Living together: ಪ್ರೇಯಸಿಯಿಂದ ಪ್ರಿಯಕರನ ಅಂತ್ಯ
Team Udayavani, Sep 7, 2023, 12:00 PM IST
ಬೆಂಗಳೂರು: ನಗರದಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಮಹಿಳೆ ಸೇರಿ ಇಬ್ಬರು ಕೊಲೆಯಾಗಿದ್ದಾರೆ.
ಲಿವಿಂಗ್ ಟುಗೇದರ್ ನಲ್ಲಿದ್ದ ಪ್ರೇಮಿಗಳ ನಡುವೆ ಜಗಳ ಉಂಟಾಗಿದ್ದು, ಪ್ರೇಯಸಿಯೇ ಪ್ರಿಯಕರನನ್ನು ಕೊಲೆಗೈದಿರುವ ಘಟನೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೇರಳ ಮೂಲದ ಜಾವೀದ್(29) ಮೃತವ್ಯಕ್ತಿ. ಬೆಳಗಾವಿ ಮೂಲದ ರೇಣುಕಾ(34) ಎಂಬಾಕೆಯನ್ನು ಬಂಧಿಸಲಾಗಿದೆ.
ಕೇರಳ ಮೂಲದ ಜಾವೀದ್ ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಮೊಬೈಲ್ ರಿಪೇರಿ ಕೆಲಸ ಮಾಡಿಕೊಂಡಿದ್ದ. ಇನ್ನು ರೇಣುಕಾ ಕೂಡ 3 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಾರ್ಯಕ್ರಮವೊಂದರಲ್ಲಿ ಇಬ್ಬರ ಪರಿಚಯವಾಗಿದೆ. ಬಳಿಕ ಪ್ರೇಮಾಂಕುರ ವಾಗಿ, ದೈಹಿಕ ಸಂಬಂಧ ಹೊಂದಿದ್ದರು. ಹೀಗಾಗಿ ಒಂದು ವರ್ಷ ದಿಂದ ಅಕ್ಷಯನಗರದ ಅಪಾರ್ಟ್ಮೆಂಟ್ನಲ್ಲಿ ಲಿವಿಂಗ್ ಟುಗೇ ದರ್ನಲ್ಲಿದ್ದರು. ಈ ಮಧ್ಯೆ ಕೆಲ ತಿಂಗಳಿಂದ ಇಬ್ಬರ ನಡುವೆ ವೈಯಕ್ತಿಕ ವಿಚಾರಕ್ಕೆ ಜಗಳ ಆರಂಭವಾಗಿದ್ದು, ಪರಸ್ಪರ ಬೇರೆಯೊಬ್ಬರ ಜತೆ ಅಕ್ರಮ ಸಂಬಂಧ ಹೊಂದಿರುವುದಾಗಿ ಜಗಳ ಮಾಡಿಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಕೂಡ ಇದೇ ವಿಚಾರಕ್ಕೆ ಜಗಳ ನಡೆ ದಿದ್ದು, ಅದು ವಿಕೋಪಕ್ಕೆ ಹೋದಾಗ ರೇಣುಕಾ ಚಾಕುವಿನಿಂದ ಜಾವೀದ್ನ ಎದೆಗೆ ಇರಿದು ಕೊಲೆಗೈದಿದ್ದಾಳೆ. ಈ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ