ಪಕ್ಷದ ಮಾತಿಗೆ ಒಪ್ಪಿ ಸಿಎಂ ಬಾದಾಮಿ ಸ್ಪರ್ಧೆ
Team Udayavani, Apr 24, 2018, 6:15 AM IST
ರಾಜ್ಯ ಕಾಂಗ್ರೆಸ್ ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ಪಕ್ಷದ ಕಾರ್ಯತಂತ್ರಗಳು ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಪ್ರಣಾಳಿಕೆ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಉದಯವಾಣಿಯೊಂದಿಗೆ ಮಾತುಕತೆ ನಡೆಸಿದ್ದಾರೆ.
ಈ ಬಾರಿಯ ಪ್ರಣಾಳಿಕೆಯಲ್ಲಿ ಏನೇನು ವಿಶೇಷ ಇರಬಹುದು ?
ಈ ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಕಾಂಗ್ರೆಸ್ನ ರಾಜಕೀಯ ಇಚ್ಛಾ ಶಕ್ತಿ ಪ್ರದರ್ಶಿಸಲು ಬದ್ಧರಾಗಿದ್ದೇವೆ. ಕಳೆದ ಪ್ರಣಾಳಿಕೆಯಲ್ಲಿ ಘೋಷಿಸಿ ರುವ 2,165 ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಣಾಳಿಕೆಯಲ್ಲಿ ಘೋಷಣೆ ಮಾಡದ ಇಪ್ಪತ್ತಕ್ಕೂ ಹೆಚ್ಚು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಮ್ಮದು ಪರ್ಫಾರ್ಮಿಂಗ್ ಸರಕಾರ. ನಮ್ಮ ಸರಕಾರದ ಬಗ್ಗೆ ಆಡಳಿತ ವಿರೋಧಿ ಅಲೆ ಇಲ್ಲ. ಎಲ್ಲ ಯೋಜನೆಗಳು ಸಾಮಾನ್ಯ ಜನರಿಗೆ ತಲುಪುವ ಯೋಜನೆಗಳಿವೆ. ಒಂದಿಲ್ಲೊಂದು ಯೋಜನೆಗಳು ರಾಜ್ಯದ ಜನತೆಗೆ ತಲುಪಿವೆ.
ಈ ಚುನಾವಣೆಯಲ್ಲಿ ಸ್ವತಃ ಮುಖ್ಯಮಂತ್ರಿಯೇ ಸೋಲುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆಯಲ್ಲಾ ?
ಅದು ಸತ್ಯಕ್ಕೆ ದೂರವಾದ ಮಾತು. ಬಿಜೆಪಿಯವರು ಚಾಮುಂಡೇಶ್ವರಿ ಯಲ್ಲಿ ನಿಲ್ಲಿಸಿರುವ ಅಭ್ಯರ್ಥಿ ನೋಡಿದರೆ ಅವರ ದಯನೀಯ ಸ್ಥಿತಿ ಗೊತ್ತಾಗುತ್ತದೆ. ಬಾದಾಮಿಯಲ್ಲಿ ಸ್ಪರ್ಧೆ ಮಾಡುವುದು ಮುಖ್ಯಮಂತ್ರಿಯ ಇಚ್ಚೆಯಾಗಿರಲಿಲ್ಲ. ಪಕ್ಷದ ಮಾತಿಗೆ ಕಟ್ಟುಬಿದ್ದು ಮುಖ್ಯಮಂತ್ರಿ ಬಾದಾಮಿಯಲ್ಲಿ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸಿಎಂ ಗೆದ್ದೆ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಇದೆ. ಅಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ.
ಜೆಡಿಎಸ್- ಬಿಜೆಪಿ ಚಾಮುಂಡೇಶ್ವರಿಯಲ್ಲಿ ಮಾತ್ರ ಒಳ ಒಪ್ಪಂದ ಮಾಡಿಕೊಂಡಿದ್ದಾರಾ ?
ಮುಖ್ಯಮಂತ್ರಿಗಳ ವಿರುದ್ಧ ಒಳ ಒಪ್ಪಂದ ಮಾಡಿಕೊಂಡಿರುವುದು ನೋಡಿದರೆ, ಆ ಪಕ್ಷಗಳ ಸ್ಥಿತಿ ಹೇಗಿದೆ ಎನ್ನುವುದು ಅರ್ಥವಾಗುತ್ತದೆ. ಜೆಡಿಎಸ್ ಸ್ಥಿತಿ ಹೇಗಿದೆ ಎನ್ನುವುದು ಅವರು ಬೇರೆ ಪಕ್ಷಗಳ ಅಭ್ಯರ್ಥಿ ಗಳಿಗಾಗಿ ಕಾಯುತ್ತಿರುವುದನ್ನು ನೋಡಿದರೆ ಗೊತ್ತಾಗುತ್ತದೆ. ಬಿಜೆಪಿ ಯವರು ನಾಲ್ಕು ಲಿಸ್ಟ್ ಬಿಡುಗಡೆ ಮಾಡಿದರೂ ಇನ್ನೂ 224 ಅಭ್ಯರ್ಥಿಗಳು ಸಿಗದಿರುವುದು ಅವರ ದಯನೀಯ ಸ್ಥಿತಿ ಎದ್ದು ಕಾಣುತ್ತಿದೆ.
– ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ