ರಹಸ್ಯ ಕೋಣೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ; ಸಿಸಿಬಿ ದಾಳಿ
ಕೋಣೆಯಲ್ಲಿ ಅಡಗಿಸಿಟ್ಟಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ
Team Udayavani, Nov 18, 2022, 11:04 AM IST
ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನಗರದ 3 ಲಾಡ್ಜ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ಕಾಟನ್ ಪೇಟೆಯ ದುರ್ಗಾ ಲಾಡ್ಜ್ ನ ರಹಸ್ಯ ಕೋಣೆಯಲ್ಲಿ ನಡೆಯುತ್ತಿದ್ದ ದಂಧೆಯನ್ನು ಬಯಲಿಗೆಳೆದಿದ್ದಾರೆ.
ದಂಧೆ ನಡೆಯುತ್ತಿದ್ದ ಮಾಹಿತಿಯ ಹಿನ್ನೆಲೆ ಕಾಟನ್ಪೇಟೆಯ ದುರ್ಗಾ, ಕಲಾಸಿಪಾಳ್ಯದ ಸಫೇರಾ ಹಾಗೂ ಸಿಟಿ ಮಾರ್ಕೆಟ್ ವಾಸವಿ ಲಾಡ್ಜ್ ಗಳ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ 6 ಮಹಿಳೆಯರನ್ನು ರಕ್ಷಿಸಲಾಯಿತು. ಈ ಸಂಬಂಧ ಲಾಡ್ಜ್ ಗಳ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ಸೇರಿ 9 ಮಂದಿಯನ್ನು ಬಂಧಿಸಲಾಗಿದೆ. ಉದ್ಯೋಗ ನೆಪದಲ್ಲಿ ಮಹಿಳೆಯರನ್ನು ವೇಶ್ಯಾವಾಟಿಕೆಗೆ ದೂಡಿದ್ದರೆಂದು ಸಿಸಿಬಿ ಮಾಹಿತಿ ನೀಡಿದೆ.
ರಹಸ್ಯ ಕೋಣೆ ಪತ್ತೆ ಕಾಟನ್ಪೇಟೆ ಮುಖ್ಯರಸ್ತೆ ಯಲ್ಲಿರುವ ದುರ್ಗಾ ಪ್ಯಾಲೇಸ್ ಲಾಡ್ಜ್ ನಲ್ಲಿ ಮೇಲೆ ದಾಳಿ ನಡೆಸಿದಾಗ ರಹಸ್ಯ ಕೋಣೆ ಪತ್ತೆಯಾಗಿದೆ. ರಹಸ್ಯ ಕೋಣೆಯಲ್ಲಿ ಅಡಗಿಸಿಟ್ಟಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ನಾಲ್ಕನೇ ಮಹಡಿಯಲ್ಲಿರುವ ಕೋಣೆಯ ಗೋಡೆಯನ್ನು 3 ಅಡಿಗಳಷ್ಟು ಸುತ್ತ ಕೊರೆದು ಅದರೊಳಗೆ ಕೋಣೆ ನಿರ್ಮಿಸಲಾಗಿದೆ. ಅದರಲ್ಲಿ ಐದಾರು ಮಂದಿ ಆರಾಮಾಗಿ ಕುಳಿತುಕೊಳ್ಳಬಹುದಾಗಿದೆ.
ಪೊಲೀಸರು ಲಾಡ್ಜ್ ಮೇಲೆ ದಾಳಿ ನಡೆಸುತ್ತಿದ್ದಂತೆ ಲಾಡ್ಜ್ ಸಿಬ್ಬಂದಿ ಅಲರಂ ಒತ್ತುತ್ತಾನೆ. ಆ ಶಬ್ಧದಿಂದ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯರ ಕೂಡಲೇ ರಹಸ್ಯ ಕೋಣೆಗೆ ಹೋಗಿ ಕುಳಿತುಕೊಳ್ಳುತ್ತಾರೆ.ಸಿಸಿಬಿ ಪೊಲೀಸರು ದಾಳಿ ನಡೆ ಸಿದಾಗ ವೇಶ್ಯಾವಾಟಿಕೆ ನಡೆದ ಬಗ್ಗೆ ಕೆಲವೊಂದು ಸಾಕ್ಷ್ಯ ದೊರಕಿತ್ತು. ಆದರೆ, ಮಹಿಳೆಯರು ಪತ್ತೆಯಾಗಿರಲಿಲ್ಲ. ಬಳಿಕ ಎರಡೂವರೆ ಗಂಟೆಗಳ ಕಾಲ ಶೋಧಿಸಿದಾಗ ರಹಸ್ಯ ಕೋಣೆ ಪತ್ತೆಯಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್