ಬಲೂನ್‌ ಸ್ಫೋಟಕ್ಕೆ ಬದುಕು ಬರಡು


Team Udayavani, Jun 15, 2018, 6:55 AM IST

nitrogen-balloon.jpg

ಮಂಡ್ಯ/ಶ್ರೀರಂಗಪಟ್ಟಣ: ಕೊಟ್ಟ ಮಾತು ತಪ್ಪುವುದರಲ್ಲಿ, ಅದರಲ್ಲೂ ಚುನಾವಣಾ ವೇಳೆ ನೀಡುವ ಭರವಸೆ ಮರೆಯುವವರಲ್ಲಿ ರಾಜಕಾರಣಿಗಳು ನಿಸ್ಸೀಮರು ಎಂಬುದಕ್ಕೆ ಇಲ್ಲೊಂದು ನೈಜ ಉದಾಹರಣೆ ಇದೆ…!

ಅದು ಮಾ.23. ವಿಧಾನಸಭಾ ಚುನಾವಣೆ ಕಾವೇರಿದ್ದ ಸಮಯ. ಶ್ರೀರಂಗ ಪಟ್ಟಣಕ್ಕೆ ಆಗಮಿಸುತ್ತಿದ್ದ
ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸ್ವಾಗತಕ್ಕೆ ಸಂತೆ ಮೈದಾನದಲ್ಲಿ ನಿರ್ಮಿಸುತ್ತಿದ್ದ ನೈಟ್ರೋಜನ್‌ ಬಲೂನ್‌ವೊಂದು
ಗಾಳಿಯ ಒತ್ತಡಕ್ಕೆ ಸ್ಫೋಟಗೊಂಡು 11 ಮಕ್ಕಳು ಗಾಯಗೊಂಡಿದ್ದರು. ಅಂದು ರಾಹುಲ್‌ ಗಾಂಧಿ ಅವರ
ಮುಂದೆಯೇ ಈ ಎಲ್ಲಾ ಮಕ್ಕಳಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಇದುವರೆಗೂ ಇತ್ತ ಸುಳಿದಿಲ್ಲ.

ಪರಿಹಾರದ ಮಾತಂತೂ ಇಲ್ಲವೇ ಇಲ್ಲ!
ಶಾಲೆಗೂ ಹೋಗಿಲ್ಲ: ಗಾಯಗೊಂಡ ಮಕ್ಕಳಲ್ಲಿ 9ನೇ ತರಗತಿ ಓದುತ್ತಿದ್ದ ಮಾದೇಶ್‌ ಎಂಬಾತನಿಗೆ ತೀವ್ರ
ಸುಟ್ಟಗಾಯಗಳಾಗಿತ್ತು. ಹಣೆ, ಕೆನ್ನೆ, ಎರಡೂ ಕೈಗಳು, ಎದೆಯ ಭಾಗಕ್ಕೆ ತೀವ್ರ ಸ್ವರೂಪದ ಗಾಯಗಳಾಗಿವೆ. 
ಇಂದಿಗೂ ಆತನಿಗೆ ಬಟ್ಟೆ ಹಾಕಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಶಾಲೆಗೂ ಹೋಗಲಾಗದೆ  ಮನೆಯಲ್ಲೇ 
ಉಳಿದುಕೊಂಡಿದ್ದಾನೆ. ಈತನ ಚಿಕಿತ್ಸಾ ವೆಚ್ಚ ಭರಿಸುವ ಶಕ್ತಿಯೂ ಹೆತ್ತವರಿಗಿಲ್ಲ. ಏನೂ ಅರಿಯದ ತನ್ನ
ಕಂದಮ್ಮನಿಗಾದ ಈ ದುಃಸ್ಥಿತಿ ನೆನೆದು ಹೆತ್ತ ತಾಯಿ ಹಿಡಿಶಾಪ ಹಾಕುತ್ತಿದ್ದಾಳೆ.

ತಂದೆಯದ್ದು ಗಾರೆ ಕೆಲಸ: ಪಟ್ಟಣದ ಕಾವೇರಿಪುರ ಬಡಾವಣೆಯಲ್ಲಿ ವಾಸವಾಗಿರುವ ಮಾದೇಶ್‌ ತಂದೆ
ಕುಮಾರ್‌ ಗಾರೆ ಕೆಲಸ ಮಾಡುತ್ತಿದ್ದು, ತಾಯಿ ಭಾಗ್ಯಮ್ಮ ಗೃಹಿಣಿಯಾಗಿದ್ದಾರೆ. ಮಗನಿಗೆ ಚಿಕಿತ್ಸೆ ಕೊಡಿಸಲು ದಂಪತಿ
ಪರದಾಟ ಹೇಳತೀರದಾಗಿದೆ. ಚಿಕಿತ್ಸಾ ವೆಚ್ಚ ದುಬಾರಿಯಾಗಿದ್ದೂ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಒಂದೆಡೆ ಸುಟ್ಟಗಾಯದಿಂದ ನರಳುತ್ತಿರುವ ಮಗನ ಸಂಕಟ ನೋಡಲಾಗದೆ, ಇನ್ನೊಂದೆಡೆ ಚಿಕಿತ್ಸೆಗೆ ತಗಲುವ
ವೆಚ್ಚವನ್ನೂ ಭರಿಸಲಾಗದೆ ಪರಿತಪಿಸುತ್ತಿದ್ದಾರೆ. ಈ ಕುಟುಂಬಕ್ಕೆ ಆರ್ಥಿಕ ನೆರವು ಬೇಕಾಗಿದೆ.

ನಮ್ಮದು ಕೂಲಿ ಕಾರ್ಮಿಕ ಕುಟುಂಬ. ಮಗ ಸುಟ್ಟ ಗಾಯಗಳಿಂದ ನರಳುತ್ತಿದ್ದಾನೆ. ಅದನ್ನು ನೋಡಲಾಗುತ್ತಿಲ್ಲ. ಚಿಕಿತ್ಸೆ ಕೊಡಿಸುವುದಕ್ಕೂ ನಮ್ಮ ಬಳಿ ಹಣವಿಲ್ಲ. ಪರಿಹಾರ ಕೊಡುವುದಾಗಿ ಹೇಳಿದವರು ಯಾರೂ ನಮ್ಮ ಕಡೆ ತಿರುಗಿ ನೋಡುತ್ತಿಲ್ಲ.
– ಭಾಗ್ಯಮ್ಮ, ಬಾಲಕನ ತಾಯಿ

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.