Mahadevapura: ಅಡುಗೆ ಅನಿಲ ಸೋರಿಕೆ; ನಾಲ್ವರಿಗೆ ಗಾಯ
Team Udayavani, Sep 17, 2023, 1:09 PM IST
ಮಹದೇವಪುರ: ಮನೆಯಲ್ಲಿದ್ದ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ಅವಘಡ ಸಂಭವಿಸಿದ ಘಟನೆ ಮಾರತಹಳ್ಳಿಯ ಮುನೇಕೊಳಲು ಸಮೀಪದ ವಸಂತ ಲೇಔಟ್ ನಲ್ಲಿ ಸಂಭವಿಸಿದ್ದು, ಈ ದುರಂತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಸೆಲ್ವ ನಾಯಕ್, ಸುಧಾಬಾಯಿ, ಮನೋಜ್ (12ವ) ಸೇರಿದಂತೆ ಎಂಬುದಾಗಿ ತಿಳಿದು ಬಂದಿದ್ದು, ಮತ್ತೋರ್ವರ ಕುರಿತು ಮಾಹಿತಿ ಲಭಿಸಬೇಕಿದೆ. ಅಡುಗೆ ಅನಿಲ ಸೋರಿಕೆಯಾದ ಬೆಂಕಿಯಿಂದ ಈ ಅವಘಡ ಸಂಭವಿಸಿದೆ.
ವಸಂತ ಲೇಔಟ್ ನ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ನಾಲ್ವರಿಗೆ ಸುಟ್ಟ ಗಾಯಗಳಾಗಿವೆ. ಇವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ