ಮಹದಾಯಿ:17ರಂದು ಸಭೆ
Team Udayavani, Nov 15, 2018, 6:25 AM IST
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯ ಮಂಡಳಿ ನೀಡಿರುವ ಆದೇಶ ಪಾಲನೆ ಮಾಡುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ನ. 17 ರಂದು ಸರ್ವ ಪಕ್ಷಗಳ ಮುಖಂಡರ ಸಭೆ ಕರೆದಿದ್ದಾರೆ.
ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿದಂತೆ ಮುಂಬೈ ಕರ್ನಾಟಕ ಭಾಗದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲು ಮಹದಾಯಿ ನ್ಯಾಯಮಂಡಳಿ ಕಳಸಾ ಮತ್ತು ಬಂಡೂರಿ ನಾಲೆಗಳ ಮೂಲಕ 5 ಟಿಎಂಸಿ ನೀರು ಮಲಪ್ರಭಾ ನದಿಗೆ ನೀರು ಹರಿಸಲು ಅನುಮತಿ ನೀಡಿದ್ದು, ಆ ನೀರು ಬಳಕೆ ಮಾಡಿಕೊಳ್ಳುವ ಕುರಿತು ಸರ್ವ ಪಕ್ಷಗಳ ಮುಖಂಡರ ಅಭಿಪ್ರಾಯ ಪಡೆಯಲು ಸಿಎಂ ತೀರ್ಮಾನಿಸಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ನ್ಯಾಯಮಂಡಳಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ರಾಜ್ಯಕ್ಕೆ 24 ಟಿಎಂಸಿ ನೀರು ನೀಡಬೇಕೆಂಬ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸರ್ಕಾರ ಇಟ್ಟಿದೆ.