ತಮಿಳಿಗರಿಗೆ ವಿಶ್ವಮಾನವ ಸಂದೇಶ


Team Udayavani, Apr 9, 2018, 6:00 AM IST

Ban09041801Medn-REVISED.jpg

ಬೆಂಗಳೂರು: ಕಾವೇರಿ ವಿಚಾರದಲ್ಲಿ ಸದಾಸಂಘರ್ಷವನ್ನೇ ಕಾಣುವ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಸಂಬಂಧ ಬೆಸೆವ ಕೆಲಸಕ್ಕೆ ಮುಂದಾಗಿರುವ ಕುವೆಂಪು ಭಾಷಾ ಭಾರತಿ, ರಾಷ್ಟ್ರ ಕವಿ ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು ತಮಿಳುನಾಡಿಗೂ ಪಸರಿಸಲು ಚಿಂತನೆ ನಡೆಸಿದೆ.

ತಮ್ಮ ಕಾವ್ಯ, ಬರಹಗಳ ಮೂಲಕ ಯುಗದ ಕವಿ ಎಂದು ಬಣ್ಣಿಸಿಕೊಂಡ ಜ್ಞಾನಪೀಠ ಪುರಸ್ಕೃತ ಕುವೆಂಪು ಅವರ ಸಾಹಿತ್ಯ ತಮಿಳು ಭಾಷೆಯ ಓದುಗರಿಗೂ ಸಿಗಬೇಕು ಎಂಬ ಉದ್ದೇಶದೊಂದಿಗೆ ಕುವೆಂಪು ಭಾಷಾ ಪ್ರಾಧಿಕಾರ ರಾಷ್ಟ್ರಕವಿ ಕುವೆಂಪು ಅವರ ಕಾವ್ಯಗಳನ್ನು ಒಟ್ಟುಗೂಡಿಸಿ ಇದೀಗ ತಮಿಳು ಭಾಷೆಯಲ್ಲಿ “ಸಮಗ್ರ ಕಾವ್ಯವನ್ನು’ ಪ್ರಕಟಿಸುವ ಆಲೋಚನೆಯಲ್ಲಿದೆ.

ಈ ನಿಟ್ಟಿನಲ್ಲಿ ಈಗಾಗಲೇ ಹೆಜ್ಜೆ ಇರಿಸಿರುವ ಪ್ರಾಧಿಕಾರದೊಂದಿಗೆ ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಮತ್ತು ಬೆಂಗಳೂರಿನ ಖಾಸಗಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿಯೊಬ್ಬರು ಮಾತುಕತೆ ನಡೆಸಿದ್ದು ಕುವೆಂಪು ಅವರ ಕಾವ್ಯಗಳ ತಮಿಳು ಭಾಷಾಂತರ ಮಾಡಲು ಉತ್ಸುಕತೆ ತೋರಿದ್ದಾರೆ. ಈ ಬಗ್ಗೆ ಮಾತುಕತೆ ಪ್ರಗತಿಯಲ್ಲಿದೆ ಎಂದು ಪ್ರಾಧಿಕಾರದ ಮೂಲಗಳು ತಿಳಿಸಿವೆ.

ಈ ಹಿಂದೆ ಪ್ರಾಧಿಕಾರವು ಕುವೆಂಪು ಅವರ ಆಯ್ದ ಬರಹಗಳ ಸಂಕಲನವನ್ನು ತಮಿಳು ಭಾಷೆಯಲ್ಲಿ ಪ್ರಕಟಿಸಿದೆ. ಇದೀಗ ಕುವೆಂಪು ಅವರ ಸಮಗ್ರ ಕಾವ್ಯವನ್ನು ಪ್ರಕಟಿಸಲು ಮುಂದಾಗಿದೆ. ಅದಕ್ಕಾಗಿ ತಮಿಳು ಭಾಷೆಯ ಪ್ರಕಾಶಕರ ಹುಡುಕಾಟದಲ್ಲಿ ನಿರತವಾಗಿದೆ.  ತಮಿಳು ಭಾಷೆಯ ಪ್ರಕಾಶಕರು ಈ ಪುಸ್ತಕಗಳನ್ನು ಪ್ರಕಟಿಸಿದರೆ ಅವರು ಓದುಗರಿಗೆ ಹೆಚ್ಚು ತಲುಪಿಸುತ್ತಾರೆ. ಆಗ ನಮ್ಮ ಕೆಲಸಕ್ಕೂ ಸಾರ್ಥಕತೆ ಸಿಗುತ್ತದೆ ಎಂಬ ಉದ್ದೇಶದಿಂದ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ತಮಿಳು ಭಾಷೆಯ ಪ್ರಕಾಶರೊಂದಿಗೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದೆ.

ಕುವೆಂಪು ಅವರ ಸಮಗ್ರ ಕಾವ್ಯಗಳನ್ನು ತಮಿಳಿಗೆ ಭಾಷಾಂತರಿಸಬೇಕು ಎಂಬ ಆಶಯ ಪ್ರಾಧಿಕಾರದ ಮುಂದೆ ಇದೆ. ಈ ನಿಟ್ಟಿನಲ್ಲಿ ಮಾತುಕತೆಗಳು ಕೂಡ ಸಾಗಿದೆ. ಇದಕ್ಕೆ ಕಾಲ ಹಿಡಿಯಬಹುದು. ಒಂದೆರಡು ವರ್ಷದಲ್ಲಿ ಈ ಪ್ರಕ್ರಿಯೆ ಸಂಪೂರ್ಣ ಪೂರ್ಣಗೊಳ್ಳಲಿದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಮರುಳಸಿದ್ದಪ್ಪ “ಉದಯವಾಣಿ’ಗೆ ತಿಳಿಸಿದ್ದಾರೆ. ಕುವೆಂಪು ಅವರ ಕಾವ್ಯಗಳ ಜತೆಗೆ ಅವರ ಸಮಗ್ರ ನಾಟಕಗಳನ್ನೂ ತಮಿಳು ಭಾಷೆಗೆ ಭಾಷಾಂತರಿಸಬೇಕಂಬ ಆಲೋಚನೆ ಪ್ರಾಧಿಕಾರದ ಮುಂದೆ ಇದೆ. ಸಮಗ್ರ ಕಾವ್ಯಗಳ ತಮಿಳು ಭಾಷಾಂತರ ಕಾರ್ಯ ಮುಗಿದ ತಕ್ಷಣ ನಾಟಕಗಳನ್ನು ತಮಿಳಿಗೆ ಭಾಷಾಂತರಿಸುವ ಕಾರ್ಯ ನಡೆಯಲಿದೆ ಎಂದಿದ್ದಾರೆ.

ಕುವೆಂಪು ಅವರ ಸಮಗ್ರ ಕಾವ್ಯಗಳನ್ನು ತಮಿಳಿಗೆ ಭಾಷಾಂತರಿಸಬೇಕು ಎಂಬ ಆಶಯ ಪ್ರಾಧಿಕಾರದ ಮುಂದೆ ಇದೆ. ಈ ನಿಟ್ಟಿನಲ್ಲಿ ಮಾತುಕತೆಗಳು ಕೂಡ ಸಾಗಿದೆ. ಇದಕ್ಕೆ ಕಾಲ ಹಿಡಿಯಬಹುದು. ಒಂದೆರಡು ವರ್ಷದಲ್ಲಿ ಈ ಪ್ರಕ್ರಿಯೆ ಸಂಪೂರ್ಣ ಪೂರ್ಣಗೊಳ್ಳಲಿದೆ. ಅವರ ನಾಟಕಗಳನ್ನೂ ತಮಿಳಿಗೆ ಭಾಷಾಂತರಿಸುವ ಉದ್ದೇಶವಿದೆ.
– ಡಾ.ಕೆ.ಮರುಳಸಿದ್ದಪ್ಪ, ಕುವೆಂಪು ಭಾಷಾ ಭಾರತಿ ಪ್ರಧಿಕಾರದ ಅಧ್ಯಕ್ಷ

ನಾವೆಲ್ಲರೂ ದ್ರಾವಿಡ ಭಾಷೆಯ ಸೋದರರು. ಕುವೆಂಪು ಅವರ ಸಾಹಿತ್ಯಗಳು, ನಾಟಕಗಳು ಆಂಗ್ಲ, ಹಿಂದಿ ಭಾಷೆಗಳಿಗೆ ಭಾಷಾಂತರಿಸುವುದು ಬೇರೆ ವಿಚಾರ.ಆದರೆ, ಅವು ತೆಲಗು, ತಮಿಳು ಮತ್ತು ಮಲೆಯಾಳಂ ಸೇರಿದಂತೆ ನಮ್ಮ ನೆರೆ ಹೊರೆಯ ಭಾಷೆಗಳಲ್ಲಿ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಬಂದಿರುವ ಆಲೋಚನೆ ಪ್ರಶಂಸನೀಯ.
– ಹಂಪ.ನಾಗರಾಜಯ್ಯ, ಸಾಹಿತಿ

ಕುವೆಂಪು ಅವರ ಸಮಗ್ರ ಕಾವ್ಯಗಳು ಕೇವಲ ಕನ್ನಡಕ್ಕೆ ಮಾತ್ರ ಸೀಮಿತವಾಗಬಾರದು. ಎಲ್ಲಾ ಭಾಷೆಗಳಿಗೂ ತರ್ಜುಮೆಯಾಗಿ ಅಲ್ಲಿನ ಓದುಗರಿಗೂ ಲಭ್ಯವಾಗಬೇಕು. ಸಮರ್ಥ ಭಾಷಾಂತರಗಾರರಿಂದಲೇ ಈ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಕೆಲಸ ಸಂತಸ ಪಡುವಂತಹದ್ದು.
 - ವೈದೇಹಿ, ಖ್ಯಾತ ಲೇಖಕಿ

ಕುವೆಂಪು ಅವರ ಕವಿತೆಗಳ ಪೈಕಿ ಶೇ. 60ರಿಂದ 70ರಷ್ಟು ಕವಿತೆಗಳು ಸರಳ ಮತ್ತು ನೇರವಾಗಿವೆ. ಭಾಷಾಂತರಕ್ಕೂ ಒಗ್ಗುತ್ತವೆ. ರಾಮಾಯಾಣ ದರ್ಶನಂ ಸೇರಿದಂತೆ ಕೆಲವು ಕಾವ್ಯಗಳನ್ನು ಬಿಟ್ಟು ಉಳಿದವು ಅನುವಾದಕ್ಕೆ ಸುಲಭವಾಗಿವೆ. ಕುವೆಂಪುರ ಅವರ ಕಾವ್ಯಗಳು ತಮಿಳು ಅಷ್ಟೇ ಅಲ,ತೆಲುಗು ಸೇರಿದಂತೆ ಎಲ್ಲಾ ಭಾಷಗಳಲ್ಲೂ ದೊರೆಯುವಂತಾಗಬೇಕು.
– ಬಿ.ಆರ್‌.ಲಕ್ಷ್ಣಣ್‌ ರಾವ್‌, ಕವಿ

ಕುವೆಂಪು ಅವರ ಸಮಗ್ರ ಕಾವ್ಯಗಳನ್ನು ತಮಿಳಿಗೆ ಭಾಷಾಂತರಿಸುವ ಕಾರ್ಯಕ್ಕೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಮುಂದಾಗಿರುವುದು ಸಂತೋಷದ ವಿಷಯ. ಕುವೆಂಪು ಅಷ್ಟೇ ಅಲ್ಲ, ತೇಜಸ್ವಿ, ಲಂಕೇಶ್‌ ಮತ್ತು ಅನಂತ ಮೂರ್ತಿ ಸೇರಿದಂತೆ ಹಲವು ಸಾಹಿತಿಗಳ ಕೃತಿಗಳು ಬೇರೆ-ಬೇರೆ ಭಾಷೆಗಳಿಗೆ ಭಾಷಾಂತರವಾಗಬೇಕು.
– ಕುಂ.ವೀರಭದ್ರಪ್ಪ, ಖ್ಯಾತ ಕಾದಂಬರಿಕಾರ

– ದೇವೇಶ್‌ ಸೂರಗುಪ್ಪ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.