ಟೀಸಿ ನೀಡಲು ಲಂಚ ಸ್ವೀಕರಿಸಿದ ಪ್ರಾಂಶುಪಾಲ ಲೋಕಾಯುಕ್ತ ಬಲೆಗ
Team Udayavani, Jun 1, 2023, 1:17 PM IST
ಬೆಂಗಳೂರು: ಪರೀಕ್ಷೆಯ ಫಲಿತಾಂಶ ತಡೆಹಿಡಿದು ವರ್ಗಾವಣಾ ಪ್ರಮಾಣ ಪತ್ರ (ಟೀಸಿ) ನೀಡಲು 9ನೇ ತರಗತಿಯ ವಿದ್ಯಾರ್ಥಿಯ ಪಾಲಕರಿಗೆ 5 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ರಾಜಾಜಿನಗರದ ಬಸ ವೇಶ್ವರ ಪ್ರೌಢಶಾಲೆಯ ಪ್ರಾಂಶುಪಾಲ ವಿ.ನಾರಾ ಯಣ ಬಂಧಿತ ಆರೋಪಿ. ರಾಜಾಜಿನಗರದ ಬಸವೇಶ್ವರ ಬಾಲಕರ ಅನುದಾನಿತ ಪ್ರೌಢಶಾಲೆಯಲ್ಲಿ 9 ತರಗತಿಯ ವಿದ್ಯಾರ್ಥಿಯ ಪರೀಕ್ಷೆಯ ಫಲಿತಾಂಶ ತಡೆ ಹಿಡಿದಿದ್ದರು. ಆದರೆ, ಟಿ.ಸಿ. ನೀಡಲು ವಿದ್ಯಾರ್ಥಿಯ ಸಮ್ಮುಖದಲ್ಲಿ ಅವರ ಪಾಲಕರಿಗೆ 5 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಲಂಚ ನೀಡಲು ಇಚ್ಛಿಸದ ವಿದ್ಯಾರ್ಥಿಯ ಪಾಲಕರು ನಾರಾಯಣ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಬುಧವಾರ ಶಾಲೆಯ ಆವರಣದಲ್ಲಿ ನಾರಾಯಣ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಲಂಚದ ಹಣ ಜಪ್ತಿ ಮಾಡಿ ಬಂಧಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ