ಮಗನ ದೃಶ್ಯ ನೋಡಿ ಖುಷಿಗೊಂಡ ಎಚ್ಡಿಕೆ
Team Udayavani, Jan 16, 2019, 3:00 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಸ್ವಲ್ಪ ರಿಲ್ಯಾಕ್ಸ್ ಮೂಡ್ನಲ್ಲಿದ್ದರು. ಒಂದು ಕಡೆ ರಾಜಕೀಯದ ಕ್ಷಣ ಕ್ಷಣದ ಬೆಳವಣಿಗೆ ಅಚ್ಚರಿ ಮೂಡಿಸುತ್ತಿದ್ದರೆ, ಇನ್ನೊಂದು ಕಡೆ ಅವರು ಯಾವುದೇ ಸಮಸ್ಯೆ ಇಲ್ಲ ಎಂಬ ವಿಶ್ವಾಸದಿಂದಲೇ ಸಂಜೆ ವೇಳೆಗೆ ಶಾಸಕ ಮುನಿರತ್ನ ಅವರ ಮನೆಗೆ ತೆರಳಿ ‘ಕುರುಕ್ಷೇತ್ರ’ ಚಿತ್ರದ ಟೀಸರ್ ವೀಕ್ಷಿಸಿದರು. ಹೌದು, ಮುನಿರತ್ನ ನಿರ್ಮಾಣದ ‘ಕುರುಕ್ಷೇತ್ರ’ ಚಿತ್ರದಲ್ಲಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖೀಲ್ ಕುಮಾರ್ ಅಭಿಮನ್ಯು ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅವರ ಭಾಗದ ಕೆಲ ದೃಶ್ಯಗಳನ್ನು ಮುಖ್ಯಮಂತ್ರಿ ಅವರಿಗೆ ತೋರಿಸಬೇಕೆಂದು ಮುನಿರತ್ನ ನಿರ್ಧರಿಸಿದ್ದರು. ಬೆಳಗ್ಗೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಹೋದ ಸಂದರ್ಭದಲ್ಲಿ ಈ ವಿಷಯವನ್ನು ಮನದಟ್ಟು ಮಾಡಿಕೊಂಡ ಬಳಿಕ ಮುಖ್ಯಮಂತ್ರಿ, ಮುನಿರತ್ನ ಮನೆಗೆ ತೆರಳಿ ‘ಕುರುಕ್ಷೇತ್ರ’ ಚಿತ್ರದ ಕೆಲ ದೃಶ್ಯಗಳನ್ನು ವೀಕ್ಷಿಸಿದ್ದಾರೆ. ‘ಕುರುಕ್ಷೇತ್ರ’ ಚಿತ್ರಕ್ಕೆ 3ಡಿ ಸ್ಪರ್ಶ ನೀಡಲಾಗಿದ್ದು, ಮುನಿರತ್ನ ಅವರು ಮುಖ್ಯಮಂತ್ರಿ ಯವರಿಗೆ ಅದನ್ನು ತೋರಿಸಿದ ಬಳಿಕ, ಮುಖ್ಯಮಂತ್ರಿಗಳು ‘ಕುರುಕ್ಷೇತ್ರ’ ಚಿತ್ರವನ್ನು ಕೊಂಡಾಡಿದ್ದಾರೆ. ಚಿತ್ರದ ತಾಂತ್ರಿಕ ವಿಷಯಗಳ ಬಗ್ಗೆ ಮೆಚ್ಚುಗೆ ಪಟ್ಟಿದ್ದಾರೆ. ಜತೆಗೆ ಕನ್ನಡದಲ್ಲಿ ಪೌರಾಣಿಕ ಚಿತ್ರಗಳು ಹೆಚ್ಚೆಚ್ಚು ಬರಬೇಕು ಎಂದಿದ್ದಾರೆ. ರಾಜಕೀಯ ವಿಷಯದಲ್ಲಿ ಹಲವು ಗೊಂದಲಗಳಿದ್ದರೂ, ಮುಖ್ಯಮಂತ್ರಿಗಳು ಮಾತ್ರ ತುಂಬಾ ಕೂಲ್ ಆಗಿ, ಅವರ ಪುತ್ರ ಅಭಿನಯಿಸಿದ ‘ಕುರುಕ್ಷೇತ್ರ’ ಚಿತ್ರದ ಕೆಲ ತುಣುಕು ನೋಡಿ ಖುಷಿಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ