ಮದ್ಯ ಪರವಾನಗಿ: ಎಸ್ಸಿ, ಎಸ್ಟಿಗಿಲ್ಲ ರಿಯಾಯ್ತಿ


Team Udayavani, Jan 21, 2017, 11:44 AM IST

highcourt.jpg

ಬೆಂಗಳೂರು: ರಾಜ್ಯ ಅಬಕಾರಿ ನಿಯಮಕ್ಕೆ ತಿದ್ದುಪಡಿ ತಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮದ್ಯ ಮಾರಾಟ ಪರವಾನಗಿ ಹಂಚಿಕೆಯಲ್ಲಿನ ನಿಯಮದ ಸಡಿಲಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್‌ ವಿಭಾಗೀಯ ಪೀಠ ಎತ್ತಿಹಿಡಿದಿದೆ.|

ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಕೆಲ ಮದ್ಯದಂಗಡಿ ಮಾಲೀಕರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಜಯಂತ್‌ ಪಟೇಲ್‌ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರಿದ್ದ ವಿಭಾಗೀಯ ಪೀಠ ಮೇಲ್ಮನವಿಯನ್ನು ಗುರುವಾರ ವಜಾಗೊಳಿಸಿತು. ಆ ಮೂಲಕ ಏಕಸದಸ್ಯ ಪೀಠದ ಆದೇಶ ಮಾನ್ಯ ಮಾಡಿದೆ.

ಈ ಮಧ್ಯೆ ರಾಜ್ಯ ಸರ್ಕಾರದ ಅಧಿಸೂಚನೆಗೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡುವ ಮುನ್ನ (2016ರ ಮಾರ್ಚ್‌ 11) ಮುನ್ನ ತಿದ್ದುಪಡಿ ನಿಯಮಗಳನ್ವಯ ಮದ್ಯ ಮಾರಾಟ ಪರವಾನಗಿ ಪಡೆದು ಮದ್ಯದಂಗಡಿ ತೆರದು ವ್ಯಾಪಾರ ನಡೆಸುತ್ತಿವವರ ಪರವಾನಗಿ ಮುಂದುವರಿಯಲಿದೆ. ಆದರೆ, ಪರವಾನಗಿ ಅವಧಿ ಮುಗಿದ ಬಳಿಕ ನವೀಕರಣ ಮಾಡಬಾರದು ಎಂದು ಸರ್ಕಾರಕ್ಕೆ ವಿಭಾಗೀಯ ಪೀಠ ಆದೇಶದಲ್ಲಿ ನಿರ್ದೇಶಿಸಿದೆ.

ಪ್ರಕರಣವೇನು?: ರಾಜ್ಯ ಸರ್ಕಾರ, ಪರಿಶಿಷ್ಟ ವರ್ಗಗಳಿಗೆ ಸಿಎಲ್‌-7ಡಿ ಮದ್ಯಮಾರಾಟ ಪರವಾನಗಿ ಪಡೆಯಲು ಇದ್ದ ಷರತ್ತು ಸಡಿಲಿಸಿ 2014ರ ಜೂನ್‌ 9ರಂದು ಅಧಿಸೂಚನೆ ಹೊರಡಿಸಿತ್ತು. ನಗರ ಪ್ರದೇಶದ ವ್ಯಾಪ್ತಿಯ ವಸತಿ ಸಹಿತ ಪ್ರದೇಶದಲ್ಲಿ ಮದ್ಯ ಮಾರಾಟ ಪರವಾನಗಿ ಪಡೆಯಬೇಕಾದರೆ ಸಾಮಾನ್ಯ ವರ್ಗಕ್ಕೆ ಕನಿಷ್ಠ 30 ಹಾಸಿಗೆಗಳುಳ್ಳ ಹೋಟೆಲ್‌ಹೊಂದಿರಬೇಕು ಮತ್ತು ಇತರೆ ಭಾಗಗಳಲ್ಲಿ 20 ಹಾಸಿಗೆಗಳುಳ್ಳ ಹೋಟೆಲ್‌ ಹೊಂದಿರುವುದು ಕಡ್ಡಾಯ ಎಂದು ಅಧಿಸೂಚನೆಯಲ್ಲಿ ಸರ್ಕಾರ ಷರತ್ತು ವಿಧಿಸಿತ್ತು.

ಆದರೆ, ಪರಿಶಿಷ್ಟರಿಗೆ ನಗರ ಪ್ರದೇಶಗಳಲ್ಲಿ 15 ಮತ್ತು ಇತರೆ ಭಾಗಗಳಲ್ಲಿ 10 ಹಾಸಿಗೆಗಳುಳ್ಳ ಹೋಟೆಲ್‌ ಹೊಂದಿದ್ದರೆ ಸಾಕು ಎಂದು ರಿಯಾಯ್ತಿ ನೀಡಿತ್ತು. ಸರ್ಕಾರದ ಈ ಕ್ರಮ ತಾರತಮ್ಯ ನೀತಿಯಿಂದ ಕೂಡಿದೆ ಎಂದು ಆರೋಪಿಸಿ ಬಿ.ಗೋವಿಂದರಾಜ ಹೆಡೆY ಎಂಬುವರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಆ ಅರ್ಜಿ ಪುರಸ್ಕರಿಸಿದ್ದ ನ್ಯಾಯಮೂರ್ತಿ ಡಾ.ವಿನೀತ್‌ ಕೊಠಾರಿ ಅವರಿದ್ದ ಏಕಸದಸ್ಯ ಪೀಠ ರಾಜ್ಯ ಸರ್ಕಾìದ ಆಧಿಸೂಚನೆ ರದ್ದುಪಡಿಸಿ 2016ರ ಜುಲೈ 22ರಂದು ಆದೇಶಿಸಿತ್ತು. ಮದ್ಯ ಮಾರಾಟ ಒಂದು ಅಪಾಯಕಾರಿ ವ್ಯಾಪಾರ. ಇಂಥ ವ್ಯಾಪಾರಕ್ಕೆ ಪರವಾನಗಿ ನೀಡುವ ವೇಳೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಡಗಡದವರಿಗೆ ರಿಯಾಯ್ತಿ ನೀಡುವ ಕ್ರಮ ಸೂಕ್ತವಲ್ಲ.

ಅಲ್ಲದೆ, ಪರಿಶಿಷ್ಟ ಸಮುದಾಯದವರಿಗೆ ಮದ್ಯ ಮಾರಾಟ ಪರವಾನಗಿ ಹಂಚಿಕೆಯಲ್ಲಿ ರಿಯಾಯ್ತಿ ನೀಡುವುದರಿಂದ ಸಮಾಜದಲ್ಲಿನ ಇತರೆ ಸಮುದಾಯಗಳ ನಡುವೆ ತಾರತಮ್ಯ ನೀತಿ ಅನುಸರಿಸಿದಂತಾಗುತ್ತದೆ. ಹೀಗಾಗಿ, ಸರ್ಕಾರದ ಅಧಿಸೂಚನೆ ಕಾನೂನು ಬಾಹಿರವಾಗಿದೆ ಎಂದು ಏಕಸದಸ್ಯ ಪೀಠ ತನ್ನ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಮದ್ಯದಂಗಡಿ ಪರವಾನಗಿ ಪಡೆದಿದ್ದ ಪರಿಶಿಷ್ಠ ಜಾತಿ ಹಾಗೂ ಪಂಗಡ ವರ್ಗದವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಮೇಲ್ಮನವಿ ವಜಾಗೊಳಿಸಿ ಏಕಸದಸ್ಯ ಪೀಠದ ಆದೇಶ ಮಾನ್ಯ ಮಾಡಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.