿಂದಿಸುತ್ತಿರುವವರೆಲ್ಲರೂ ನಮ್ಮ ಬಂಧುಗಳು. ಯಾರೇನೇ ಹೇಳಿದರೂ ಅದಕ್ಕೆ ಉತ್ತರ ಕೊಡುವ ಅಗತ್ಯ ಇಲ್ಲ. ಸಿದ್ದಗಂಗಾ ಶ್ರೀಗಳು ನಮ್ಮೊಂದಿಗೆ ಆಡಿರುವ ಮಾತುಗಳೇ ಎಲ್ಲದಕ್ಕೂ ಉತ್ತರ ಎಂದು ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.