ತಗ್ಗದ ಮಳೆ ಆರ್ಭಟಕ್ಕೆ ತಬ್ಬಿಬ್ಟಾದ ನಗರ
Team Udayavani, Sep 11, 2017, 11:53 AM IST
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ತಗ್ಗಿಲ್ಲ. ಶನಿವಾರ ಇಡೀ ರಾತ್ರಿ ಭಾರಿ ಪ್ರಮಾಣದ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥವಾಗಿದೆ. ಹಲವು ಕೆರೆಗಳು ತುಂಬಿ ಕೋಡಿ ಬಿದ್ದವೆ. ಕೆಲವೆಡೆ ಹತ್ತಾರು ವಾಹನಗಳು ಮುಳುಗಿ ಸಾರ್ವಜನಿಕರು ತೊಂದರೆ ಅನುಭವಿಸಿದ್ದಾರೆ.
ನಗರದ ಹಲವು ರಸ್ತೆಗಳು ಕೆರೆಗಳಂತಾಗಿದ್ದವು. ಇನ್ನು ಶನಿವಾರ ಒಂದೇದಿನ 40ಕ್ಕೂ ಹೆಚ್ಚು ಮರಗಳು ಧರೆಗುರುಳಿದವು. ಬಿದ್ದ ಮರಗಳನ್ನು ತೆರವುಗೊಳಿಸುವುದು ವಿಳಂಬವಾದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೆರೆಗಳು ಹಾಗೂ ಕಾಲುವೆಗಳು ತುಂಬಿ ಹರಿದು ಮಳೆ ನೀರು ರಸ್ತೆಯಲ್ಲೇ ಹರಿಯಿತು.
ವೃಷಭಾವತಿ, ಕೋರಮಂಗಲ ರಾಜಕಾಲುವೆಗಳು ತುಂಬಿ ಹರಿದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳು ಸಮಸ್ಯೆಗೆ ಒಳಗಾವು. ಕೆಂಗೇರಿಯ ಸಮೀಪದ ದುಬಾಸಿಪಾಳ್ಯ ಹಾಗೂ ಕೊಮ್ಮಘಟ್ಟ ಕೆರೆಗಳ ಕೋಡಿ ಒಡೆದ ಹಿನ್ನೆಲೆಯಲ್ಲಿ ಆ ಭಾಗದ ರಸ್ತೆಗಳೆಲ್ಲ ಕೆರೆಗಳಂತಾಗಿದ್ದವು.
ಮೈಸೂರು ಕಡೆಯಿಂದ ನಗರಕ್ಕೆ ಬರುತ್ತಿದ್ದ ಬಸ್ ಅರ್ಧ ಮುಳುಗಿದ್ದರಿಂದ 36ಕ್ಕೂ ಹೆಚ್ಚು ಪ್ರಯಾಣಿಕರು ಬಸ್ನಲ್ಲಿ ಸಾವು-ಬದುಕಿನ ಹೋರಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸುವ ಮೂಲಕ ಬಸ್ನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ರಕ್ಷಿಸಿ, ಬೋಟ್ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.
ಆರು ಅಡಿಯಷ್ಟು ನೀರು
ಇದರೊಂದಿಗೆ ಮೈಸೂರು ರಸ್ತೆಯ ಬಿಡಿಎ ಎನ್ಕ್ಲೇವ್ ಮುಂಭಾಗದ ರಾಜಕಾಲುವೆಗೆ ಟಾಟಾ ಏಸ್ ವಾಹನವೊಂದು ಕೊಚ್ಚಿ ಹೋಗಿದೆ ಎನ್ನಲಾಗಿದೆ. ಇಲ್ಲಿ ಮೆಟ್ರೋ ಎರಡನೇ ಹಂತದ ಕಾಮಗಾರಿ ನಡೆಯುತ್ತಿರುವುದರಿಂದ ವೃಷಭಾವತಿ ಕಾಲುವೆಯಲ್ಲಿ ತಡೆ ಉಂಟಾಗಿದ್ದು, ರಸ್ತೆಯಲ್ಲಿ ಸುಮಾರು 6 ಅಡಿಯಷ್ಟು ನೀರು ನಿಂತಿತ್ತು.
ಗೋಡೆ ಹತ್ತಿದ ನಿವಾಸಿಗಳು
ಎಚ್ಎಸ್ಆರ್ ಬಡಾವಣೆಯಲ್ಲಿ ಸುಮಾರು ನಾಲ್ಕು ಅಡಿಯಷ್ಟು ನೀರು ನಿಂತಿದ್ದರಿಂದಾಗಿ ನಿವಾಸಿಗಳು ತಮ್ಮದೇ ಮನೆಗಳಿಗೆ ಗೋಡೆ ಹಾಗೂ ಗೇಟುಗಳನ್ನು ಹಾರಬೇಕಾಯಿತು. ಇದರೊಂದಿಗೆ ಮನೆಯಲ್ಲಿ ಸೇರಿದ್ದ ಕೊಳಚೆ ನೀರು ಹೊರಹಾಕಲು ಹರಸಾಹಸ ಪಡುತ್ತಿದ್ದರು.
ಮನೆ -ಗೋಡೆ ಕುಸಿತ
ನಗರದ ಎಂಟು ವಲಯಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಭಾಗಗಳಲ್ಲಿ ಮನೆ ಹಾಗೂ ಮನೆಯ ಗೋಡೆಗಳು ಮಳೆಗೆ ಕುಸಿದು ಬಿದ್ದಿವೆ. ಆದರೆ, ಅದೃಷ್ಟವಶಾತ್ ಎಲ್ಲಿಯೂ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
MUST WATCH
ಹೊಸ ಸೇರ್ಪಡೆ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ