ಸೆಂಟ್ರಲ್‌ ಜೈಲಿನಲ್ಲಿ ಸಾಹಿತ್ಯ ಸಾಂಗತ್ಯ


Team Udayavani, Oct 25, 2018, 11:56 AM IST

blore-6.jpg

ಬೆಂಗಳೂರು: ಜೈಲುಹಕ್ಕಿಗಳಿಗೆ ಮನಪರಿವರ್ತನೆ ಪಾಠ ಹೇಳಿಕೊಡಲು ಕನ್ನಡ ಪುಸ್ತಕ ಪ್ರಾಧಿಕಾರ ಮುಂದಾಗಿದೆ. ಬೆಳ್ಳಿ ಹಬ್ಬದ ಅಂಗವಾಗಿ ಪ್ರಾಧಿಕಾರ ಓದುಗರಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ “ನಿಮ್ಮ ಮನೆಗೆ ನಮ್ಮ ಪುಸ್ತಕ’ ಯೋಜನೆ ಆರಂಭಿಸಿದ್ದು, ಮನೆಗಳಿಗೆ ಸೀಮಿತವಾಗಿದ್ದ ಈ ಕಾರ್ಯಕ್ರಮವನ್ನು ಇದೇ ಮೊದಲ ಬಾರಿ ಜೈಲುವರೆಗೂ ಕೊಂಡೊಯ್ದಿದೆ. ಹೀಗಾಗಿ ಅ.26ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ “ನಿಮ್ಮ ಮನೆಗೆ ನಮ್ಮ ಪುಸ್ತಕ’ ಕಾರ್ಯಕ್ರಮ ನಡೆಯಲಿದೆ.

ಈ ಹಿಂದೆ ಪ್ರಾಧಿಕಾರ ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಅವರ ಬೆಂಗಳೂರಿನ ವಿಜಯನಗರ ನಿವಾಸ, ಹುಬ್ಬಳ್ಳಿಯಲ್ಲಿ ಸುನಂದಾ ಕಡಮೆ ಅವರ ಮನೆ, ಬಳ್ಳಾರಿಯ ಸಂಡೂರಿನಲ್ಲಿ ವಸುಮತಿ ಅವರ ನಿವಾಸ, ಚಿತ್ರದುರ್ಗದಲ್ಲಿ ಡಾ.ಬಿ.ರಾಜಶೇಖರಪ್ಪ ಅವರ ಮನೆ, ಡಾ.ಪ್ರಧಾನ ಗುರುದತ್ತ ಅವರ ಮೈಸೂರಿನ ಕುವೆಂಪು ನಗರದ ನಿವಾಸ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಓದುಗರ ವಲಯದಿಂದಲ್ಲೂ ಇದಕ್ಕೆ ಪ್ರಶಂಸೆ ವ್ಯಕ್ತವಾಗಿತ್ತು. ಈ ಮೆಚ್ಚುಗೆಯ ಹಿನ್ನೆಲೆಯಲ್ಲಿ ಜೈಲು ಕೈದಿಗಳಲ್ಲೂ ಬದಲಾವಣೆ ಗಾಳಿ ಬೀಸಲಿ ಎನ್ನುವ ಕಾರಣಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ.
 
ಸಾಹಿತಿಗಳ ಜತೆ ಕೈದಿಗಳ ಸಂವಾದ: ಕಾರ್ಯಕ್ರಮದಲ್ಲಿ ಸಾಹಿತಿಗಳೊಂದಿಗೆ ಕೈದಿಗಳು ಸಂವಾದ ನಡೆಯಲಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮಹಿಳಾ ಕೈದಿಗಳು ಸೇರಿದಂತೆ 300 ಕೈದಿಗಳು ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಹಿರಿಯ ಕವಿ ದೊಡ್ಡರಂಗೇಗೌಡ, ದಲಿತ ಕವಿ ಡಾ. ಸಿದ್ಧಲಿಂಗಯ್ಯ, ವೈದ್ಯ ಸಾಹಿತಿ ಡಾ.ಸಿ.ಆರ್‌. ಚಂದ್ರಶೇಖರ್‌ ಅವರೊಂದಿಗೆ ಕೈದಿಗಳು ಎರಡು ವರೆಗಂಟೆ ಸಂವಾದ ನಡೆಸಲಿದ್ದಾರೆ. ಸಾಹಿತ್ಯಾ ಭಿರುಚಿ ಹೊಂದಿರುವ ಹಲವು ಕೈದಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಪುಸ್ತಕಗಳ ಓದು ಮನಪರಿವರ್ತಗೆ ಯಾವ ರೀತಿಯಲ್ಲಿ ಸಹಾಯವಾಗಲಿದೆ ಎಂಬುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಂವಾದ ನಡೆಯಲಿದೆ ಎಂದು ಜೈಲಿನ ಹಿರಿಯ ಅಧಿಕಾರಿ ಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಜೈಲಿನಲ್ಲಿ 35 ಸಾವಿರ ಪುಸ್ತಕ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಗ್ರಂಥಾಲಯದಲ್ಲಿ ಸುಮಾರು ಮೂವತೈದು ಸಾವಿರ ಪುಸ್ತಕಗಳಿವೆ. ಇದರಲ್ಲಿ ರಾಷ್ಟ್ರಕವಿ ಕುವೆಂಪು, ವರ ಕವಿ ದ.ರಾ.ಬೇಂದ್ರೆ, ಮಾಸ್ತಿ ವೆಂಕಟೇಶ ಅಯ್ಯಂಗಾರ್‌, ಶಿವರಾಮ ಕಾರಂತ, ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪಿ.ಲಂಕೇಶ್‌, ಜಿ.ಎಸ್‌.ಶಿವರುದ್ರಪ್ಪ, ಯು.ಆರ್‌.ಅನಂತ ಮೂರ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ ಸೇರಿದಂತೆ ಹಲವು ಸಾಹಿತಿಗಳ ಕೃತಿಗಳು ಸೇರಿವೆ.

ಪ್ರತಿನಿತ್ಯ ಸುಮಾರು ಐದುನೂರು ಕೈದಿಗಳು ಗ್ರಂಥಾಲಯಕ್ಕೇ ಭೇಟಿ ನೀಡಿ ತಮಗೆ ಬೇಕಾದ ಪುಸ್ತಕಗಳನ್ನು ಓದುತ್ತಾರೆ. ಇನ್ನೂ ಕೆಲವರು ತಮಗೆ ಇಷ್ಟವಾದ ಪುಸ್ತಕಗಳನ್ನು ಕೋಣೆಗೆ ತೆಗೆದುಕೊಂಡು ಹೋಗಿ ಓದಿದ ನಂತರ ಮತ್ತೆ ಗ್ರಂಥಾಲಯಕ್ಕೆ ಮರಳಿಸುತ್ತಾರೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕ ಪಿ.ಎಸ್‌.ರಮೇಶ್‌ ಮಾಹಿತಿ ನೀಡಿದ್ದಾರೆ. 

ಗ್ರಂಥಾಲಯದಲ್ಲಿ ನಿತ್ಯ 25 ದಿನ ಪತ್ರಿಕೆಗಳನ್ನು ತರಿಸಲಾಗುತ್ತಿದೆ. ಹಲವು ಕೈದಿಗಳು ದಿನಪತ್ರಿಕೆ ಓದುವ ಹವ್ಯಾಸ ಹೊಂದಿದ್ದಾರೆ. ಇದರಲ್ಲಿ ಕೆಲವರಿಗೆ ಸಾಹಿತ್ಯದ ಅಭಿರುಚಿ ಇದ್ದು, ಪ್ರಾಧಿಕಾರದ ಈ ಕಾರ್ಯಕ್ರಮ ಕೈದಿಗಳಲ್ಲಿ ಓದಿನ ಅಭಿರುಚಿ ಬಿತ್ತಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹಿಳೆಯರಿಗಾಗಿ  ವಿಶೇಷ ಗ್ರಂಥಾಲಯವಿದ್ದು,ಇಲ್ಲಿ ಕೂಡ ಹಲವು ಪುಸ್ತಕಗಳು ಮತ್ತು ದಿನಪತ್ರಿಕೆಗಳನ್ನು ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೈದಿಗಳಿಗೆ ಉಚಿತ ಪುಸ್ತಕ 
ಪುಸ್ತಕ ಓದುವ ಸಂಸ್ಕೃತಿಯನ್ನು ಹುಟ್ಟುಹಾಕುವ ದೃಷ್ಟಿಯಿಂದ ಪ್ರಾಧಿಕಾರ “ನಿಮ್ಮ ಮನೆಗೆ ನಮ್ಮ ಪುಸ್ತಕ’ ಯೋಜನೆ ಜಾರಿಗೆ ತಂದಿದ್ದು, ಪ್ರತಿ ಮನೆಯಲ್ಲೂ ಗ್ರಂಥಾಲಯ ಇರಲಿ ಎಂಬ ಆಶಯ ಕೂಡ ಇದೆ. ಕೈದಿಗಳಲ್ಲಿ ಬದಲಾವಣೆ ತರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಇದೀಗ ಕೇಂದ್ರ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ. ಮನೋವಿಜ್ಞಾನ ಪುಸ್ತಕಗಳು ಸೇರಿದಂತೆ ವಿವಿಧ ಬಗೆಯ ಮೂರುನೂರು ಪುಸ್ತಕಗಳನ್ನು ಕೈದಿಗಳಿಗೆ ಉಚಿತವಾಗಿ ನೀಡಲಾಗುವುದು ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಪುಸ್ತಕ ಓದು ಹಲವು ಬದಲಾವಣೆಗೆ ಕಾರಣವಾಗುತ್ತದೆ. ಹೀಗಾಗಿ ಕೈದಿಗಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಿ, ಮನ ಪರಿವರ್ತನೆ ಮಾಡುವ ಆಶಯದೊಂದಿಗೆ ಕಾರ್ಯಕ್ರಮವನ್ನು ಕೇಂದ್ರ ಕಾರಾಗೃಹಕ್ಕೂ ವಿಸ್ತರಿಸಲಾಗಿದೆ.
 ●ಡಾ.ವಸುಂಧರಾ ಭೂಪತಿ, ಕರ್ನಾಟಕ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.