ಸಮಸ್ಯೆಗಳ ಕೂಪವಾಗಿದೆ ನಾಯಂಡಹಳ್ಳಿ

ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಬಿಬಿಎಂಪಿ | ಮಳೆ ಬಂತೆಂದರೆ ಮತ್ತೆ ಅನಾಹುತಗಳು ಕಟ್ಟಿಟ್ಟ ಬುತ್ತಿ

Team Udayavani, Aug 10, 2019, 9:08 AM IST

bng-tdy-1

ಬೆಂಗಳೂರು: ಇಲ್ಲಿ ಬೀದಿ ದೀಪಗಳಿಲ್ಲ. ರಸ್ತೆಯಲ್ಲಂತೂ ಗುಂಡಿಗಳೇ ಹೆಚ್ಚು. ಜತೆಗೆ ಸಂಚಾರ ದಟ್ಟಣೆ, ಕಳ್ಳರ ಹಾವಳಿ ಇರುವುದೂ ಇಲ್ಲೇ. ಕೊನೆಗೆ ನಗರದಲ್ಲಿ ಮಳೆಬಂದರೂ ದಿಢೀರ್‌ ನೆರೆಗೆ ತುತ್ತಾಗುವುದು ಇದೇ ಪ್ರದೇಶ.

ಅದು ನಾಯಂಡಹಳ್ಳಿ. ಸಮಸ್ಯೆಗಳ ಕೂಪವಾದರೂ ಈ ಭಾಗ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗುರಿಯಾಗಿದ್ದು, ಸ್ಥಳೀಯ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈಗ ಮತ್ತೆ ಮಳೆಗಾಲ ಬಂದಿದ್ದು, ಈ ವರ್ಷವೂ ಜನರಿಗೆ ಗೋಳು ತಪ್ಪಿದ್ದಲ್ಲ. ಕಾರಣ, ಪಾಲಿಕೆ ಈ ಬಾರಿಯೂ ಚರಂಡಿ ಸ್ವಚ್ಛತೆ, ಸ್ಲ್ಯಾಬ್‌ ಅಳವಡಿಕೆ, ಗುಂಡಿ ಮುಚ್ಚುವುದು, ಬೀದಿ ದೀಪಗಳ ಅಳವಡಿಕೆಯಂತಹ ಯಾವ ಮುನ್ನೆಚ್ಚಕೆ ಕ್ರಮವನ್ನೂ ಕೈಗೊಂಡಿಲ್ಲ.

ಇದರ ನೇರ ಪರಿಣಾಮ ನಾಯಂಡಹಳ್ಳಿಯ ಪಂತರಪಾಳ್ಯದಲ್ಲಿನ ಜನರು ಮೇಲಾಗುತ್ತಿದೆ. ಬೀದಿ ದೀಪ ಇಲ್ಲದೆ ಕಳ್ಳರ ಹಾವಳಿ, ಕಿಡಿಗೇಡಿಗಳ ಕಾಟ, ಸ್ವಚ್ಛಗೊಳ್ಳದ ಚರಂಡಿಗಳಿಂದ ದುರ್ವಾಸನೆ ಹೀಗೆ ಹಲವು ಸಮಸ್ಯೆಗಳು ಇಲ್ಲಿವೆ. ಜೋರು ಮಳೆ ಬಂದರೆ ನೀರು ರಸ್ತೆಗೆ ಬಂದು ಮನೆಗಳ ಮುಂದೆ ನಿಲ್ಲಲಿದೆ ಎಂಬ ಆತಂಕದಲ್ಲಿ ಜನ ಜೀವನ ನಡೆಸುತ್ತಿದ್ದಾರೆ.

ಕೆಲ ಚರಂಡಿಗಳಲ್ಲಿ ಹೂಳು ತೆಗೆದಿಲ್ಲ. ಇನ್ನೂ ಕೆಲವೆಡೆ ಹೂಳೆತ್ತಿದ್ದರೂ, ಸ್ಲ್ಯಾಬ್‌ ಜೋಡಿಸಿಲ್ಲ. ಮಕ್ಕಳು ರಸ್ತೆಯಲ್ಲೇ ಆಟವಾಡುವ ಕಾರಣ ಮಳೆ ಜೋರಾಗಿ, ಅವಘಡಗಳು ಸಂಭವಿಸುವ ಮುನ್ನ ಪಾಲಿಕೆ ಸದಸ್ಯರು ಮತ್ತು ವಾರ್ಡ್‌ ಎಂಜಿನಿಯರ್‌ ಸಮಸ್ಯೆ ಬಗೆಹರಿಸಬೇಕು ಎನ್ನುತ್ತಾರೆ ಸ್ಥಳೀಯ ನಿವಾಸಿ ಸರವಣ.

ಪಂತರಪಾಳ್ಯದಲ್ಲಿ ಮಳೆನೀರು ಹರಿಯುವ ಚರಂಡಿಗೆ ಶೌಚ ನೀರು ಬಿಡುತ್ತಿದ್ದು, ಸುತ್ತಲಿನ ಪ್ರದೇಶಕ್ಕೆ ಅದರ ದುರ್ವಾಸನೆ ಹಬ್ಬಿದೆ. ಹೀಗಿರುವಾಗ ಹೂಳೆತ್ತಲು ಯಾರು ಮುಂದೆಬರುತ್ತಾರೆ ಎಂದು ಬಿಬಿಎಂಪಿ ಅಧಿಕಾರಿ ಪ್ರಶ್ನಿಸಿದ್ದಾರೆ. ಪಂತರಪಾಳ್ಯ ಕೊಳಗೇರಿಯಲ್ಲಿ ಕಳ್ಳರ ಹಾವಳಿ, ಕಿಡಿಗೇಡಿಗಳ ಕಾಟವಿರುವ ಕಾರಣ ಹೊಯ್ಸಳ ವಾಹನ ದಿನದ 24 ಗಂಟೆಯೂ ನಾಯಂಡಹಳ್ಳಿಯಿಂದ ರಾಜರಾಜೇಶ್ವರಿನಗರ ಗೇಟ್, ಪಂತರಪಾಳ್ಯ, ನಾಯಂಡಹಳ್ಳಿ ರೈಲು ನಿಲ್ದಾಣ ರಸ್ತೆ ಸೇರಿ ಸುತ್ತಲ ಪ್ರದೇಶದಲ್ಲಿ ಗಸ್ತಿನಲ್ಲಿರುತ್ತದೆ ಎನ್ನುತ್ತಾರೆ ಬ್ಯಾಟರಾಯನಪುರ ಠಾಣೆಯ ಪೊಲೀಸರು. ಅಲ್ಲದೆ, ಆರು ತಿಂಗಳ ಹಿಂದೆ ಡಾಂಬರೀಕರಣಗೊಂಡಿದ್ದ ನಾಯಂಡಹಳ್ಳಿಯಿಂದ ಆರ್‌.ಆರ್‌.ನಗರ ಗೇಟ್ವರೆಗಿನ ರಸ್ತೆ ಗುಂಡಿಮಯವಾಗಿದೆ. ಇದರಿಂದ ವಾಹನ ಸವಾರರು ತೊಂದರೆ ಪಡುತ್ತಿದ್ದಾರೆ.

ಅನುದಾನಕ್ಕೆ ಕೊರತೆ ಇಲ್ಲ:

ಪಾಲಿಕೆ ಪ್ರತಿ ವರ್ಷ ವಾರ್ಡ್‌ಗಳ ಅಭಿವೃದ್ಧಿಗೆ 2ರಿಂದ 3 ಕೋಟಿ ರೂ. ಮೀಸಲಿಟ್ಟಿದ್ದು, ಈ ಅನುದಾನದಲ್ಲಿ ಶೇ.10ರಷ್ಟು ಹಣ ಚರಂಡಿಗಳ ಹೂಳೆತ್ತಲು, ನಿರ್ವಹಣೆ, ಹೊಸ ಚರಂಡಿ ಕಾಮಗಾರಿ, ಗುಂಡಿ ಮುಚ್ಚಲು ಬಳಸಬಹುದು. ಈಗಾಗಲೇ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಚರಂಡಿ ಸ್ವಚ್ಛತಾ ಕಾರ್ಯ ನಿರಂತರವಾಗಿದ್ದು, ವರ್ಷಪೂರ್ತಿ ನಿರ್ವಹಣೆ ಮಾಡಲಾಗು ವುದು ಎನ್ನುತ್ತಾರೆ ಪಾಲಿಕೆ ಪ್ರಧಾನ ಎಂಜಿನಿಯರ್‌ ವೆಂಕಟೇಶ್‌.
ಎಲ್ಲೆಲ್ಲಿ ನೀರು ನಿಲ್ಲುತ್ತೆ?:

ನಾಯಂಡಹಳ್ಳಿ ಕ್ವಾಟ್ರರ್ಸ್‌, ಕೆಂಪೇಗೌಡ ರೈಲು ನಿಲ್ದಾಣದ ಪಾರ್ಸಲ್ ಕಚೇರಿ ಬಳಿ, ದೀಪಾಂಜಲಿನಗರ ಮೆಟ್ರೋ ನಿಲ್ದಾಣದ ಹತ್ತಿರ, ರಾಜರಾಜೇಶ್ವರಿ ಗೇಟ್ ಸೇರಿದಂತೆ ಹಲವೆಡೆ ಚರಂಡಿಯಲ್ಲಿ ಹೂಳು, ಸ್ಲ್ಯಾಬ್‌ ಅಳವಡಿಸದ ಕಾರಣ ನೀರು ರಸ್ತೆ ಮೇಲೆ ಬರುತ್ತದೆ.
ಅನಾಹುತಕ್ಕೆ ಆಹ್ವಾನ ನೀಡುತ್ತಿದೆ ತೆರೆದ ಚರಂಡಿ:

ನಾಯಂಡಹಳ್ಳಿ ಬಸ್‌ ನಿಲ್ದಾಣದಿಂದ ಆರ್‌.ಆರ್‌.ನಗರ ಗೇಟ್ವರೆಗೆ 2 ಕಿ.ಮೀ. ಮುಖ್ಯರಸ್ತೆ ಇದ್ದು, ಹತ್ತಕ್ಕೂ ಅಧಿಕ ಕಡೆ ಚರಂಡಿಗಳ ಮೇಲೆ ಸ್ಲ್ಯಾಬ್‌ ಹಾಕಿಲ್ಲ. ಇದು ಪಾದಚಾರಿ ರಸ್ತೆಯಾಗಿರುವ ಕಾರಣ ಪಾದಚಾರಿಗಳು ಕೈಯಲ್ಲಿ ಜೀವಹಿಡಿದು ಸಂಚರಿಸುವ ಪರಿಸ್ಥಿತಿ ಇದೆ. ನಾಯಂಡಹಳ್ಳಿ ಮೇಲ್ಸೇತುವೆಯಲ್ಲಿರುವ ವಿಭಜಕದ ಮೇಲೆ ಹುಲ್ಲು ಬೆಳೆದು, ಬುಡದಲ್ಲಿ ಹೂಳುತುಂಬಿದೆ. ಇದರಿಂದ ನೀರು ಸರಾಗವಾಗಿ ಹೋಗುವುದಿಲ್ಲ. ಮಳೆ ಬಂದರಂತೂ ಮೇಲ್ಸೇತುವೆ ಜಲಾವೃತಗೊಂಡಿರುತ್ತದೆ. ಇದರಿಂದ ವಾಹನಗಳ ಓಟಕ್ಕೆ ಬ್ರೇಕ್‌ ಬೀಳುತ್ತದೆ. ಇದರಿಂದ ಸವಾರರು ಪರದಾಡುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಾರೆ.
ಮಂಜುನಾಥ್ ಗಂಗವತಿ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.