ಎಂ-ಸ್ಯಾಂಡ್‌ ಬಗ್ಗೆ ಜಾಗೃತಿ ಬೇಕು


Team Udayavani, Jul 21, 2018, 12:50 PM IST

blore-9.jpg

ರಾಮನಗರ: ಪ್ರಸ್ತುತ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಾಗಿರುವ ಮರಳಿಗೆ ಪರ್ಯಾಯವಾಗಿ ಬಳಕೆಯಾಗುತ್ತಿರುವ ಎಂ-ಸ್ಯಾಂಡ್‌ ಮತ್ತು ಮಲೇಷ್ಯಾರಾಷ್ಟ್ರದಿಂದ ಆಮದು ಮಾಡಿಕೊಳ್ಳುವ ಮರಳಿನ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ ಹೇಳಿದರು.

ತಾಲೂಕಿನ ಬಿಡದಿಯಲ್ಲಿರುವ ಎಂಎಸ್‌ ಐಎಲ್‌ ಮರಳು ಮಾರಾಟ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಎಂ-ಸ್ಯಾಂಡ್‌ ಮತ್ತು ಆಮದು ಮರಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಆದರೆ ಇವುಗಳ ಬಳಕೆ ಬಗ್ಗೆ ಜಾಗೃತಿ ಅಗತ್ಯ. ರಾಜ್ಯದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ ಮರಳಿಗೆ ಕೊರತೆ ಉಂಟಾಗಿದ್ದರಿಂದ ಮಲೇಷಿಯಾದಿಂದ ಮರಳು ಆಮದು ಮಾಡಿಕೊಳ್ಳಲು ಹಿಂದಿನ ಸರ್ಕಾರ ನಿರ್ಧರಿಸಿತ್ತು ಎಂದು ಹೇಳಿದರು.

ಬಿಡದಿಗೆ 4 ಸಾವಿರ ಟನ್‌ ಮಲೇಷ್ಯಾ ಮರಳು: ಇದುವರೆಗೆ 50 ಸಾವಿರ ಮೆಟ್ರಿಕ್‌ಟನ್‌ ಮಲೇಷ್ಯಾ ಮರಳನ್ನು ಆಮದು
ಮಾಡಿಕೊಳ್ಳಲಾಗಿದೆ. ಈ ಪೈಕಿ 4 ಸಾವಿರ ಮೆಟ್ರಿಕ್‌ ಟನ್‌ ಮರಳನ್ನು ಬಿಡದಿಯ ಮಾರಾಟ ಕೇಂದ್ರಕ್ಕೆ ಕೊಡಲಾಗಿದೆ. ಬಿಡದಿ ಕೇಂದ್ರದಲ್ಲಿ ಈವರೆಗೆ ಒಂದು ಸಾವಿರ ಮೆಟ್ರಿಕ್‌ ಟನ್‌ ಮರಳು ಮಾರಾಟವಾಗಿದೆ ಎಂದರು.

50 ಕೆ.ಜಿಗೆ 200 ರೂ.: ಮಲೇಷ್ಯಾದಿಂದ ಮರಳನ್ನು ಹಡಗುಗಳ ಮೂಲಕ ಆಂಧ್ರಪ್ರದೇಶದ ಕೃಷ್ಣಾಪಟ್ಟಣಂಗೆ
ತರಲಾಗಿತ್ತು. ಅಲ್ಲಿಯೇ 50 ಕೆ.ಜಿ ಮರಳಿನ ಚೀಲಗಳನ್ನು ಸಿದ್ಧಪಡಿಸಿ ರಾಜ್ಯದಲ್ಲಿ ಎಂಎಸ್‌ ಐಎಲ್‌ ಸ್ಥಾಪಿಸಿರುವ ಮಾರಾಟ ಕೇಂದ್ರಗಳಿಗೆ ರವಾನಿಸಲಾಗಿದೆ. ಸದ್ಯ ಜಿಎಸ್‌ಟಿ ಮತ್ತು ಇಲಾಖೆಯ ರಾಜಧನ ಸೇರಿ 50 ಕೆ.ಜಿ ಮರಳಿನ ಚೀಲಕ್ಕೆ 200 ರೂ. ದರ ನಿಗದಿಯಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಜನವರಿಯಲ್ಲಿ ಬಿಡದಿಯಲ್ಲಿ ಮರಳು ಮಾರಾಟ ಕೇಂದ್ರ ಆರಂಭವಾಗಿದೆ. ನಂತರ ಚುನಾವಣೆ ಬಂದಿದ್ದರಿಂದ ಹೆಚ್ಚು
ಮರಳು ಮಾರಾಟವಾಗಿಲ್ಲ. ಆದರೆ ಆಮದು ಮರಳಿಗೆ ಬೇಡಿಕೆ ಇದೆ ಎಂದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಹಾಗೂ ಬಿಡದಿ ಪುರಸಭಾ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸುವುದಾಗಿ ತಿಳಿಸಿದರು.

ಮೈಸೂರು ಮಿನರಲ್ಸ… ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ನವೀನ್‌ರಾಜ್‌ ಸಿಂಗ್‌, ಸಿ.ಟಿ.ಪುಟ್ಟಸ್ವಾಮಿ, ಗಣಿ ಇಲಾಖೆಯ
ಉಪನಿರ್ದೇಶಕಿ ಲಲಕ್ಷ್ಮಮ್ಮ, ತಾಲೂಕು ಪಂಚಾಯಿತಿ ಸದಸ್ಯ ಗಾಣಕಲ್‌ ನಟರಾಜು ಇದ್ದರು. 

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.