![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಆಕ್ಷೇಪಣೆ ಸಲ್ಲಿಸಲು ಲೋಕಾಗೆ ಸೂಚನೆ
Team Udayavani, Oct 31, 2018, 12:15 PM IST
![highcourt.jpg](https://www.udayavani.com/wp-content/uploads/2018/10/31/highcourt-568x465.jpg)
ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ 120 ಕೋಟಿ ರೂ. ಮೊತ್ತದ ಕಾಮಗಾರಿಗೆ ಸಂಬಂಧಿಸಿದ ನಕಲಿ ಬಿಲ್ ಸೃಷ್ಟಿಸಲು ಯತ್ನಿಸಿದ ಪ್ರಕರಣದಲ್ಲಿ ಶಾಸಕ ಜಿ.ಮುನಿರತ್ನ ಸೇರಿ ಮೂವರನ್ನು ಆರೋಪಿಗಳನ್ನಾಗಿಸುವಂತೆ ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಅರ್ಜಿಗೆ 2 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ.
ವಕೀಲ ಎನ್.ಪಿ.ಅಮೃತೇಶ್ ಪ್ರಕರಣದಲ್ಲಿ ಶಾಸಕ ಮುನಿರತ್ನ ಮತ್ತು ಇವರ ಪತ್ನಿ ಮಂಜುಳಾ ಹಾಗೂ ನಿರ್ಮಾಪಕ ಸೂರಪ್ಪ ಬಾಬು ಅವರನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಪೀಠ ಈ ಸೂಚನೆ ನೀಡಿದೆ.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕಾಮಗಾರಿಯ ದಾಖಲೆಗಳು ಪತ್ತೆಯಾದ ಮನೆ ನಮ್ಮ ಪತ್ನಿ ಹೆಸರಿನಲ್ಲಿದ್ದು, ಕಡತ ಇಡಲು ತಾವೇ ಅನುಮತಿ ಕೊಟ್ಟಿರುವುದಾಗಿ ಮುನಿರತ್ನ ಒಪ್ಪಿಕೊಂಡಿದ್ದರು. ಅಲ್ಲದೆ,ಆರೋಪಿಗಳನ್ನಾಗಿ ಗುರುತಿಸಿರುವ ವ್ಯಕ್ತಿಗಳು ನಮಗೆ ಪರಿಚಯವಿರುವುದಾಗಿಯೂ ಹೇಳಿದ್ದರು. ಆದರೂ ಅವರನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿಸಿಲ್ಲ ಎಂದು ಅವರು ಆರೋಪಿಸಿದರು.
ಇದಕ್ಕೆ ಲೋಕಾಯುಕ್ತ ಪರ ವಕೀಲರು, ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಈ ಮನವಿನಯ್ನು ಪುರಸ್ಕರಿಸಿದ ಪೀಠ ವಿಚಾರಣೆಯನ್ನು ಎರಡು ವಾರ ಮುಂದೂಡಿದೆ.
ಏನಿದು ಪ್ರಕರಣ?: ಬಿಬಿಎಂಪಿಗೆ ಸೇರಿದ ಒಂದು ಸಾವಿರ ಕಡತಗಳನ್ನು ಅಕ್ರಮವಾಗಿ ಶಾಸಕ ಮುನಿರತ್ನ ಅವರಿಗೆ ಸೇರಿದ್ದು ಎನ್ನಲಾದ ವೈಯಲಿಕಾವಲ್ ಮನೆಯೊಂದಲ್ಲಿ ಇರಿಸಲಾಗಿದ್ದು, ರಾಜರಾಜೇಶ್ವರಿನಗರ ಕ್ಷೇತ್ರದ 120 ಕೋಟಿ ರೂ. ಮೌಲ್ಯದ ಸಿವಿಲ್ ಕಾಮಗಾರಿಯ ನಕಲಿ ಬಿಲ್ಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿ ವೈ.ಎಚ್.ಶ್ರೀನಿವಾಸ್ ಎಂಬುವರು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಐವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ನಂತರ ತನಿಖೆ ಪೂರ್ಣಗೊಳಿಸಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದರಲ್ಲಿ ಮುನಿರತ್ನ, ಅವರ ಪತ್ನಿ ಮಂಜುಳ ಹಾಗೂ ಸೂರಪ್ಪ ಬಾಬು ಅವರಿಗೆ ಕ್ಲೀನ್ಚಿಟ್ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ವಕೀಲ ಅಮೃತೇಶ್, ಈ ಮೂವರನ್ನೂ ಆರೋಪಿಗಳನ್ನಾಗಿ ಸೇರಿಸಬೇಕು ಎಂದು ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇದೀಗ ಅಮೃತೇಶ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.