ಲಿಂಗಾಯುತ ಸಭೆ ಮೂಡದ ಒಮ್ಮತ


Team Udayavani, Sep 14, 2017, 6:00 AM IST

170913kpn7.jpg

ಬೆಂಗಳೂರು: ವೀರಶೈವ ಲಿಂಗಾಯತ ಪ್ರತ್ಯೇಕತೆಯ ಗೊಂದಲ ನಿವಾರಣೆಗೆ ನಡೆದ ಸಮುದಾಯದ ಮುಖಂಡರ ಸಭೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ವಿಫ‌ಲವಾಗಿದ್ದು, ವಾರದಲ್ಲಿ ಮತ್ತೂಂದು ಸಭೆ ಕರೆಯಲು ನಿರ್ಧರಿಸಲಾಗಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್‌ ಪಾಟೀಲ್‌ ಮುಂದಾಳತ್ವದಲ್ಲಿ ಬೆಂಗಳೂರಿನ ಅವರ ನಿವಾಸದಲ್ಲಿ ಬುಧವಾರ ಈ ಸಭೆ ನಡೆಯಿತು. ಅಖೀಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮಹಾಸಭೆಯ ಪದಾಧಿಕಾರಿಗಳು ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮ ಪ್ರತಿಪಾದಿಸುವ ಬಸವರಾಜ ಹೊರಟ್ಟಿ ಮತ್ತು ಬಸವರಾಜ ರಾಯರಡ್ಡಿ ಸೇರಿದಂತೆ ಮುಂಚೂಣಿ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಇನ್ನೊಬ್ಬ ಮುಖಂಡ ಎಂ.ಬಿ. ಪಾಟೀಲ್‌ ಗೈರಾಗಿದ್ದರು.

ಸುಮಾರು ಎರಡೂವರೆ ಗಂಟೆ ನಡೆದ ಸಭೆಯಲ್ಲಿ ಎರಡೂ ಬಣದವರು ಸಭೆಯಲ್ಲಿ ತಮ್ಮದೇ ಆದ ವಾದ ಮಂಡಿಸಿದ್ದಾರೆ. ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಎನ್ನುವುದನ್ನು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಮಾಡುವವರು ಪ್ರತಿಪಾದಿಸಿದ್ದಾರೆ. ಅಲ್ಲದೇ ವೀರಶೈವ ಪದ ಸೇರಿಸಿ ಪ್ರತ್ಯೇಕ ಧರ್ಮದ ಬೇಡಿಕೆ ಇಟ್ಟರೆ ಮಾನ್ಯತೆ ದೊರೆಯುವುದಿಲ್ಲ ಎಂಬ ವಾದವನ್ನು ಅಲ್ಲಿಯೂ ಮಂಡಿಸಿದ್ದಾರೆ ಎಂದು ತಿಳಿದು ಬಂದಿದೆ. ಲಿಂಗಾಯತ ಪ್ರತ್ಯೇಕ ಹೋರಾಟಗಾರರ ವಾದಕ್ಕೆ ಮಹಾಸಭೆಯ ಮುಖಂಡರು ಪ್ರತ್ಯುತ್ತರವಾಗಿ ತಮ್ಮ ಬಳಿಯ ದಾಖಲೆಗಳನ್ನು ತೋರಿಸುವ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರತ್ಯೇಕ ಧರ್ಮದ ಬೇಡಿಕೆಯಲ್ಲಿ ವೀರಶೈವ ಪದ ಸೇರ್ಪಡೆ ಮಾಡಿರುವುದರಿಂದ ಕೇಂದ್ರ ಸರ್ಕಾರ ತಿರಸ್ಕಾರ ಮಾಡಿಲ್ಲ ಎಂಬ ವಾದವನ್ನು ಮಹಾಸಭೆಯ ಮುಖಂಡರು ಮಾಡಿದ್ದಾರೆ. ಹೀಗಾಗಿ ಎರಡೂ ಬಣದ ನಾಯಕರ ವಾದದಿಂದ ಯಾವುದೇ ಒಂದು ತೀರ್ಮಾನಕ್ಕೆ ಬರಲು ಸಾಧ್ಯವಾಗದೇ ಬುಧವಾರ ನಡೆದ ಸಭೆ ವಿಫ‌ಲವಾಗಿದೆ. ಸಭೆಯಲ್ಲಿ ಎಲ್ಲ ನಾಯಕರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಿದ್ದರಿಂದ ಸಾಕಷ್ಟು ಸಮಯ ವ್ಯರ್ಥವಾಗಿದೆ. ಹೀಗಾಗಿ ಉಳಿದ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದ್ದರಿಂದ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ಸಭೆಯನ್ನು ಮುಕ್ತಾಯಗೊಳಿಸಿದ್ದಾರೆ ಎಂಬ ಮಾತು ಕೇಳಿ ಬಂದಿದೆ.

ಸಭೆಯಲ್ಲಿ ಆರೆಸ್ಸೆಸ್‌ ಹಾಗೂ ಬಿಜೆಪಿ ವಿರುದ್ಧವೂ  ಚರ್ಚಿಸಲಾಗಿದೆ. ಆರೆಸ್ಸೆಸ್‌ ನಮ್ಮನ್ನೂ ಹಿಂದೂ ಧರ್ಮದಲ್ಲಿಯೇ ಉಳಿಯುವಂತೆ ಮಾಡುತ್ತಿದೆ. ಲಿಂಗಾಯತರನ್ನು ತುಳಿಯುವ ಪ್ರಯತ್ನ ಮಾಡುತ್ತಿದೆ ಎಂದು ಕೇಲವರು ಆರೋಪ ಮಾಡಿದ್ದಾರೆ ಎಂದು ಹೇಳಲಾಗಿದೆ.

ತಜ್ಞರ ಸಮಿತಿ: ವೀರಶೈವ ಮತ್ತು ಲಿಂಗಾಯತ ಎರಡೂ ಬೇರೆ ಎನ್ನುವುದನ್ನು ವಾದ ಮಾಡುತ್ತಿರುವ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಗಾರರು, ಯಾವ ಹೆಸರಿಗೆ ದಾಖಲೆಗಳು, ಪುರಾವೆಗಳಿದ್ದಾವೆ ಎನ್ನುವುದನ್ನು ಪರಿಶೀಲಿಸಲು ಕಾನೂನು ಮತ್ತು ಧಾರ್ಮಿಕ ವಿಷಯದಲ್ಲಿ ಪ್ರಾವಿಣ್ಯತೆ ಪಡೆದಿರುವ ತಜ್ಞರ ಸಮಿತಿ ರಚಿಸುವಂತೆ ಸಭೆಯಲ್ಲಿ ಸಲಹೆ ನೀಡಿದ್ದಾರೆ. ಅವರ ಸಲಹೆಯನ್ನು ಮಹಾಸಭೆಯ ಮುಖಂಡರು ಒಪ್ಪಿಕೊಂಡಿದ್ದು, ಮುಂದಿನ ಸಭೆಯಲ್ಲಿ ತಜ್ಞರ ಸಮಿತಿ ನೇಮಕ ಮಾಡುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿದು ಬಂದಿದೆ.

ಮಹಾಸಭೆಗೆ ಶರಣು: ವೀರಶೈವ ಮಹಾಸಭೆಗೂ ಲಿಂಗಾಯತರಿಗೂ ಸಂಬಂಧ ಇಲ್ಲ ಎಂದು ಬಂಡಾಯ ಎದ್ದಿದ್ದ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟಗಾರರು, ಎಲ್ಲರೂ ಒಂದಾಗಿ ಹೋಗುವ ಕುರಿತು ಮಹಾಸಭೆಯ ನಾಯಕರ ಮಾತುಗಳಿಗೆ ಬೆಲೆ ಕೊಡಲು ಒಪ್ಪಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಆದರೆ, ಲಿಂಗಾಯತ ಹೋರಾಟಗಾರರು ಈಗಾಗಲೇ ರಾಜ್ಯದ ವಿವಿಧ ಭಾಗಗಳಲ್ಲಿ ಸಮಾವೇಶಗಳನ್ನು ನಡೆಸಲು ತೀರ್ಮಾನಿಸಿರುವುದರಿಂದ ಅವುಗಳನ್ನು ತಕ್ಷಣಕ್ಕೆ ರದ್ದುಗೊಳಿಸಲು ಹಿಂದೇಟು ಹಾಕಿದ್ದಾರೆ. ಸಮಾವೇಶ ಆಯೋಜಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿ, ತಮ್ಮ ಪ್ರತ್ಯೇಕತೆಯ ಹೋರಾಟವನ್ನು ಇನ್ನೂ ಜೀವಂತವಾಗಿಡುವ ಸೂಚನೆ ನೀಡಿದ್ದಾರೆ.

ವೀರ-ಲಿಂಗಾಯತ ಎಂದ ರಾಯರೆಡ್ಡಿ: ವೀರಶೈವದಲ್ಲಿ ಶೈವ ಪದ ಬರುವುದರಿಂದ ಶೈವ ಪಂಥದ ಆಚರಣೆ ಆಗುತ್ತದೆ. ಅದು ಮತ್ತೆ ಹಿಂದೂ ಧರ್ಮವನ್ನೇ ಅನುಕರಣೆ ಮಾಡಿದಂತಾಗುತ್ತದೆ. ಹೀಗಾಗಿ ಹಿಂದೂ ಧರ್ಮದಿಂದ ಸಂಪೂರ್ಣ ಭಿನ್ನವಾಗಿರಬೇಕೆಂದರೆ, ಶೈವ ಆಚರಣೆಗಳನ್ನು ಬಿಡಬೇಕಾಗುತ್ತದೆ. ಅದಕ್ಕಾಗಿ ವೀರಶೈವದಲ್ಲಿರುವ “ಶೈವ’ ಪದವನ್ನು ಕೈ ಬಿಟ್ಟು ವೀರ-ಲಿಂಗಾಯತ ಎಂದು ಹೆಸರಿಡಿ ಎಂದು ಸಲಹೆ ನೀಡಿದರು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.