12ರಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ?
Team Udayavani, Apr 10, 2018, 6:15 AM IST
ಬೆಂಗಳೂರು: ಎಲ್ಲ ಪಕ್ಷಗಳಿಗಿಂತಲೂ ಮೊದಲೇ ಚುನಾವಣಾ ಪ್ರಚಾರ ಆರಂಭಿಸಿದ್ದ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಮಾತ್ರ ವಿಳಂಬ ನೀತಿ ಅನುಸರಿಸುತ್ತಿದ್ದು, ಆಕಾಂಕ್ಷಿಗಳಲ್ಲಿ ತಳಮಳ ಮೂಡಿಸಿದೆ.
ಅಭ್ಯರ್ಥಿಗಳ ಆಯ್ಕೆ ಕುರಿತಂತೆ ನವದೆಹಲಿಯಲ್ಲಿ ಸೋಮವಾರ ಕಾಂಗ್ರೆಸ್ ಚುನಾವಣಾ ಸಮಿತಿ ಅಧ್ಯಕ್ಷ$ಮಧುಸೂಧನ್ ಮಿಸಿŒ ನೇತೃತ್ವದ ಆರು ಜನರ ತಂಡ ಸುದೀರ್ಘ ಚರ್ಚೆ ನಡೆಸಿದೆ. ಆದರೆ, ಏ. 12ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮೂಲಗಳು ಹೇಳಿವೆ.
ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ರಾಜ್ಯ ಚುನಾವಣಾ ಸಮಿತಿ ಆಯ್ಕೆ ಮಾಡಿ ಕಳುಹಿಸಿರುವ ಪಟ್ಟಿ ಹಾಗೂ ಹೈಕಮಾಂಡ್ ಇತರೆ ಮೂಲಗಳಿಂದ ಪಡೆದಿರುವ ಮಾಹಿತಿ ಆಧರಿಸಿ ಪ್ರತಿ ಕ್ಷೇತ್ರಗಳ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕಸರತ್ತು ನಡೆಸಿದೆ. ಹೀಗಾಗಿ ಪಟ್ಟಿ ವಿಳಂಬವಾಗುತ್ತಿದೆ ಎನ್ನಲಾಗಿದೆ.
120 ಜನರ ಮೊದಲ ಪಟ್ಟಿ: ಹಾಲಿ ಶಾಸಕರು ಹಾಗೂ ಗೊಂದಲಗಳಿಲ್ಲದ ಕೆಲವು ಕ್ಷೇತ್ರಗಳಿಗೆ ಒಂದೇ ಹೆಸರಿರುವ ಕನಿಷ್ಠ 120 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸ್ಕ್ರೀನಿಂಗ್ ಕಮಿಟಿ ಆಯ್ಕೆ ಮಾಡಿದೆ. ಸೋಮವಾರ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಏಪ್ರಿಲ್ 11 ಮತ್ತು 12 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚಿಸಿ ಏಪ್ರಿಲ್ 12 ರಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ.
5000 ಒಳಗೆ ಸೋತವರಿಗೆ ಆದ್ಯತೆ: 2013ರ ವಿಧಾನಸಭೆ ಚುನಾವಣೆಯಲ್ಲಿ 5000 ಮತ್ತು ಅದಕ್ಕಿಂತ ಕಡಿಮೆ ಮತಗಳ ಅಂತರದಲ್ಲಿ ಸೋತ ಅಭ್ಯರ್ಥಿಗಳಿಗೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಡಬೇಕೆಂಬ ಅಭಿಪ್ರಾಯ ರಾಜ್ಯ ಚುನಾವಣಾ ಸಮಿತಿ ಮತ್ತು ಕೇಂದ್ರ ಚುನಾವಣಾ ಸಮಿತಿ ಸದಸ್ಯರಿಂದ ವ್ಯಕ್ತವಾಗಿರುವುದಾಗಿ ತಿಳಿದು ಬಂದಿದೆ. ಹೀಗಾಗ 5 ಸಾವಿರ ಮತಗಳ ಒಳಗೆ ಸೋತವರೆಲ್ಲರಿಗೂ ಟಿಕೆಟ್ ನೀಡಲು ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಕಳೆದ ಚುನಾವಣೆಯಲ್ಲಿ ಸುಮಾರು ಮೂವತ್ತು ಅಭ್ಯರ್ಥಿಗಳು ಐದು ಸಾವಿರ ಮತಗಳ ಅಂತರದಿಂದ ಸೋತಿದ್ದರು.
ಉಳಿದ ಸುಮಾರು ಎಂಭತ್ತು ಕ್ಷೇತ್ರಗಳಲ್ಲಿ ಎರಡು- ಮೂರು ಅಭ್ಯರ್ಥಿಗಳ ಹೆಸರುಗಳಿವೆ. ಹೀಗಾಗಿ ಅವುಗಳಲ್ಲಿ ಒಬ್ಬರ ಹೆಸರನ್ನು ಅಂತಿಮಗೊಳಿಸುವುದು ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಈ ಕಾರಣದಿಂದಲೇ ಅಂತಹ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಇನ್ನಷ್ಟು ವಿಳಂಬವಾಗಬಹುದು ಎನ್ನಲಾಗಿದೆ.
ಸಂಸದರೊಂದಿಗೆ ಸಭೆ:
ಸ್ಕ್ರೀನಿಂಗ್ ಕಮಿಟಿ ಸಭೆಗೆ ಹಾಜರಾಗುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ರಾಜ್ಯದ ಸಂಸದರೊಂದಿಗೆ ಸಭೆ ನಡೆಸಿ ಅವರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಟಿಕೆಟ್ ಅಂತಿಮಗೊಳಿಸುವ ಮುನ್ನ ಸಂಸದರ ಅಭಿಪ್ರಾಯವನ್ನೂ ಪಡೆದುಕೊಳ್ಳಬೇಕು ಎಂದು ಎಐಸಿಸಿ ಸ್ಪಷ್ಟ ಸೂಚನೆ ನೀಡಿರುವ ಕಾರಣ ಈ ಸಭೆ ನಡೆದಿದೆ.
ದೆಹಲಿಯಲ್ಲಿ ಬೀಡುಬಿಟ್ಟ ಆಕಾಂಕ್ಷಿಗಳು
ದೆಹಲಿಯಲ್ಲಿ ಟಿಕೆಟ್ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಆಕಾಂಕ್ಷಿಗಳೆಲ್ಲಾ ದೆಹಲಿಯಲ್ಲೇ ಬೀಡು ಬಿಟ್ಟಿದ್ದು, ತಮ್ಮ ನಾಯಕರ ಮೂಲಕ ಟಿಕೆಟ್ ಗಿಟ್ಟಿಸಲು ಕೊನೆ ಹಂತದ ಕಸರತ್ತು ನಡೆಸಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರಿದಿದ್ದು, ಮಂಗಳವಾರವೂ ಸಭೆ ನಡೆದು ಅಭ್ಯರ್ಥಿಗಳ ಒಂದು ಪಟ್ಟಿ ಅಂತಿಮಗೊಳಿಸಲಾಗುತ್ತದೆ. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ಪಟ್ಟಿ ಪ್ರಕಟಗೊಳ್ಳಬೇಕಿದ್ದು, ಕೆಲವರು ಅದುವರೆಗೂ ದೆಹಲಿಯಲ್ಲೇ ಮೊಕ್ಕಾಂ ಹೂಡುವ ಸಾಧ್ಯತೆ ಇದೆ. ಇನ್ನು ಕೆಲವರು ಮಂಗಳವಾರ ಬೆಂಗಳೂರಿಗೆ ವಾಪಸಾಗಿ ಮತ್ತೆ ಮಾ. 11 ಅಥವಾ 12ರಂದು ದೆಹಲಿಗೆ ತೆರಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್