ಮಹದಾಯಿ ವಿವಾದ: ಸದನ ನಾಯಕರ ಸಭೆ ಇಂದು
Team Udayavani, Feb 8, 2018, 6:05 AM IST
ಬೆಂಗಳೂರು: ಮಹದಾಯಿ ಜಲ ವಿವಾದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸದನ ನಾಯಕರ ಸಭೆ ಕರೆದಿದ್ದಾರೆ. ಕಳೆದ ವಾರ ನಡೆದ ಸರ್ವ ಪಕ್ಷ ನಾಯಕರ ಸಭೆಯಲ್ಲಿ ಬಿಜೆಪಿ ವಿರೋಧದ ನಡುವೆಯೂ ಪ್ರಧಾನಿ ಮಧ್ಯಸ್ಥಿಕೆಗೆ ಸರ್ವ ಪಕ್ಷ ನಿಯೋಗ ತೆಗೆದುಕೊಂಡು ಹೋಗಲು ತೀರ್ಮಾನ ಕೈಗೊಳ್ಳಲಾಗಿತ್ತು.
ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲೇ ಮಹದಾಯಿ ನ್ಯಾಯಮಂಡಳಿಯಲ್ಲಿ ಅಂತಿಮ ವಿಚಾರಣೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಂದಿನ ನಡೆ ಏನಿರಬೇಕು ಎಂದು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನ ನಾಯಕರ ಸಭೆ ಕರೆದಿದ್ದಾರೆ.
ಸದ್ಯ ವಿಧಾನ ಮಂಡಲದ ಅಧಿವೇಶನವೂ ನಡೆಯುತ್ತಿದ್ದು, ಪ್ರಧಾನಿ ಮಧ್ಯಸ್ಥಿಕೆಗೆ ಸದನದಲ್ಲಿಯೇ ಸರ್ವಾನುಮತದ ನಿರ್ಣಯ ಕೈಗೊಳ್ಳಬೇಕೆ ಅಥವಾ ಬೇಡವೇಎನ್ನುವ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.